AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಪದಾರ್ಪಣೆ ಪಂದ್ಯದ ಮೊದಲ ಓವರ್​ನಲ್ಲೇ ಮಿಂಚಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

Prasidh Krishna: ಭಾರತ ಮತ್ತು ಐರ್ಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಚೊಚ್ಚಲ ಟಿ20 ಪಂದ್ಯವನ್ನಾಡಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ, ಆಡಿದ ಮೊದಲ ಪಂದ್ಯದಲ್ಲಿ 2 ವಿಕೆಟ್ ಉರುಳಿಸಿ, ಟಿ20 ತಂಡಕ್ಕೆ ಭರ್ಜರಿ ಎಂಟ್ರಿಕೊಟ್ಟಿದ್ದಾರೆ.

IND vs IRE: ಪದಾರ್ಪಣೆ ಪಂದ್ಯದ ಮೊದಲ ಓವರ್​ನಲ್ಲೇ ಮಿಂಚಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಪ್ರಸಿದ್ಧ್ ಕೃಷ್ಣ
ಪೃಥ್ವಿಶಂಕರ
|

Updated on: Aug 19, 2023 | 11:46 AM

Share

ಭಾರತ ಮತ್ತು ಐರ್ಲೆಂಡ್ (India vs Ireland) ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಪರ ಚೊಚ್ಚಲ ಟಿ20 ಪಂದ್ಯವನ್ನಾಡಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh Krishna ), ಆಡಿದ ಮೊದಲ ಪಂದ್ಯದಲ್ಲಿ 2 ವಿಕೆಟ್ ಉರುಳಿಸಿ, ಟಿ20 ತಂಡಕ್ಕೆ ಭರ್ಜರಿ ಎಂಟ್ರಿಕೊಟ್ಟಿದ್ದಾರೆ. ವಾಸ್ತವವಾಗಿ ಬಹಳ ಹಿಂದೆಯೇ ಭಾರತ ಏಕದಿನ ತಂಡಕ್ಕೆ ಪದಾರ್ಪಣೆ ಮಾಡಿದ್ದ ಪ್ರಸಿದ್ಧ್ ಕೃಷ್ಣ, ಇಂಜುರಿಯಿಂದಾಗಿ ವರ್ಷದಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದರು. ಇದೀಗ ನಾಯಕ ಜಸ್ಪ್ರೀತ್ ಬುಮ್ರಾ (Jasprit Bumrah) ಜೊತೆಗೆ ಭರ್ಜರಿ ಕಂಬ್ಯಾಕ್ ಮಾಡಿರುವ ಪ್ರಸಿದ್ಧ್ ಕೃಷ್ಣ, ನಾನು ಕೂಡ ಏಷ್ಯಾಕಪ್ ಹಾಗೂ ವಿಶ್ವಕಪ್​ಗೆ ತಂಡದಲ್ಲಿ ಸ್ಥಾನ ಪಡೆಯಲು ಸ್ಪರ್ಧಿ ಎಂಬ ಸುಳಿವನ್ನು ಆಯ್ಕೆ ಮಂಡಳಿಗೆ ನೀಡಿದ್ದಾರೆ.

ವಾಸ್ತವವಾಗಿ ಈ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರರು ಆಡುತ್ತಿಲ್ಲ. ಹೀಗಾಗಿ ತಂಡದಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆಗಳು ಹೆಚ್ಚಿವೆ. ಅದಕ್ಕೆ ಪೂರಕವಾಗಿ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪರ ಇಬ್ಬರು ಯುವ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಲಾಯಿತು. ಅವರಲ್ಲಿ ರಿಂಕು ಸಿಂಗ್ ಹಾಗೂ ಪ್ರಸಿದ್ಧ್ ಕೃಷ್ಣ ಸೇರಿದ್ದರು. ಒಂದೆಡೆ ಬೌಲಿಂಗ್​ನಲ್ಲಿ ಪ್ರಸಿದ್ಧ್ ಕೃಷ್ಣ ಮಿಂಚಿದರೆ, ರಿಂಕು ಸಿಂಗ್​ಗೆ ಮೊದಲ ಪಂದ್ಯದಲ್ಲಿ ಆಡುವ ಅವಕಾಶ ಸಿಗಲಿಲ್ಲ.

Prasidh Krishna: ಇಂಜುರಿ ಬಗ್ಗೆ ಬಿಗ್​ ಅಪ್​ಡೇಟ್ ನೀಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ; ಮತ್ತೆ ತಂಡಕ್ಕೆ ರೀ ಎಂಟ್ರಿ ಯಾವಾಗ?

2 ವಿಕೆಟ್ ಉರುಳಿಸಿದ ಪ್ರಸಿದ್ಧ್

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಬುಮ್ರಾ ಮೊದಲು ಬೌಲಿಂಗ್ ಮಾಡುವ ನಿರ್ಧರಿಸಿದರು. ಹೀಗಾಗಿ ಬೌಲಿಂಗ್ ಮಾಡುವ ಅವಕಾಶ ಪಡೆದ ಪ್ರಸಿದ್ಧ್ ಕೃಷ್ಣ 2 ವಿಕೆಟ್ ಉರುಳಿಸಿ ಆಯ್ಕೆ ಮಂಡಳಿಯ ನಂಬಿಕೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಐರ್ಲೆಂಡ್ ಇನ್ನಿಂಗ್ಸ್​ನ ಐದನೇ ಓವರ್‌ನಲ್ಲಿ ಪ್ರಸಿದ್ಧ್ ಬೌಲಿಂಗ್‌ಗೆ ಬಂದರು. ಕಳೆದ ವರ್ಷ ಆಗಸ್ಟ್‌ನಲ್ಲಿ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯ ನಂತರ ಮೊದಲ ಓವರ್ ಬೌಲ್ ಮಾಡಿದ್ದ ಪ್ರಸಿದ್ಧ್ ಕೃಷ್ಣ ತಮ್ಮ ಓವರ್​ನ ಕೊನೆಯ ಎಸೆತದಲ್ಲಿ ಹ್ಯಾರಿ ಟೆಕ್ಟರ್ ಅವರ ವಿಕೆಟ್ ಪಡೆದರು.

ಕೊನೆಯ ಓವರ್​ನಲ್ಲಿ ದುಬಾರಿ

ಮುಂದಿನ ಓವರ್‌ನಲ್ಲಿ ತಂಡಕ್ಕೆ ಮತ್ತೊಂದು ಯಶಸ್ಸನ್ನು ತಂದುಕೊಟ್ಟ ಪ್ರಸಿದ್ಧ್ ಕೃಷ್ಣ, ಈ ಬಾರಿ ಅನುಭವಿ ಆಲ್‌ರೌಂಡರ್ ಜಾರ್ಜ್ ಡಾಕ್ರೆಲ್ ಅವರ ವಿಕೆಟ್ ಪಡೆದರು. ಏಳನೇ ಓವರ್‌ನ ಮೂರನೇ ಎಸೆತದಲ್ಲಿ ಪ್ರಸಿದ್ಧ್ ಕೃಷ್ಣ , ಡಾಕ್ರೆಲ್ ವಿಕೆಟ್ ಉರುಳಿಸಿದರು. ಈ ಮೂಲಕ ಐರ್ಲೆಂಡ್‌ನ ಮಧ್ಯಮ ಕ್ರಮಾಂಕವನ್ನು ಕೆಡವುವಲ್ಲಿ ಪ್ರಸಿದ್ಧ್ ಪ್ರಮುಖ ಪಾತ್ರ ವಹಿಸಿದರು. ಈ ಪಂದ್ಯದಲ್ಲಿ ಪ್ರಸಿದ್ಧ್ ಕೃಷ್ಣ 2 ವಿಕೆಟ್ ಉರುಳಿಸಿದರಾದರೂ, ಕೊನೆಯ ಓವರ್​ನಲ್ಲಿ ಕೊಂಚ ದುಬಾರಿಯಾದರು. ಒಟ್ಟಾರೆಯಾಗಿ ತಮ್ಮ ಖೋಟಾದ 4 ಓವರ್‌ಗಳಲ್ಲಿ 32 ರನ್‌ ನೀಡಿದ ಪ್ರಸಿದ್ಧ್ 2 ವಿಕೆಟ್‌ ಪಡೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​