AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಮತ್ತೊಂದು ಇಂಜುರಿಯಿಂದ ಸ್ಪಲ್ಪದರಲ್ಲೇ ಪಾರಾದ ಜಸ್ಪ್ರೀತ್ ಬುಮ್ರಾ; ವಿಡಿಯೋ ನೋಡಿ

IND vs IRE: ಇಂಜುರಿಯಿಂದಾಗಿ ವರ್ಷದಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಬುಮ್ರಾ ಮತ್ತೊಮ್ಮೆ ಇಂಜುರಿಗೆ ತುತ್ತಾಗುವುದರಿಂದ ಸ್ವಲ್ಪದರಲ್ಲೇ ಪಾರಾದರು. ಒಂದು ವೇಳೆ ಬುಮ್ರಾ ಈ ಪಂದ್ಯದಲ್ಲಿ ಮತ್ತೆ ಇಂಜುರಿಗೆ ತುತ್ತಾಗಿದ್ದರೆ, ಏಷ್ಯಾಕಪ್ ಹಾಗೂ ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿತ್ತು.

IND vs IRE: ಮತ್ತೊಂದು ಇಂಜುರಿಯಿಂದ ಸ್ಪಲ್ಪದರಲ್ಲೇ ಪಾರಾದ ಜಸ್ಪ್ರೀತ್ ಬುಮ್ರಾ; ವಿಡಿಯೋ ನೋಡಿ
ಜಸ್ಪ್ರೀತ್ ಬುಮ್ರಾ, ರವಿ ಬಿಷ್ಣೋಯ್
Follow us
ಪೃಥ್ವಿಶಂಕರ
|

Updated on: Aug 19, 2023 | 10:34 AM

ಟೀಂ ಇಂಡಿಯಾದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಬರೋಬ್ಬರಿ 11 ತಿಂಗಳ ನಂತರ ಮತ್ತೆ ಕ್ರಿಕೆಟ್​ಗೆ ಮರಳಿದ್ದಾರೆ. ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ (India vs Ireland) ನಾಯಕತ್ವವಹಿಸಿರುವ ಬುಮ್ರಾ, ತಮ್ಮ ನಾಯಕತ್ವದಲ್ಲಿ ಟೀಂ ಇಂಡಿಯಾಗೆ ಗೆಲುವಿನ ಶುಭಾರಂಭ ನೀಡಿದ್ದಾರೆ. ಮಳೆ ಪೀಡಿತ ಈ ಪಂದ್ಯದಲ್ಲಿ ಟೀಂ ಇಂಡಿಯಾ ಡಕ್ವರ್ತ್ ಲೂಯಿಸ್ ನಿಯಮದಡಿ ಐರ್ಲೆಂಡ್ ವಿರುದ್ಧ 2 ರನ್​ಗಳ ಜಯ ಸಾಧಿಸಿದೆ. ಆದರೆ ಪಂದ್ಯದ ವೇಳೆ ನಡೆದ ಘಟನೆಯೊಂದು ಟೀಂ ಇಂಡಿಯಾ (Team India) ಅಭಿಮಾನಿಗಳನ್ನು ಕೊಂಚ ಕಾಲ ಆತಂಕಕ್ಕೀಡು ಮಾಡಿತ್ತು. ವಾಸ್ತವವಾಗಿ ಇಂಜುರಿಯಿಂದಾಗಿ ವರ್ಷದಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಬುಮ್ರಾ ಮತ್ತೊಮ್ಮೆ ಇಂಜುರಿಗೆ ತುತ್ತಾಗುವುದರಿಂದ ಸ್ವಲ್ಪದರಲ್ಲೇ ಪಾರಾದರು. ಒಂದು ವೇಳೆ ಬುಮ್ರಾ ಈ ಪಂದ್ಯದಲ್ಲಿ ಮತ್ತೆ ಇಂಜುರಿಗೆ ತುತ್ತಾಗಿದ್ದರೆ, ಏಷ್ಯಾಕಪ್ ಹಾಗೂ ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿತ್ತು.

14ನೇ ಓವರ್​ನಲ್ಲಿ ನಡೆದ ಘಟನೆ

ವಾಸ್ತವವಾಗಿ ಈ ಘಟನೆ ನಡೆದಿದ್ದು ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ. ಟೀಂ ಇಂಡಿಯಾ ಪರ ವಾಷಿಂಗ್ಟನ್ ಸುಂದರ್ 14ನೇ ಓವರ್ ಬೌಲ್ ಮಾಡುವ ಜವಬ್ದಾರಿ ಹೊತ್ತಿದ್ದರು. ಓವರ್‌ನ 5ನೇ ಎಸೆತವನ್ನು ಐರ್ಲೆಂಡ್‌ನ ಕರ್ಟಿಸ್ ಕ್ಯಾಂಪ್‌ಫರ್ ಬೌಂಡರಿ ಕಡೆ ಆಡಿದರು. ಈ ವೇಳೆ ರವಿ ಬಿಷ್ಣೋಯ್ ಮತ್ತು ಜಸ್ಪ್ರೀತ್ ಬುಮ್ರಾ ಇಬ್ಬರೂ ಚೆಂಡನ್ನು ಬೌಂಡರಿ ಗೆರೆ ದಾಟದಂತೆ ತಡೆಯಲು ಪ್ರಯತ್ನಿಸಿದರು. ರವಿ ಬಿಷ್ಣೋಯ್ ಡೀಪ್ ಬ್ಯಾಕ್‌ವರ್ಡ್ ಸ್ಕ್ವೇರ್ ಲೆಗ್‌ನಿಂದ ಓಡಿ ಬಂದು ಚೆಂಡನ್ನು ತಡೆಯಲು ಸ್ಲಿಪ್ ಮಾಡಿದರು.

IND vs IRE: ನಾಯಕನಾಗಿ ಮೊದಲ ಪಂದ್ಯದಲ್ಲೇ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ..!

ಅನಾಹುತದಿಂದ ಇಬ್ಬರೂ ಪಾರು

ಇನ್ನೊಂದು ಬದಿಯಲ್ಲಿ ಬುಮ್ರಾ ಕೂಡ ಚೆಂಡನ್ನು ಹಿಡಿಯಲು ಓಡಿ ಬಂದರು. ಈ ಹಂತದಲ್ಲಿ ಒಬ್ಬರಿಗೊಬ್ಬರು ಡಿಕ್ಕಿ ಹೊಡೆದುಕೊಳ್ಳುವ ಸಂದರ್ಭ ಎದುರಾಯಿತು. ಆದರೆ ಕೂಡಲೇ ಎಚ್ಚೆತ್ತುಕೊಂಡ ಬುಮ್ರಾ, ಸಮಯಕ್ಕೆ ಸರಿಯಾಗಿ ಜಂಪ್ ಮಾಡಿ ಆಗುತ್ತಿದ್ದ ಅನಾಹುತವನ್ನು ತಪ್ಪಿಸಿದರು. ಒಂದು ವೇಳೆ ಬುಮ್ರಾ ಜಿಗಿಯದೇ ಇದ್ದಿದ್ದರೆ ಬಿಷ್ಣೋಯ್‌ ಹಾಗೂ ಬುಮ್ರಾಗೆ ಖಂಡಿತ ಗಂಭೀರ ಗಾಯವಾಗುತ್ತಿತ್ತು. ಆದರೆ ಬುಮ್ರಾರ ಸಮಯ ಪ್ರಜ್ಞಯಿಂದ ಅದೃಷ್ಟವಶಾತ್ ಅಂಥದ್ದೇನೂ ಆಗಲಿಲ್ಲ.

ಇನ್ನುಈ ಪಂದ್ಯದ ಬಗ್ಗೆ ಹೇಳಬೇಕೆಂದರೆ, ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್, ಟೀಂ ಇಂಡಿಯಾ ಗೆಲುವಿಗೆ 140 ರನ್‌ಗಳ ಸವಾಲನ್ನು ನೀಡಿತ್ತು. ಟೀಂ ಇಂಡಿಯಾ 6.5 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 47 ರನ್ ಗಳಿಸಿತ್ತು. ಆದರೆ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಬೇಕಾಯಿತು. ಹೀಗಾಗಿ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ, ಮಳೆ ಬರುವ ವೇಳೆಗೆ 2 ರನ್ ಮುನ್ನಡೆ ಕಾಯ್ದುಕೊಂಡಿದ್ದ ಭಾರತಕ್ಕೆ ಸುಲಭ ಜಯ ದೊರಕಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ