AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾ ಮುಂದಿರುವುದು ಇದೊಂದೇ ಆಯ್ಕೆ

India vs England 4th Test: ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್​ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 358 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ಜೋ ರೂಟ್ ಅವರ ಭರ್ಜರಿ ಶತಕದೊಂದಿಗೆ 3ನೇ ದಿನದಾಟದ ಅಂತ್ಯಕ್ಕೆ 7 ವಿಕೆಟ್​​ ಕಳೆದುಕೊಂಡು 544 ರನ್​ಗಳಿಸಿದೆ.

IND vs ENG: ಟೀಮ್ ಇಂಡಿಯಾ ಮುಂದಿರುವುದು ಇದೊಂದೇ ಆಯ್ಕೆ
Team India
ಝಾಹಿರ್ ಯೂಸುಫ್
|

Updated on: Jul 26, 2025 | 1:03 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯವು 4ನೇ ದಿನದಾಟಕ್ಕೆ ಕಾಲಿಟ್ಟಿದೆ. ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆನ್ ಸ್ಟೋಕ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (58), ಸಾಯಿ ಸುದರ್ಶನ್ (61) ಹಾಗೂ ರಿಷಭ್ ಪಂತ್ (54) ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನೊಂದಿಗೆ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 358 ರನ್ ಕಲೆಹಾಕಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಇಂಗ್ಲೆಂಡ್ ಪರ ಝಾಕ್ ಕ್ರಾಲಿ (84), ಬೆನ್ ಡಕೆಟ್ (94) ಭರ್ಜರಿ ಬ್ಯಾಟಿಂಗ್ ಬ್ಯಾಟಿಂಗ್ ಪ್ರದರ್ಶಿಸಿದರು. ಆ ಬಳಿಕ ಬಂದ ಒಲೀ ಪೋಪ್ 71 ರನ್​ಗಳ ಕೊಡುಗೆ ನೀಡಿದರು. ಇನ್ನು ಜೋ ರೂಟ್ 150 ರನ್​ಗಳ ಭರ್ಜರಿ ಇನಿಂಗ್ಸ್ ಆಡಿದರು. ಪರಿಣಾಮ ಇಂಗ್ಲೆಂಡ್ ತಂಡದ ಪ್ರಥಮ ಇನಿಂಗ್ಸ್ ಸ್ಕೋರ್ 500 ರನ್​ಗಳ ಗಡಿದಾಟಿದೆ.

ಅಲ್ಲದೆ ಮೂರನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡವು 7 ವಿಕೆಟ್ ಕಳೆದುಕೊಂಡು 544 ರನ್​ಗಳಿಸಿದೆ. ಅತ್ತ ಕ್ರೀಸ್​ನಲ್ಲಿ 77 ರನ್ ಬಾರಿಸಿರುವ ಬೆನ್ ಸ್ಟೋಕ್ಸ್ ಹಾಗೂ ಆಲ್​ರೌಂಡರ್ ಲಿಯಾನ್ ಡಾಸನ್ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಅದರಂತೆ ನಾಲ್ಕನೇ ದಿನದಾಟದಲ್ಲಿ ಸ್ಟೋಕ್ಸ್ ಹಾಗೂ ಡಾಸನ್ ಇನಿಂಗ್ಸ್ ಮುಂದುವರೆಸಲಿದ್ದಾರೆ.

3 ವಿಕೆಟ್​ಗಳ ಇನಿಂಗ್ಸ್​:

ಇಂಗ್ಲೆಂಡ್ ತಂಡದ ಮೊದಲ ಇನಿಂಗ್ಸ್ ಕೊನೆಗೊಳಿಸಲು ಟೀಮ್ ಇಂಡಿಯಾ ಇನ್ನೂ ಮೂರು ವಿಕೆಟ್​ಗಳನ್ನು ಪಡೆಯಲೇಬೇಕು. ಅದರಲ್ಲೂ ಬೆನ್ ಸ್ಟೋಕ್ಸ್ ಹಾಗೂ ಲಿಯಾಮ್ ಡಾಸನ್ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದಾರೆ. ಹೀಗಾಗಿ ಇಂಗ್ಲೆಂಡ್ ತಂಡವು ಮೊದಲೆರಡು ಸೆಷನ್​ಗಳ ಮೂಲಕ ಬೃಹತ್ ಮೊತ್ತ ಕಲೆಹಾಕಲು ಯತ್ನಿಸುವುದು ಖಚಿತ.

ಈ ಮೂಲಕ 186 ರನ್​ಗಳ ಮುನ್ನಡೆ ಹೊಂದಿರುವ ಇಂಗ್ಲೆಂಡ್ ತಂಡವು ಕನಿಷ್ಠ 250 ರನ್​ಗಳ ಮುನ್ನಡೆ ಪಡೆಯುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ. ಅಂದರೆ ಇಂಗ್ಲೆಂಡ್ 600 ರನ್​ ಕಲೆಹಾಕದೇ ಡಿಕ್ಲೇರ್ ಘೋಷಿಸುವ ಸಾಧ್ಯತೆಯಿಲ್ಲ.

ಟೀಮ್ ಇಂಡಿಯಾ ಮುಂದಿರುವುದು ಒಂದೇ ಆಯ್ಕೆ:

ಇಂಗ್ಲೆಂಡ್ ತಂಡವು ಕನಿಷ್ಠ 200 ರನ್​ಗಳ ಮುನ್ನಡೆ ಸಾಧಿಸಿದರೆ, ಟೀಮ್ ಇಂಡಿಯಾ ಮುಂದಿರುವುದು ಡ್ರಾ ಆಯ್ಕೆ ಮಾತ್ರ. ಏಕೆಂದರೆ ದ್ವಿತೀಯ ಇನಿಂಗ್ಸ್​ನ ಕೊನೆಯ 2 ಸೆಷನ್​ನಲ್ಲಿ ಟೀಮ್ ಇಂಡಿಯಾ ಬ್ಯಾಟ್ ಬೀಸಿದರೂ 200 ರಿಂದ 300 ರನ್​ಗಳಿಸಲಷ್ಟೇ ಶಕ್ತರಾಗಲಿದ್ದಾರೆ. ಅಲ್ಲದೆ ಐದನೇ ದಿನದಾಟದಲ್ಲೂ ಬ್ಯಾಟಿಂಗ್ ಕಾಯ್ದುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಲಿದೆ.

ಒಂದು ವೇಳೆ ಟೀಮ್ ಇಂಡಿಯಾ ಆಕ್ರಮಣಕಾರಿ ಆಟಕ್ಕೆ ಮುಂದಾಗಿ ದ್ವಿತೀಯ ಇನಿಂಗ್ಸ್​ನಲ್ಲಿ 350 ರನ್​ಗಳಿಸಿದರೂ, ಇಂಗ್ಲೆಂಡ್ ತಂಡಕ್ಕೆ ಸಿಗುವ ಗುರಿ ಕೇವಲ 150 ರನ್​ಗಳು ಮಾತ್ರ. ಅಂದರೆ ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ 200 ರನ್ ಮುನ್ನಡೆ ಪಡೆದರೆ, ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ತಂಡವು 350 ರನ್​ಗಳಿಸಿದರೂ ಆತಿಥೇಯ ಪಡೆ ಕಡಿಮೆ ಮೊತ್ತದ ಟಾರ್ಗೆಟ್ ಪಡೆಯಲಿದೆ. ಹೀಗಾಗಿ ಭಾರತ ತಂಡವು ಈ ಪಂದ್ಯವನ್ನು ಡ್ರಾನತ್ತ ಕೊಂಡೊಯ್ಯಬೇಕಿರುವುದು ಅನಿವಾರ್ಯ.

ಇತಿಹಾಸದ ಅಂಕಿ ಅಂಶಗಳು:

ಭಾರತ ತಂಡವು ಟೆಸ್ಟ್ ಕ್ರಿಕೆಟ್​ನ ಮೊದಲ ಇನಿಂಗ್ಸ್​ನಲ್ಲಿ​ 127 ಬಾರಿ 150+ ರನ್​ಗಳ ಹಿನ್ನಡೆ ಅನುಭವಿಸಿದೆ. ಈ ವೇಳೆ ಟೀಮ್ ಇಂಡಿಯಾ 93 ಬಾರಿ ಸೋಲನುಭವಿಸಿದೆ. ಇನ್ನು 32 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಹಾಗೆಯೇ ಗೆದ್ದಿರುವುದು ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ. ಅಂದರೆ 150+ ರನ್​ಗಳ ಹಿನ್ನಡೆ ಅನುಭವಿಸಿ ಟೀಮ್ ಇಂಡಿಯಾ ಸೋತಿದ್ದೇ ಹೆಚ್ಚು.

ಇದನ್ನೂ ಓದಿ: 37 ಎಸೆತಗಳಲ್ಲಿ ಶತಕ: ಟಿಮ್ ಡೇವಿಡ್ ಆರ್ಭಟದ ವಿಡಿಯೋ ಇಲ್ಲಿದೆ

ಈಗಾಗಲೇ ಇಂಗ್ಲೆಂಡ್ ತಂಡ 186 ರನ್​ಗಳ ಮುನ್ನಡೆ ಹೊಂದಿದೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ಸಾಧ್ಯತೆ ತುಂಬಾ ಕ್ಷೀಣ. ಇದೇ ಕಾರಣದಿಂದಾಗಿ ಭಾರತ ತಂಡವು ಗೆಲ್ಲುವ ಪ್ರಯತ್ನಕ್ಕಿಂತ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ಯತ್ನಿಸಬೇಕಿದೆ. ಈ ಮೂಲಕ ಕೊನೆಯ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು ಡ್ರಾನಲ್ಲಿ ಅಂತ್ಯಗೊಳಿಸಬಹುದು.

Follow Us
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ