Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಟಾಸ್ ಗೆದ್ದ ಭಾರತ, ಇಬ್ಬರ ಪದಾರ್ಪಣೆ; ಹೀಗಿವೆ ಉಭಯ ತಂಡಗಳು

IND vs IRE: ಡಬ್ಲಿನ್​ನಲ್ಲಿ ನಡೆಯುತ್ತಿರುವ ಐರ್ಲೆಂಡ್ ಹಾಗೂ ಭಾರತ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಪಂದ್ಯಕ್ಕೆ ಮಳೆ ಭೀತಿ ಇರುವ ಕಾರಣದಿಂದಾಗಿ ಬುಮ್ರಾ ಆಯ್ಕೆ ಟೀಂ ಇಂಡಿಯಾಕ್ಕೆ ಲಾಭ ತಂದುಕೊಡಲಿದೆ.

IND vs IRE: ಟಾಸ್ ಗೆದ್ದ ಭಾರತ, ಇಬ್ಬರ ಪದಾರ್ಪಣೆ; ಹೀಗಿವೆ ಉಭಯ ತಂಡಗಳು
ಭಾರತ- ಐರ್ಲೆಂಡ್
Follow us
ಪೃಥ್ವಿಶಂಕರ
|

Updated on:Aug 18, 2023 | 7:32 PM

ಡಬ್ಲಿನ್​ನಲ್ಲಿ ನಡೆಯುತ್ತಿರುವ ಐರ್ಲೆಂಡ್ ಹಾಗೂ ಭಾರತ (India vs Ireland) ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ (Jasprit Bumrah) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಪಂದ್ಯಕ್ಕೆ ಮಳೆ ಭೀತಿ ಇರುವ ಕಾರಣದಿಂದಾಗಿ ಬುಮ್ರಾ ಆಯ್ಕೆ ಟೀಂ ಇಂಡಿಯಾಕ್ಕೆ (Team India) ಲಾಭ ತಂದುಕೊಡಲಿದೆ. ಇನ್ನು ಹಿರಿಯರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಐರ್ಲೆಂಡ್ ಪ್ರವಾಸ ಮಾಡಿದೆ. ಹೀಗಾಗಿ ಹಲವು ಯುವ ಆಟಗಾರರಿಗೆ ಈ ಸರಣಿಯಲ್ಲಿ ಪದಾರ್ಪಣೆ ಅವಕಾಶ ಸಿಗಲಿದೆ ಎಂದು ಈ ಹಿಂದೆಯೇ ಹೇಳಲಾಗಿತ್ತು. ಅದರ ಪ್ರಕಾರ ಇದೀಗ ಟೀಂ ಇಂಡಿಯಾ ಪರ ಇಬ್ಬರು ಆಟಗಾರರು ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಲಿದ್ದಾರೆ. ಅವರಲ್ಲಿ ಒಬ್ಬರು ಗೇಮ್ ಫಿನಿಶರ್ ಎನಿಸಿಕೊಂಡಿರುವ ರಿಂಕು ಸಿಂಗ್ (Rinku Singh) ಆಗಿದ್ದರೆ, ಇನ್ನೊಬ್ಬರಾಗಿ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh Krishna) ಕೂಡ ಚೊಚ್ಚಲ ಟಿ20 ಪಂದ್ಯವನ್ನಾಡಲು ಸಜ್ಜಾಗಿದ್ದಾರೆ.

ಒಂದು ವರ್ಷದ ನಂತರ ತಂಡಕ್ಕೆ

ಐರ್ಲೆಂಡ್‌ನ ಮಲೆಹೈಡ್‌ನಲ್ಲಿ ನಡೆಯುತ್ತಿರುವ ಈ ಸರಣಿಯ ಮೂಲಕ ಜಸ್ಪ್ರೀತ್ ಬುಮ್ರಾ ಮತ್ತು ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾಕ್ಕೆ ಮರಳುತ್ತಿದ್ದಾರೆ. ಈ ಇಬ್ಬರೂ ವೇಗದ ಬೌಲರ್‌ಗಳು ಸುಮಾರು ಒಂದು ವರ್ಷದ ನಂತರ ಟೀಂ ಇಂಡಿಯಾಕ್ಕೆ ಮರಳಿದ್ದಾರೆ.  ಅಲ್ಲದೆ ಇದೇ ಪಂದ್ಯದ ಮೂಲಕ ಪ್ರಸಿದ್ಧ್ ಕೃಷ್ಣ ಟಿ20 ತಂಡಕ್ಕೆ ಚೊಚ್ಚಲ ಅವಕಾಶ ಪಡೆದಿದ್ದರೆ, ರಿಂಕು ಸಿಂಗ್ ಕೂಡ ಪದಾರ್ಪಣೆ ಮಾಡುತ್ತಿದ್ದಾರೆ.

ಉಭಯ ತಂಡಗಳು ಹೀಗಿವೆ

ಭಾರತ ತಂಡ: ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಜಸ್ಪ್ರೀತ್ ಬುಮ್ರಾ (ನಾಯಕ), ರವಿ ಬಿಷ್ಣೋಯ್.

ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಮಾರ್ಕ್ ಅಡೇರ್, ಬೆನ್ ವೈಟ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ಕ್ರೇಗ್ ಯಂಗ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:14 pm, Fri, 18 August 23

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ