AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಒಂದು ಗಂಟೆಯೊಳಗೆ ಪಂದ್ಯ ಮುಗಿಸುತ್ತೇವೆ: ಇಂಗ್ಲೆಂಡ್ ಕೋಚ್

IND vs ENG 3rd Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 387 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೂಡ ಮೊದಲ ಇನಿಂಗ್ಸ್​ನಲ್ಲಿ 387 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವನ್ನು 192 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

IND vs ENG: ಒಂದು ಗಂಟೆಯೊಳಗೆ ಪಂದ್ಯ ಮುಗಿಸುತ್ತೇವೆ: ಇಂಗ್ಲೆಂಡ್ ಕೋಚ್
England
ಝಾಹಿರ್ ಯೂಸುಫ್
|

Updated on: Jul 14, 2025 | 1:41 PM

Share

ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲೋದು ನಾವು. ಐದನೇ ದಿನದಾಟವನ್ನು ಕೇವಲ ಒಂದು ಗಂಟೆಯೊಳಗೆ ಮುಗಿಸುತ್ತೇವೆ. ಹೀಗಂದಿರುವುದು ಮತ್ಯಾರೂ ಅಲ್ಲ. ಇಂಗ್ಲೆಂಡ್ ತಂಡದ ಸಹಾಯಕ ಕೋಚ್ ಮಾರ್ಕಸ್ ಟ್ರೆಸ್ಕೊಥಿಕ್. ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಐದನೇ ದಿನದಾಟಕ್ಕೆ ಕಾಲಿಟ್ಟಿದೆ. ಐದನೇ ದಿನದಾಟದಲ್ಲಿ ಟೀಮ್ ಇಂಡಿಯಾ ಮುಂದೆ 135 ರನ್​ಗಳ ಗುರಿ ಇದೆ. ಅತ್ತ ಇಂಗ್ಲೆಂಡ್ ತಂಡವು ಈ ಪಂದ್ಯದಲ್ಲಿ ಗೆಲ್ಲಬೇಕಿದ್ದರೆ 6 ವಿಕೆಟ್​ಗಳನ್ನು ಕಬಳಿಸಬೇಕು.

ಈ ಆರು ವಿಕೆಟ್​​ಗಳನ್ನು ನಾವು ಐದನೇ ದಿನದಾಟದ ಮೊದಲ ಒಂದು ಗಂಟೆಯೊಳಗೆ ಕಬಳಿಸಲಿದ್ದೇವೆ ಎಂದು ಇಂಗ್ಲೆಂಡ್ ತಂಡದ ಸಹಾಯಕ ಕೋಚ್ ಮಾರ್ಕಸ್ ಟ್ರೆಸ್ಕೊಥಿಕ್ ಹೇಳಿದ್ದಾರೆ. ನಾಲ್ಕನೇ ದಿನದಾಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಟ್ರೆಸ್ಕೊಥಿಕ್, ಕೊನೆಯ ದಿನದಾಟವು ಬೌಲರ್​ಗಳಿಗೆ ಸಹಕಾರಿಯಾಗಲಿದೆ. ಅದರಂತೆ ಸೋಮವಾರವು ಲಾರ್ಡ್ಸ್​ ಪಿಚ್​ನಲ್ಲಿ ಬೌನ್ಸ್​ ಕಂಡು ಬರುವುದು ಖಚಿತ.

ನಮ್ಮಲ್ಲಿ ಬೌನ್ಸರ್ ಎಸೆಯಬಲ್ಲ ಬೌಲರ್​ಗಳಿರುವುದರಿಂದ ಇದರ ಸಂಪೂರ್ಣ ಲಾಭ ಪಡೆಯಲಿದ್ದಾರೆ. ಈ ಮೂಲಕ ಮೊದಲ ಒಂದು ಗಂಟೆಯೊಳಗೆ 6 ವಿಕೆಟ್​ಗಳನ್ನು ಕಬಳಿಸುವ ವಿಶ್ವಾಸವಿದೆ. ಅಲ್ಲದೆ ಐದನೇ ದಿನದಾಟದ ಮೊದಲ ಸೆಷನ್​ನಲ್ಲೇ ಪಂದ್ಯವನ್ನು ಮುಗಿಸಲಿದ್ದೇವೆ ಎಂದು ಮಾರ್ಕಸ್ ಟ್ರೆಸ್ಕೊಥಿಕ್ ಹೇಳಿದ್ದಾರೆ.

ಭಾರತ-ಇಂಗ್ಲೆಂಡ್ 3ನೇ ಟೆಸ್ಟ್ ಸಂಕ್ಷಿಪ್ತ ವಿವರ:

ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಜೋ ರೂಟ್ 104 ರನ್​ಗಳ ಭರ್ಜರಿ ಶತಕ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 387 ರನ್ ಕಲೆಹಾಕಿತು. ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ 5 ವಿಕೆಟ್ ಕಬಳಿಸಿ ಮಿಂಚಿದರು.

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100) ಭರ್ಜರಿ ಶತಕ ಬಾರಿಸಿದರು. ಈ ಶತಕದ ಸಹಾಯದೊಂದಿಗೆ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 387 ರನ್​ಗಳಿಸಲು ಶಕ್ತರಾದರು.

ಇನ್ನು ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಜೋ ರೂಟ್ 40 ರನ್​ ಗಳಿಸಿದರೆ, ಬೆನ್ ಸ್ಟೋಕ್ಸ್ 33 ರನ್ ಬಾರಿಸಿದರು. ಇನ್ನುಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 192 ರನ್​ಗಳಿ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ವಾಷಿಂಗ್ಟನ್ ಸುಂದರ್ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಇದೀಗ 193 ರನ್​ಗಳ ಗುರಿ ಬೆನ್ನತ್ತುತ್ತಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ ಯಶಸ್ವಿ ಜೈಸ್ವಾಲ್ (0), ಕರುಣ್ ನಾಯರ್ (14), ಶುಭ್​ಮನ್ ಗಿಲ್ (6) ಹಾಗೂ ಆಕಾಶ್ ದೀಪ್ (1) ವಿಕೆಟ್ ಕಳೆದುಕೊಂಡು 58 ರನ್ ಕಲೆಹಾಕಿದೆ.

ಇದನ್ನೂ ಓದಿ: ವಿಶ್ವ ದಾಖಲೆ… ಮುಂಬೈ ಇಂಡಿಯನ್ಸ್​ ಮುಡಿಗೆ 13ನೇ ಟ್ರೋಫಿ

ಸದ್ಯ ಕ್ರೀಸ್​ನಲ್ಲಿ 33 ರನ್​ಗಳಿಸಿರುವ ಕೆಎಲ್ ರಾಹುಲ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ರಿಷಭ್ ಪಂತ್ ಜೊತೆ ಐದನೇ ದಿನದಾಟದಲ್ಲಿ ಇನಿಂಗ್ಸ್​ ಮುಂದುವರೆಸಲಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 135 ರನ್​ಗಳಿಸಿದರೆ ಲಾರ್ಡ್ಸ್​ ಮೈದಾನದಲ್ಲಿ ಯತಿಹಾಸಿಕ ಗೆಲುವವನ್ನು ತನ್ನದಾಗಿಸಿಕೊಳ್ಳಬಹುದು.

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್