AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಬುಮ್ರಾ ಬದಲಿಗೆ ಕಣಕ್ಕಿಳಿಯುವವರು ಯಾರು?

India vs England Test Series: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಸೋಲನುಭವಿಸಿದೆ. ಇನ್ನು ಉಭಯ ತಂಡಗಳ ನಡುವಣ ಎರಡನೇ ಪಂದ್ಯವು ಜುಲೈ 2 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಎಡ್ಜ್ ಬಾಸ್ಟನ್‌ ಸ್ಟೇಡಿಯಂ ಆತಿಥ್ಯವಹಿಸಲಿದೆ.

IND vs ENG: ಬುಮ್ರಾ ಬದಲಿಗೆ ಕಣಕ್ಕಿಳಿಯುವವರು ಯಾರು?
Jasprit Bumrah
ಝಾಹಿರ್ ಯೂಸುಫ್
|

Updated on: Jun 28, 2025 | 8:31 AM

Share

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಅನುಮಾನ. ಎಡ್ಜ್​ಬಾಸ್ಟನ್​ನಲ್ಲಿ ನಡೆಯಲಿರುವ ದ್ಬಿತೀಯ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ವೇಗಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ. ಹೀಗಾಗಿ ಬರ್ಮಿಂಗ್​​​ಹ್ಯಾಮ್​ನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಬುಮ್ರಾ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಇತ್ತ ಜಸ್​ಪ್ರೀತ್ ಬುಮ್ರಾ ಹೊರಗುಳಿದರೆ, ಅವರ ಬದಲಿಗೆ ಕಣಕ್ಕಿಳಿಯುವವರು ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತಮ ಅರ್ಷದೀಪ್ ಸಿಂಗ್. ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಅಭ್ಯಾಸದ ವೇಳೆ ಎಡಗೈ ವೇಗಿ ಅರ್ಷದೀಪ್ ನೆಟ್ಸ್​ನಲ್ಲಿ ತುಂಬಾ ಹೊತ್ತು ಬೆವರಿಳಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಮೇಲ್ವಿಚಾರಣೆಯಲ್ಲಿ ಎಂಬುದು ವಿಶೇಷ.  ಹೀಗಾಗಿ ಎಡ್ಜ್​ಬಾಸ್ಟನ್ ಟೆಸ್ಟ್ ಪಂದ್ಯದ ಮೂಲಕ ಅರ್ಷದೀಪ್ ಸಿಂಗ್ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.

ಮತ್ತೊಂದೆಡೆ ಅರ್ಷದೀಪ್ ಸಿಂಗ್ ಜೊತೆ ಆಕಾಶ್ ದೀಪ್ ಕೂಡ ಪೈಪೋಟಿಯಲ್ಲಿದ್ದಾರೆ. ಅವರು ಸಹ ಶುಕ್ರವಾರ ನಡೆದ ಅಭ್ಯಾಸದ ವೇಳೆ ಗಂಟೆಗಳ ಕಾಲ ಬೌಲಿಂಗ್ ಅಭ್ಯಾಸ ಮಾಡಿದ್ದಾರೆ. ಇತ್ತ ಟೀಮ್ ಇಂಡಿಯಾದ ಇಬ್ಬರು ಬೌಲರ್​ಗಳು ಗಂಟೆಗಳ ಕಾಲ ನೆಟ್ಸ್​ನಲ್ಲಿ ಬೆವರಿಳಿಸಿರುವ ಕಾರಣ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​​ನಲ್ಲಿ ಬದಲಾವಣೆ ಕಂಡು ಬರುವುದು ಖಚಿತ.

ಅದರಂತೆ ಜಸ್​ಪ್ರೀತ್ ಬುಮ್ರಾ ಬದಲಿಗೆ ಅರ್ಷದೀಪ್ ಸಿಂಗ್ ಅಥವಾ ಆಕಾಶ್ ದೀಪ್ ಸ್ಥಾನ ಪಡೆಯಬಹುದು. ಇಲ್ಲ, ಪ್ರಸಿದ್ಧ್ ಕೃಷ್ಣ ಅವರನ್ನು ದ್ವಿತೀಯ ಪಂದ್ಯದಿಂದ ಕೈ ಬಿಟ್ಟು ಅವರಿಗೆ ಬದಲಿಗೆ ಆಕಾಶ್ ದೀಪ್​ಗೆ ಅವಕಾಶ ನೀಡಬಹುದು.

ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿಯೇಕೆ?

ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದರು. ಇದೀಗ ಫಿಟ್​ನೆಸ್ ಸಾಧಿಸಿರೂ, ಅವರ ಮೇಲೆ ಒತ್ತಡ ಹಾಕದಿರಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಬುಮ್ರಾ ಅವರನ್ನು ಮೂರು ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಈಗಾಗಲೇ ಹೆಡಿಂಗ್ಲೆಯಲ್ಲಿ ಮೊದಲ ಟೆಸ್ಟ್ ಪಂದ್ಯವಾಡಿರುವ ಬುಮ್ರಾ ಇದೀಗ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚು. ಏಕೆಂದರೆ ಭಾರತ-ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ನಡೆಯುವುದು ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ. ಈ ಮೈದಾನವು ಬೌಲರ್​ಗಳಿಗೆ ಸಹಕಾರಿ. ಹೀಗಾಗಿ ಒಂದು ಪಂದ್ಯದ ವೇಳೆ ವಿಶ್ರಾಂತಿ ನೀಡಿ ಬುಮ್ರಾ ಅವರನ್ನು ಮೂರನೇ ಮ್ಯಾಚ್​ನಲ್ಲಿ ಕಣಕ್ಕಿಳಿಸಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಪ್ಲ್ಯಾನ್ ರೂಪಿಸಿರುವ ಸಾಧ್ಯತೆಯಿದೆ.

ಇದನ್ನೂ ಓದಿ: 6,6,6,6,6,6,6,6: ಪೂರನ್ ಪವರ್​ಫುಲ್ ಶತಕ

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​