IND vs IRE: ವಿರಾಟ್ ಕೊಹ್ಲಿ 741 ರನ್​ಗಳನ್ನು ಮರೆತು ಬಿಡುವುದು ಒಳಿತು..!

India vs Ireland: ಭಾರತ ಮತ್ತು ಐರ್ಲೆಂಡ್ ನಡುವಣ ಮುಖಾಮುಖಿಯಲ್ಲಿ ಟೀಮ್ ಇಂಡಿಯಾ ತಂಡದ್ದೇ ಮೇಲುಗೈ. ಅಂದರೆ ಉಭಯ ತಂಡಗಳು 7 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಟೀಮ್ ಇಂಡಿಯಾ ಎಲ್ಲಾ ಪಂದ್ಯಗಳಲ್ಲೂ ಜಯ ಸಾಧಿಸಿದೆ. ಆದರೆ ಈ ಬಾರಿ ನ್ಯೂಯಾರ್ಕ್​ನ ನಸ್ಸೌ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಅನಿರೀಕ್ಷಿತ ಫಲಿತಾಂಶವನ್ನು ಎದುರು ನೋಡಲಾಗುತ್ತಿದೆ.

IND vs IRE: ವಿರಾಟ್ ಕೊಹ್ಲಿ 741 ರನ್​ಗಳನ್ನು ಮರೆತು ಬಿಡುವುದು ಒಳಿತು..!
Virat Kohli
Follow us
| Updated By: ಝಾಹಿರ್ ಯೂಸುಫ್

Updated on: Jun 05, 2024 | 10:53 AM

ಇಂದಿನಿಂದ ಟೀಮ್ ಇಂಡಿಯಾದ ಟಿ20 ವಿಶ್ವಕಪ್ (T20 World Cup 2024) ಅಭಿಯಾನ ಆರಂಭವಾಗಲಿದೆ. ಜೂನ್ 5 ರಂದು ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳ ಮುಖಾಮುಖಿಯಲ್ಲಿ ಭಾರತ ತಂಡವೇ ಮೇಲುಗೈ ಹೊಂದಿದ್ದರೂ, ಈ ಬಾರಿ ಎಚ್ಚರಿಕೆಯಿಂದ ಆಡಬೇಕಾಗುತ್ತದೆ. ವಿಶೇಷವಾಗಿ 22-ಯಾರ್ಡ್ ಸ್ಟ್ರಿಪ್‌ನಲ್ಲಿ ಬ್ಯಾಟ್ಸ್‌ಮನ್‌ಗಳು ತೊಂದರೆ ಎದುರಿಸುತ್ತಿರುವಾಗ ಮತ್ತಷ್ಟು ಎಚ್ಚರಿಕೆಯಿಂದ ಬ್ಯಾಟ್ ಬೀಸಬೇಕಾಗುತ್ತದೆ.

ಏಕೆಂದರೆ ನಸ್ಸೌ ಸ್ಟೇಡಿಯಂನ ಪಿಚ್​ನಲ್ಲಿ ಬ್ಯಾಟಿಂಗ್ ಮಾಡುವುದು ಸುಲಭವಲ್ಲ. ಇಲ್ಲಿ ಶ್ರೀಲಂಕಾ ತಂಡ 77 ರನ್‌ಗಳಿಗೆ ಕುಸಿದರೆ, ಅತ್ತ 78 ರನ್‌ಗಳ ಗುರಿಯನ್ನು ಬೆನ್ನಟ್ಟಲು ಸೌತ್ ಆಫ್ರಿಕಾ ತಂಡ 16 ಓವರ್‌ಗಳನ್ನು ತೆಗೆದುಕೊಂಡಿತು ಎಂಬುದನ್ನು ಗಮನಿಸಬೇಕು.

ಹಾಗೆಯೇ ಇದೇ ಮೈದಾನದಲ್ಲಿ ಆಡಲಾದ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳಿಂದ ಅಮೋಘ ಎನ್ನುವಂತಹ ಆಟವೇನು ಮೂಡಿಬಂದಿರಲಿಲ್ಲ. ಅಲ್ಲದೆ ಅಭ್ಯಾಸ ಪಂದ್ಯದಲ್ಲಿ ಕಲೆಹಾಕಿದ್ದು ಕೇವಲ 182 ರನ್​ಗಳು ಮಾತ್ರ. ಇದಕ್ಕೆ ಕಾರಣ ನಸ್ಸೌ ಪಿಚ್​ನಲ್ಲಿನ ಅನಿರೀಕ್ಷಿತ ತಿರುವುಗಳು ಮತ್ತು ಬೌನ್ಸ್​ಗಳು.

ಅಂದರೆ ಈ ಪಿಚ್​ನಲ್ಲಿ ಬ್ಯಾಟರ್​ಗಳು ಎಷ್ಟು ಲಾಭ ಪಡೆಯಲಿದ್ದಾರೋ, ಅಷ್ಟೇ ಬೌಲರ್​ಗಳಿಗೂ ಸಹಕಾರಿ. ಹೀಗಾಗಿ ಯಾವುದೇ ಹಂತದಲ್ಲೂ ಪಂದ್ಯದ ಗತಿ ಬದಲಾಗಬಲ್ಲದು. ಅದರಲ್ಲೂ ಈ ಪಿಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಯಾವುದೇ ತಂಡ ಪವರ್​ಪ್ಲೇನಲ್ಲಿ ಪವರ್​ ತೋರಿಸಿಲ್ಲ. ಹೀಗಾಗಿಯೇ ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಬೀಸಬೇಕಾದ ಅನಿವಾರ್ಯತೆ ಇದೆ.

ಇಂತಹ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರ ವಿರಾಟ್ ಕೊಹ್ಲಿ ಅವರ ಇನಿಂಗ್ಸ್ ಮುಖ್ಯವಾಗುತ್ತದೆ. ಏಕೆಂದರೆ ಪರಿಸ್ಥಿತಿ ಕಷ್ಟಕರವಾದಾಗ, ವಿರಾಟ್ ಕೊಹ್ಲಿ ಭಾರತ ಪಾಲಿಗೆ ಆಸರೆಯಾಗಿ ನಿಂತ ಉದಾಹರಣೆಗಳಿವೆ. ಹೀಗಾಗಿ ನ್ಯೂಯಾರ್ಕ್​ನಲ್ಲೂ ಕೊಹ್ಲಿಯೇ ಭಾರತದ ಆಧಾರ ಸ್ತಂಭ ಎಂದರೆ ತಪ್ಪಾಗಲಾರದು. ಇದಕ್ಕಾಗಿ ವಿರಾಟ್ ಕೊಹ್ಲಿ ತಮ್ಮ 741 ರನ್‌ಗಳನ್ನು ಮರೆಯಬೇಕಾಗಿದೆ.

741 ರನ್​ಗಳ ಸರದಾರ:

ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದ್ದರು. ಹೀಗಾಗಿ 15 ಪಂದ್ಯಗಳಲ್ಲಿ 154 ರ ಸ್ಟ್ರೈಕರ್ ರೇಟ್​ನಲ್ಲಿ ರನ್ ಕಲೆಹಾಕಿದ್ದರು. ಹೀಗೆ ಬಿರುಸಿನ ಬ್ಯಾಟಿಂಗ್​ನೊಂದಿಗೆ 741 ರನ್​ ಕಲೆಹಾಕಿರುವ ಕೊಹ್ಲಿ ನ್ಯೂಯಾರ್ಕ್​ ಪಿಚ್​ನಲ್ಲಿ ಗೇರ್ ಬದಲಿಸಲೇಬೇಕು.

ಏಕೆಂದರೆ ಟೀಮ್ ಇಂಡಿಯಾದಲ್ಲಿ ಹೊಡಿಬಡಿ ದಾಂಡಿಗರ ದಂಡೇ ಇದೆ. ಆದರೆ ಪರಿಸ್ಥಿತಿಗೆ ತಕ್ಕಂತೆ ಕ್ರೀಸ್ ಕಚ್ಚಿ ನಿಲ್ಲುವ ಬ್ಯಾಟರ್​ಗಳ ಕೊರತೆಯಿದೆ. ಈ ಕೊರತೆಯನ್ನು ನೀಗಿಸಿಕೊಳ್ಳಬೇಕಿದ್ದರೆ ವಿರಾಟ್ ಕೊಹ್ಲಿ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಬೇಕು.

ಹೀಗಾಗಿಯೇ ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ಇನಿಂಗ್ಸ್​ಗಳನ್ನು ಮರೆತು ನ್ಯೂಯಾರ್ಕ್​ನಲ್ಲಿ ಕಣಕ್ಕಿಳಿಯಬೇಕಿದೆ. ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಪಿಚ್ ಸಾಕಷ್ಟು ಸಮತಟ್ಟಾಗಿತ್ತು. ಅಲ್ಲದೆ ವಿರಾಟ್ ಕೊಹ್ಲಿ ಆ ಪಿಚ್‌ಗಳಲ್ಲಿ ನಿರ್ಭೀತಿಯಿಂದ ಬ್ಯಾಟ್ ಬೀಸಿದ್ದರು. ಅಲ್ಲದೆ 38 ಸಿಕ್ಸರ್​ಗಳನ್ನು ಸಿಡಿಸುವ ಮೂಲಕ ಅಬ್ಬರಿಸಿದ್ದರು.

ಆದರೆ ವಿರಾಟ್ ಕೊಹ್ಲಿ ನ್ಯೂಯಾರ್ಕ್‌ನಲ್ಲಿ ಐಪಿಎಲ್ ಶೈಲಿಯಲ್ಲಿ ಆಡಲು ಪ್ರಯತ್ನಿಸಿದರೆ, ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ ವಿಕೆಟ್ ಕಳೆದುಕೊಳ್ಳುವ ಸಾಧ್ಯತೆ ಇದೆ.

ಹೀಗಾಗಿ ವಿರಾಟ್ ಕೊಹ್ಲಿ ತಮ್ಮ ಸಾಂಪ್ರದಾಯಿಕ ಶೈಲಿಗೆ ಮರಳಬೇಕಾದ ಅನಿವಾರ್ಯತೆ ಇದೆ. ಅಂದರೆ ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಫೋರ್​ಗಳೊಂದಿಗೆ ಸಿಂಗಲ್ಸ್​ಗಳ ಮೂಲಕ ಇನಿಂಗ್ಸ್ ಕಟ್ಟುವಲ್ಲಿ ನಿಪುಣರು. ಇದೇ ಮಾದರಿಯಲ್ಲಿ ವಿರಾಟ್ ಕೊಹ್ಲಿ ಇನಿಂಗ್ಸ್ ಆಡಬೇಕಾಗುತ್ತದೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಗಾಗಿ ಕಾಯುತ್ತಿದೆ ವಿಶ್ವ ದಾಖಲೆಗಳು..!

ಮತ್ತೊಂದೆಡೆ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್​ನಂತಹ ಹೊಡಿಬಡಿ ದಾಂಡಿಗರ ದಂಡೇ ಇದೆ. ಅವರಿಂದ ಬಿರುಸಿನ ಇನಿಂಗ್ಸ್ ಮೂಡಿಬಂದರೂ ತಂಡದ ಮೊತ್ತವು ಹೆಚ್ಚಾಗಲಿದೆ. ಅಲ್ಲದೆ ಒಂದೆಡೆ ವಿರಾಟ್ ಕೊಹ್ಲಿ ಕ್ರೀಸ್ ಕಚ್ಚಿ ನಿಂತಿದ್ದರೆ, ಉಳಿದ ಬ್ಯಾಟರ್​ಗಳಿಗೂ ಒತ್ತಡವಿಲ್ಲದೆ ಸ್ಪೋಟಕ ಇನಿಂಗ್ಸ್ ಆಡಲು ಸಾಧ್ಯವಾಗುತ್ತದೆ. ಹೀಗಾಗಿಯೇ ನ್ಯೂಯಾರ್ಕ್​ನ ನಸ್ಸೌ ಪಿಚ್​ನಲ್ಲಿ ವಿರಾಟ್ ಕೊಹ್ಲಿ ತಮ್ಮ ಅನುಭವವನ್ನು ಧಾರೆಯೆರೆಯುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯ ಎಂದೇ ಹೇಳಬಹುದು.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ