AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanju Samson: ಸಂಜು ಸ್ಯಾಮ್ಸನ್​ಗೆ ಇಷ್ಟೊಂದು ಫ್ಯಾನ್ಸ್ ಇದ್ದಾರಾ? ಹಾರ್ದಿಕ್ ಪಾಂಡ್ಯ ಶಾಕ್..!

IND vs IRE: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯನ್ನು ಒಳಗೊಂಡ ಮತ್ತೊಂದು ತಂಡ ಇಂಗ್ಲೆಂಡ್ ವಿರುದ್ದ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಆ ತಂಡದಲ್ಲಿರುವ ಬಹುತೇಕ ಆಟಗಾರರು ಟೀಮ್ ಇಂಡಿಯಾ ಟಿ20 ತಂಡದ ಖಾಯಂ ಸದಸ್ಯರು ಎಂಬುದು ವಿಶೇಷ.

Sanju Samson: ಸಂಜು ಸ್ಯಾಮ್ಸನ್​ಗೆ ಇಷ್ಟೊಂದು ಫ್ಯಾನ್ಸ್ ಇದ್ದಾರಾ? ಹಾರ್ದಿಕ್ ಪಾಂಡ್ಯ ಶಾಕ್..!
Sanju Samson-Hardik Pandya
TV9 Web
| Edited By: |

Updated on: Jun 29, 2022 | 1:10 PM

Share

ಐರ್ಲೆಂಡ್ ವಿರುದ್ದ ಟಿ20 ಸರಣಿಯ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ 4 ರನ್​ಗಳಿಂದ ರೋಚಕ ಜಯ ಸಾಧಿಸಿತ್ತು. ಭಾರೀ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಟಾಸ್ ಬಳಿಕ ಮಾತನಾಡಿದ ನಾಯಕ ಹಾರ್ದಿಕ್ ಪಾಂಡ್ಯ ತಂಡದಲ್ಲಿನ ಬದಲಾವಣೆ ಬಗ್ಗೆ ಮಾತನಾಡಿದ್ದರು. ಈ ವೇಳೆ ರುತುರಾಜ್ ಗಾಯಕ್ವಾಡ್ ಬದಲಿಗೆ ಇಂದು ಸಂಜು ಸ್ಯಾಮ್ಸನ್ ಕಣಕ್ಕಿಳಿಯಲಿದ್ದಾರೆ ಎನ್ನುತ್ತಿದ್ದಂತೆ ಪ್ರೇಕ್ಷಕರ ಕಡೆಯಿಂದ ಸ್ಯಾಮ್ಸನ್ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಈ ಕಿರುಚಾಟ ಕೇಳಿ ಒಂದು ಕ್ಷಣ ಪಾಂಡ್ಯ ಅತ್ತ ತಿರುಗಿ ನೋಡಿದ್ದರು. ಅಷ್ಟೇ ಅಲ್ಲದೆ ತುಂಬಾ ಮಂದಿ ಆತನನ್ನು ಇಷ್ಟಪಡುತ್ತಿದ್ದಾರೆ ಎಂದು ಭಾವಿಸುತ್ತೇನೆ ಎಂದೇಳಿ ಹಾರ್ದಿಕ್ ಪಾಂಡ್ಯ ಮಾತು ಮುಂದುವರೆಸಿದ್ದರು.

ಇದೀಗ ಸಂಜು ಸ್ಯಾಮ್ಸನ್ ಅವರ ಕಂಬ್ಯಾಕ್ ಪಂದ್ಯಕ್ಕೂ ಮುನ್ನ ಅಭಿಮಾನಿಗಳು ಹರ್ಷೋದ್ಘಾರದೊಂದಿಗೆ ಸ್ವಾಗತಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಷ್ಟೇ ಅಲ್ಲದೆ ಸ್ಯಾಮ್ಸನ್​ ಯಾವುದೇ ಕ್ರಮಾಂಕದಲ್ಲೂ ಆಡಬಲ್ಲ ಆಟಗಾರ. ಇದಾಗ್ಯೂ ಆತನಿಗೆ ಕಳೆದ 7 ವರ್ಷಗಳಲ್ಲಿ ಅವಕಾಶ ನೀಡಿರುವುದು ಕೇವಲ 14 ಪಂದ್ಯಗಳಲ್ಲಿ ಮಾತ್ರ. ಇದೀಗ ಆರಂಭಿಕನಾಗಿ ಕಣಕ್ಕಿಳಿದ ಪಂದ್ಯದಲ್ಲೂ ಮಿಂಚಿದ್ದಾರೆ. ಐಪಿಎಲ್​ ಮೂಲಕ ತಮ್ಮ ಸಾಮರ್ಥ್ಯವನ್ನು ತೆರೆದಿಡುತ್ತಾ ಬಂದಿದ್ದಾರೆ. ಇನ್ನು ಮೇಲೆಯಾದರೂ ಆತನಿಗೆ ತಂಡದಲ್ಲಿ ಅವಕಾಶ ನೀಡಿ ಎಂದು ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ
Image
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Image
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
Image
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Image
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

ಇನ್ನು ಈ ಪಂದ್ಯದಲ್ಲಿ ಓಪನರ್​ ಆಗಿ ಕಣಕ್ಕಿಳಿದ ಸ್ಯಾಮ್ಸನ್ ಸ್ಪೋಟಕ ಇನಿಂಗ್ಸ್​ ಆಡಿದ್ದರು. ವಿಶೇಷ ಎಂದರೆ 7 ವರ್ಷಗಳ ನಂತರ ಟಿ20 ಪಂದ್ಯವಾಡಿದ ಸ್ಯಾಮ್ಸನ್ ತಮ್ಮ ಮೊದಲ ಅರ್ಧಶತಕವನ್ನು ಕೂಡ ಬಾರಿಸಿದ್ದರು. 42 ಎಸೆತಗಳಲ್ಲಿ 9 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಒಳಗೊಂಡ 77 ರನ್ ಗಳಿಸಿ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ.

ಈ ಅರ್ಧಶತಕದೊಂದಿಗೆ ಇದೀಗ ಸಂಜು ಸ್ಯಾಮ್ಸನ್ ಕೂಡ ಟಿ20 ವಿಶ್ವಕಪ್​ ರೇಸ್​ಗೆ ಎಂಟ್ರಿ ಕೊಟ್ಟಿದ್ದಾರೆ. ಏಕೆಂದರೆ ಮುಂದಿನ ತಿಂಗಳು ಇಂಗ್ಲೆಂಡ್ ವಿರುದ್ದದ ಟಿ20 ಸರಣಿಗೆ ತಂಡವನ್ನು ಆಯ್ಕೆ ಮಾಡಲಿದ್ದು, ಈ ಸರಣಿಯಲ್ಲಿ ಆಯ್ಕೆಯಾಗುವ ಬಹುತೇಕ ಆಟಗಾರರೇ ಟಿ20 ವಿಶ್ವಕಪ್​ನಲ್ಲೂ ಸ್ಥಾನ ಪಡೆಯುವ ಸಾಧ್ಯತೆಯಿದೆ. ಹೀಗಾಗಿ ಇಂಗ್ಲೆಂಡ್​ ವಿರುದ್ದ ಯಾರಿಗೆಲ್ಲಾ ಚಾನ್ಸ್ ಸಿಗಲಿದೆ ಎಂಬುದೇ ಈಗ ದೊಡ್ಡ ಪ್ರಶ್ನೆ. ಏಕೆಂದರೆ ಮೀಸಲು ಟೀಮ್ ಇಂಡಿಯಾದಲ್ಲಿ ದೀಪಕ್ ಹೂಡಾ ಹಾಗೂ ಸಂಜು ಸ್ಯಾಮ್ಸನ್ ಸಿಕ್ಕ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡಿದ್ದಾರೆ. ಹೀಗಾಗಿ ಈ ಇಬ್ಬರು ಇಂಗ್ಲೆಂಡ್ ವಿರುದ್ದದ ಸರಣಿಯಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ಅತ್ತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯನ್ನು ಒಳಗೊಂಡ ಮತ್ತೊಂದು ತಂಡ ಇಂಗ್ಲೆಂಡ್ ವಿರುದ್ದ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಆ ತಂಡದಲ್ಲಿರುವ ಬಹುತೇಕ ಆಟಗಾರರು ಟೀಮ್ ಇಂಡಿಯಾ ಟಿ20 ತಂಡದ ಖಾಯಂ ಸದಸ್ಯರು ಎಂಬುದು ವಿಶೇಷ. ಹೀಗಾಗಿ ಐರ್ಲೆಂಡ್ ವಿರುದ್ದ ಆಡಿದ ಯಾರಿಗೆಲ್ಲಾ ಇಂಗ್ಲೆಂಡ್ ವಿರುದ್ದ ಚಾನ್ಸ್ ಸಿಗಲಿದೆ ಕಾದು ನೋಡಬೇಕಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ