AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೆಸ್ಟ್ ಸರಣಿಗೆ ಕೊಹ್ಲಿ ಪಡೆ ರೆಡಿ.. ಕೊರೊನಾ ಗೆದ್ದು ಟೀಂ ಇಂಡಿಯಾ ಸೇರಿಕೊಂಡ ಇಬ್ಬರು ಕ್ರಿಕೆಟಿಗರು

IND vs ENG: ಮೂವರ ಕೊರೊನಾ ವರದಿ ನೆಗೆಟಿವ್ ಆಗಿದ್ದರೂ, ಯುಕೆ ಸರ್ಕಾರದ ಹತ್ತು ದಿನಗಳ ಸಂಪರ್ಕತಡೆಯ ನಿಯಮಗಳನ್ನು ಪೂರೈಸುವುದು ಕಡ್ಡಾಯವಾಗಿತ್ತು.

IND vs ENG: ಟೆಸ್ಟ್ ಸರಣಿಗೆ ಕೊಹ್ಲಿ ಪಡೆ ರೆಡಿ.. ಕೊರೊನಾ ಗೆದ್ದು ಟೀಂ ಇಂಡಿಯಾ ಸೇರಿಕೊಂಡ ಇಬ್ಬರು ಕ್ರಿಕೆಟಿಗರು
ಟೀಂ ಇಂಡಿಯಾ
TV9 Web
| Edited By: |

Updated on: Jul 24, 2021 | 4:38 PM

Share

ಡರ್ಹಾಮ್ ಕೌಂಟಿ ಕ್ರಿಕೆಟ್ ಕ್ಲಬ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಮುಂಬರುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತೀಯ ತಂಡ ತಯಾರಿ ನಡೆಸುತ್ತಿದೆ. ಏತನ್ಮಧ್ಯೆ, ವಿಕೆಟ್ ಕೀಪರ್-ಬ್ಯಾಟ್ಸ್ಮನ್ ವೃದ್ಧಿಮಾನ್ ಸಹಾ, ಸ್ಟ್ಯಾಂಡ್ಬೈ ಓಪನರ್ ಅಭಿಮನ್ಯು ಈಶ್ವರನ್ ಮತ್ತು ಬೌಲಿಂಗ್ ಕೋಚ್ ಭಾರತ್ ಅರುಣ್ ಕೂಡ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಅದೇ ಸಮಯದಲ್ಲಿ, ಗಾಯಗೊಂಡ ಅವೇಶ್ ಖಾನ್ ಮತ್ತು ವಾಷಿಂಗ್ಟನ್ ಸುಂದರ್ ಶೀಘ್ರದಲ್ಲೇ ತಂಡದಿಂದ ಹೊರಗುಳಿಯಲಿದ್ದಾರೆ. ಅವರನ್ನು ಬದಲಿಸಲು, ಹೊಸ ಮುಖಗಳನ್ನು ಬದಲಿಯಾಗಿ ಕಳುಹಿಸಲು ಬಿಸಿಸಿಐ ತಯಾರಿ ನಡೆಸುತ್ತಿದೆ.

ವೃದ್ಧಿಮಾನ್ ಸಹಾ, ಬೌಲಿಂಗ್ ಕೋಚ್ ಭಾರತ್ ಅರುಣ್ ಮತ್ತು ಸ್ಟ್ಯಾಂಡ್‌ಬೈ ಓಪನರ್ ಅಭಿಮನ್ಯು ಈಶ್ವರನ್ ಅವರು ಕಳೆದ ವಾರ ಕೋವಿಡ್‌ ಸೋಂಕಿಗೆ ತುತ್ತಾದ ಬಳಿಕ ಟೀಮ್ ಇಂಡಿಯಾದ ಥ್ರೋಡೌನ್ ತಜ್ಞ ದಯಾನಂದ್ ಗರಾನಿ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಅಂದಿನಿಂದ ಈ ಮೂವರು ಸಂಪರ್ಕತಡೆಯಲ್ಲಿದ್ದರು.

ಕೊರೊನಾ ನಿಯಮಗಳಿಂದಾಗಿ ಸಂಪರ್ಕತಡೆ ಮೂವರ ಕೊರೊನಾ ವರದಿ ನೆಗೆಟಿವ್ ಆಗಿದ್ದರೂ, ಯುಕೆ ಸರ್ಕಾರದ ಹತ್ತು ದಿನಗಳ ಸಂಪರ್ಕತಡೆಯ ನಿಯಮಗಳನ್ನು ಪೂರೈಸುವುದು ಕಡ್ಡಾಯವಾಗಿತ್ತು. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಕೂಡ ಕೊರನಾವನ್ನು ಗೆದ್ದು ತಂಡವನ್ನು ಸೇರಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿದ್ದರಿಂದ ಪಂತ್ ಈ ತಿಂಗಳ ಆರಂಭದಲ್ಲಿ ಟೀಮ್ ಇಂಡಿಯಾದೊಂದಿಗೆ ಪ್ರಯಾಣಿಸಲಿಲ್ಲ. ಕೋವಿಡ್ ಆರ್ಟಿ-ಪಿಸಿಆರ್ ಪರೀಕ್ಷೆಯ ನಂತರ, ಬುಧವಾರ ಭಾರತೀಯ ದಳಕ್ಕೆ ಸೇರಲು ಯೋಗ್ಯವೆಂದು ಪರಿಗಣಿಸಲಾಗಿದೆ.

ಸಹಾ ಮತ್ತು ಪಂತ್ ಅಭ್ಯಾಸ ಪಂದ್ಯವನ್ನು ಆಡಲಿಲ್ಲ ಪಂತ್ ಮತ್ತು ವೃದ್ಧಿಮಾನ್ ಸಹಾ ಲಭ್ಯವಿಲ್ಲದ ಕಾರಣ, ಕೆಎಲ್ ರಾಹುಲ್ ಡರ್ಹಾಮ್ನಲ್ಲಿ ಕೌಂಟಿ ಸೆಲೆಕ್ಟ್ ಇಲೆವೆನ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಆಡಬೇಕಾಯಿತು. ಇಂಗ್ಲೆಂಡ್ ಪ್ರವಾಸದ ವೇಳೆ ಭಾರತ ಆಟಗಾರರಿಗೆ ಗಾಯದ ಸಮಸ್ಯೆ ಕಾಡುತ್ತಿದೆ. ಜೊತೆಗೆ ಅಭ್ಯಾಸ ಪಂದ್ಯದಲ್ಲಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಉಪನಾಯಕ ಅಜಿಂಕ್ಯ ರಹಾನೆ ಕೂಡ ಆಡಲಿಲ್ಲ.

ಗಾಯಗೊಂಡ ನಂತರ ಸರಣಿಗೆ ಅಲಭ್ಯರಾಗಿರುವ ಆಟಗಾರರ ಬದಲಿಗೆ ಬಿಸಿಸಿಐಗೆ ಬದಲಿ ಆಟಗಾರರನ್ನು ಕಳುಹಿಸುವಂತೆ ತಂಡ ಒತ್ತಾಯಿಸಿದೆ. ಮೂಲಗಳ ಸುದ್ದಿಯ ಪ್ರಕಾರ, ಭಾರತೀಯ ತಂಡದ ಆಡಳಿತ ಮಂಡಳಿಯು ಅವೇಶ್ ಖಾನ್, ವಾಷಿಂಗ್ಟನ್ ಸುಂದರ್ ಮತ್ತು ಶುಬ್ಮನ್ ಗಿಲ್ ಅವರನ್ನು ಬದಲಿಸಲು ಕೋರಿದೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?