AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಬುಮ್ರಾ ಬದಲಿಗೆ ಕಣಕ್ಕಿಳಿಯುವವರು ಯಾರು?

India vs England Test Series: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಸೋಲನುಭವಿಸಿದೆ. ಇನ್ನು ಉಭಯ ತಂಡಗಳ ನಡುವಣ ಎರಡನೇ ಪಂದ್ಯವು ಜುಲೈ 2 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಎಡ್ಜ್ ಬಾಸ್ಟನ್‌ ಸ್ಟೇಡಿಯಂ ಆತಿಥ್ಯವಹಿಸಲಿದೆ.

IND vs ENG: ಬುಮ್ರಾ ಬದಲಿಗೆ ಕಣಕ್ಕಿಳಿಯುವವರು ಯಾರು?
Jasprit Bumrah
ಝಾಹಿರ್ ಯೂಸುಫ್
|

Updated on: Jun 28, 2025 | 8:31 AM

Share

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಅನುಮಾನ. ಎಡ್ಜ್​ಬಾಸ್ಟನ್​ನಲ್ಲಿ ನಡೆಯಲಿರುವ ದ್ಬಿತೀಯ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ವೇಗಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ. ಹೀಗಾಗಿ ಬರ್ಮಿಂಗ್​​​ಹ್ಯಾಮ್​ನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಬುಮ್ರಾ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಇತ್ತ ಜಸ್​ಪ್ರೀತ್ ಬುಮ್ರಾ ಹೊರಗುಳಿದರೆ, ಅವರ ಬದಲಿಗೆ ಕಣಕ್ಕಿಳಿಯುವವರು ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತಮ ಅರ್ಷದೀಪ್ ಸಿಂಗ್. ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಅಭ್ಯಾಸದ ವೇಳೆ ಎಡಗೈ ವೇಗಿ ಅರ್ಷದೀಪ್ ನೆಟ್ಸ್​ನಲ್ಲಿ ತುಂಬಾ ಹೊತ್ತು ಬೆವರಿಳಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಮೇಲ್ವಿಚಾರಣೆಯಲ್ಲಿ ಎಂಬುದು ವಿಶೇಷ.  ಹೀಗಾಗಿ ಎಡ್ಜ್​ಬಾಸ್ಟನ್ ಟೆಸ್ಟ್ ಪಂದ್ಯದ ಮೂಲಕ ಅರ್ಷದೀಪ್ ಸಿಂಗ್ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.

ಮತ್ತೊಂದೆಡೆ ಅರ್ಷದೀಪ್ ಸಿಂಗ್ ಜೊತೆ ಆಕಾಶ್ ದೀಪ್ ಕೂಡ ಪೈಪೋಟಿಯಲ್ಲಿದ್ದಾರೆ. ಅವರು ಸಹ ಶುಕ್ರವಾರ ನಡೆದ ಅಭ್ಯಾಸದ ವೇಳೆ ಗಂಟೆಗಳ ಕಾಲ ಬೌಲಿಂಗ್ ಅಭ್ಯಾಸ ಮಾಡಿದ್ದಾರೆ. ಇತ್ತ ಟೀಮ್ ಇಂಡಿಯಾದ ಇಬ್ಬರು ಬೌಲರ್​ಗಳು ಗಂಟೆಗಳ ಕಾಲ ನೆಟ್ಸ್​ನಲ್ಲಿ ಬೆವರಿಳಿಸಿರುವ ಕಾರಣ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​​ನಲ್ಲಿ ಬದಲಾವಣೆ ಕಂಡು ಬರುವುದು ಖಚಿತ.

ಅದರಂತೆ ಜಸ್​ಪ್ರೀತ್ ಬುಮ್ರಾ ಬದಲಿಗೆ ಅರ್ಷದೀಪ್ ಸಿಂಗ್ ಅಥವಾ ಆಕಾಶ್ ದೀಪ್ ಸ್ಥಾನ ಪಡೆಯಬಹುದು. ಇಲ್ಲ, ಪ್ರಸಿದ್ಧ್ ಕೃಷ್ಣ ಅವರನ್ನು ದ್ವಿತೀಯ ಪಂದ್ಯದಿಂದ ಕೈ ಬಿಟ್ಟು ಅವರಿಗೆ ಬದಲಿಗೆ ಆಕಾಶ್ ದೀಪ್​ಗೆ ಅವಕಾಶ ನೀಡಬಹುದು.

ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿಯೇಕೆ?

ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದರು. ಇದೀಗ ಫಿಟ್​ನೆಸ್ ಸಾಧಿಸಿರೂ, ಅವರ ಮೇಲೆ ಒತ್ತಡ ಹಾಕದಿರಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಬುಮ್ರಾ ಅವರನ್ನು ಮೂರು ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಈಗಾಗಲೇ ಹೆಡಿಂಗ್ಲೆಯಲ್ಲಿ ಮೊದಲ ಟೆಸ್ಟ್ ಪಂದ್ಯವಾಡಿರುವ ಬುಮ್ರಾ ಇದೀಗ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚು. ಏಕೆಂದರೆ ಭಾರತ-ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ನಡೆಯುವುದು ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ. ಈ ಮೈದಾನವು ಬೌಲರ್​ಗಳಿಗೆ ಸಹಕಾರಿ. ಹೀಗಾಗಿ ಒಂದು ಪಂದ್ಯದ ವೇಳೆ ವಿಶ್ರಾಂತಿ ನೀಡಿ ಬುಮ್ರಾ ಅವರನ್ನು ಮೂರನೇ ಮ್ಯಾಚ್​ನಲ್ಲಿ ಕಣಕ್ಕಿಳಿಸಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಪ್ಲ್ಯಾನ್ ರೂಪಿಸಿರುವ ಸಾಧ್ಯತೆಯಿದೆ.

ಇದನ್ನೂ ಓದಿ: 6,6,6,6,6,6,6,6: ಪೂರನ್ ಪವರ್​ಫುಲ್ ಶತಕ

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ