AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE 1st T20: ಸಂಜುಗೆ ಕೊನೆಯ ಅವಕಾಶ? ಐರ್ಲೆಂಡ್ ವಿರುದ್ಧ ಭಾರತ ಸಂಭಾವ್ಯ ತಂಡ ಹೀಗಿದೆ

IND vs IRE 1st T20: ಏಷ್ಯಾಕಪ್​ಗೂ ಮುನ್ನ ಟೀಂ ಇಂಡಿಯಾ ಐರ್ಲೆಂಡ್ ಪ್ರವಾಸ ಮಾಡಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ಅನುಭವಿ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಬದಲಾಗಿ ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ.

IND vs IRE 1st T20: ಸಂಜುಗೆ ಕೊನೆಯ ಅವಕಾಶ? ಐರ್ಲೆಂಡ್ ವಿರುದ್ಧ ಭಾರತ ಸಂಭಾವ್ಯ ತಂಡ ಹೀಗಿದೆ
ಟೀಂ ಇಂಡಿಯಾImage Credit source: insidesport
ಪೃಥ್ವಿಶಂಕರ
|

Updated on: Aug 17, 2023 | 8:07 AM

Share

ಏಷ್ಯಾಕಪ್​ಗೂ (Asia Cup 2023) ಮುನ್ನ ಟೀಂ ಇಂಡಿಯಾ, ಐರ್ಲೆಂಡ್ ಪ್ರವಾಸ (India vs Ireland) ಮಾಡಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ (Team India) ಐರ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ಅನುಭವಿ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಬದಲಾಗಿ ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ. ಅಲ್ಲದೆ, ಈ ಟಿ20 ಸರಣಿಯ ಸಂದರ್ಭದಲ್ಲಿ ಕೆಲವು ಆಟಗಾರರು ಟೀಂ ಇಂಡಿಯಾ ಪುನರಾಗಮನ ಮಾಡಿದ್ದು ತಂಡದ ನಾಯಕತ್ವವನ್ನು ಜಸ್ಪ್ರೀತ್ ಬುಮ್ರಾಗೆ (Jasprit Bumrah) ನೀಡಲಾಗಿದೆ. ವೇಗಿಯೊಬ್ಬ ಮೊದಲ ಬಾರಿಗೆ ಭಾರತ ಟಿ20 ತಂಡವನ್ನು ಮುನ್ನಡೆಸುತ್ತಿರುವುದರಿಂದ ಬುಮ್ರಾ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಅಲ್ಲದೆ ಏಷ್ಯಾಕಪ್​ನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಯುವ ಆಟಗಾರರಿಗೆ ಈ ಸರಣಿ ಬಹಳ ಮಹತ್ವದ್ದಾಗಿದೆ.

ಆರಂಭಿಕರು ಯಾರು?

ಮೇಲೆ ಹೇಳಿದಂತೆ ತಂಡದಲ್ಲಿ ಅನುಭವಿಗಳಿಲ್ಲ. ಹೀಗಾಗಿ ಯುವಕರಿಗೆ ಉತ್ತಮ ಪ್ರದರ್ಶನ ನೀಡಲು ಇದು ಒಂದೊಳ್ಳೆ ಅವಕಾಶವಾಗಿದೆ. ಉಪನಾಯಕ ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಆರಂಭಿಕರಾಗುವುದು ಸ್ಪಷ್ಟವಾಗಿದೆ. ಹಾಗೆಯೇ ವೆಸ್ಟ್ ಇಂಡೀಸ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ತಿಲಕ್ ವರ್ಮಾ ಮೂರನೇ ಕ್ರಮಾಂಕವನ್ನು ತುಂಬಲ್ಲಿದ್ದಾರೆ. ಈ ಸರಣಿಗೆ ಶಿವಂ ದುಬೆ ಕೂಡ ಆಯ್ಕೆಯಾಗಿದ್ದು, ಅವರಿಗೂ ಸ್ಥಾನ ಸಿಗುವ ಸಾಧ್ಯತೆಗಳಿವೆ. ಗೇಮ್ ಫಿನಿಶರ್ ಪಾತ್ರದಲ್ಲಿ ರಿಂಕು ಸಿಂಗ್ ಚೊಚ್ಚಲ ಟಿ20 ಪಂದ್ಯವನ್ನು ಆಡಲಿದ್ದಾರೆ.

IND vs IRE: ಐರ್ಲೆಂಡ್ ಪ್ರವಾಸದಲ್ಲಿ ಭಾರತದ ಈ ನಾಲ್ವರು ಕ್ರಿಕೆಟಿಗರಿಗೆ ಸಿಗಲಿದೆ ಚೊಚ್ಚಲ ಅವಕಾಶ

ಸಂಜುಗೆ ಮತ್ತೊಂದು ಅವಕಾಶ?

ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಸಂಜುಗೆ ಇದು ಕೊನೆಯ ಅವಕಾಶವಾಗಿದೆ. ವಿಂಡೀಸ್ ವಿರುದ್ಧ ಬ್ಯಾಟ್ ಮಾಡಿದ ಮೂರು ಪಂದ್ಯಗಳಲ್ಲಿ ಸಂಜು ಕ್ರಮವಾಗಿ 12, 7 ಮತ್ತು 13 ಸ್ಕೋರ್‌ ದಾಖಲಿಸಿದ್ದರು. ಹೀಗಾಗಿ ಸಂಜು ಸ್ಯಾಮ್ಸನ್​ಗೆ ಈ ಪ್ರವಾಸದಲ್ಲಿ ಅವಕಾಶ ಸಿಗುವುದು ಅನುಮಾನವಾಗಿದೆ. ಏಕೆಂದರೆ ಮತ್ತೊಬ್ಬ ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾ ಆಯ್ಕೆಯಾಗಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಯಾರಿಗೆ ಅವಕಾಶ?

ಇನ್ನು ನಾಯಕ ಜಸ್ಪ್ರೀತ್ ಬುಮ್ರಾ ಸುಮಾರು ಒಂದು ವರ್ಷದ ಬಳಿಕ ತಂಡಕ್ಕೆ ಮರಳುತ್ತಿದ್ದು, ಬೌಲಿಂಗ್ ವಿಭಾಗದಲ್ಲಿ ಅವರೊಂದಿಗೆ ಪ್ರಸಿದ್ಧ್ ಕೃಷ್ಣ ಆಡುವುದು ಖಚಿತವಾಗಿದೆ. ಈ ಇಬ್ಬರೊಂದಿಗೆ ಎಡಗೈ ವೇಗಿಯಾಗಿ ಅರ್ಷದೀಪ್ ಸಿಂಗ್ ಆಡಲ್ಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ರವಿ ಬಿಷ್ಣೋಯ್ ಮೊದಲ ಆಯ್ಕೆಯಾಗಲಿದ್ದು, ವಾಷಿಂಗ್ಟನ್ ಸುಂದರ್ ಮತ್ತು ಶಹಬಾಜ್ ಅಹ್ಮದ್ ಅವರು 7ನೇ ಕ್ರಮಾಂಕದಲ್ಲಿ ಆಲ್ ರೌಂಡರ್ ಸ್ಥಾನಕ್ಕಾಗಿ ಸೆಣಸಾಡಲಿದ್ದಾರೆ.

ಭಾರತ ಸಂಭಾವ್ಯ ತಂಡ: ರುತುರಾಜ್ ಗಾಯಕವಾಡ, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮ, ಶಿವಂ ದುಬೆ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ / ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್ / ಶಹಬಾಜ್ ಅಹ್ಮದ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಜಸ್ಪ್ರೀತ್ ಬುಮ್ರಾ (ನಾಯಕ).

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ