AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಭಾರತ ವಿರುದ್ಧದ ಟಿ20 ಸರಣಿಗೆ ಐರ್ಲೆಂಡ್ ತಂಡ ಪ್ರಕಟ

India vs Ireland T20 Series 2026: ಭಾರತ ಮತ್ತು ಐರ್ಲೆಂಡ್ ನಡುವಿನ ಎರಡು ಪಂದ್ಯಗಳ ಟಿ20 ಸರಣಿ ಜೂನ್ 26 ರಿಂದ ಆರಂಭವಾಗಲಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತದ ಯುವ ಪಡೆ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಗಾಯಗಳಿಂದಾಗಿ ಪಾಲ್ ಸ್ಟಿರ್ಲಿಂಗ್ ಹೊರಗುಳಿದಿದ್ದು, ಲೋರ್ಕನ್ ಟಕರ್ ಐರ್ಲೆಂಡ್‌ನ ಹೊಸ ನಾಯಕರಾಗಿ ನೇಮಕಗೊಂಡಿದ್ದಾರೆ. ಐರಿಶ್ ತಂಡದಲ್ಲಿ ಭಾರತೀಯ ಮೂಲದ ಆಟಗಾರ ಜೈ ಮುಂಧ್ರಾ ಕೂಡ ಇದ್ದಾರೆ.

IND vs IRE: ಭಾರತ ವಿರುದ್ಧದ ಟಿ20 ಸರಣಿಗೆ ಐರ್ಲೆಂಡ್ ತಂಡ ಪ್ರಕಟ
Ireland Cricket Team
ಪೃಥ್ವಿಶಂಕರ
|

Updated on:Jun 22, 2026 | 9:01 PM

Share

ಭಾರತ ಹಾಗೂ ಐರ್ಲೆಂಡ್ (India vs Ireland) ನಡುವೆ ಎರಡು ಪಂದ್ಯಗಳ ಟಿ20 ಸರಣಿ ಇದೇ ಜೂನ್ 26 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಈಗಾಗಲೇ ಟೀಂ ಇಂಡಿಯಾವನ್ನು ಸಹ ಪ್ರಕಟಿಸಲಾಗಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತದ ಯುವ ಪಡೆ ಐರ್ಲೆಂಡ್ ಪ್ರವಾಸಕ್ಕೆ ಇಷ್ಟರಲ್ಲೇ ತೆರಳಲಿದೆ. ಈ ನಡುವೆ ಸರಣಿ ಆರಂಭಕ್ಕೆ ನಾಲ್ಕು ದಿನಗಳು ಬಾಕಿ ಇರುವಾಗ ಈ ಸರಣಿಗೆ ಐರ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಗಮನಿಸಬೇಕಾದ ಸಂಗತಿಯೆಂದರೆ, ಈ ಸರಣಿಗೆ ಐರ್ಲೆಂಡ್ ತಂಡದ ನಾಯಕನ ಬದಲಾವಣೆಯಾಗಿದೆ. ಬಲಗೈ ಬ್ಯಾಟ್ಸ್‌ಮನ್ ಲೋರ್ಕನ್ ಟಕರ್ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಗಿದೆ.

2026 ರ ಟಿ20 ವಿಶ್ವಕಪ್ ಬಳಿಕ ನಾಯಕತ್ವದಿಂದ ಕೆಳಗಿಳಿದಿದ್ದ ಪಾಲ್ ಸ್ಟಿರ್ಲಿಂಗ್ ಗಾಯದಿಂದ ಬಳಲುತ್ತಿರುವ ಕಾರಣ ಅವರನ್ನು ಈ ಸರಣಿಯಿಂದ ಹೊರಗಿಡಲಾಗಿದೆ. ಹಾಗೆಯೇ ಸ್ಟಿರ್ಲಿಂಗ್ ಸೇರಿದಂತೆ ಆರು ಆಟಗಾರರು ಕೂಡ ಗಾಯದಿಂದ ಬಳಲುತ್ತಿದ್ದು ಅವರನ್ನು ಸಹ ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ. ಇನ್ನು ಐರ್ಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರನನ್ನೂ ಆಯ್ಕೆ ಮಾಡಲಾಗಿದ್ದು, ಎಡಗೈ ವೇಗದ ಬೌಲರ್ ಆಗಿರುವ ಜೈ ಮುಂಧ್ರಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

6 ಆಟಗಾರರಿಗೆ ಇಂಜುರಿ

  • ಜೋಶ್ ಲಿಟಲ್
  • ಮಾರ್ಕ್ ಅಡೈರ್
  • ಪಾಲ್ ಸ್ಟಿರ್ಲಿಂಗ್
  • ಕರ್ಟಿಸ್ ಕ್ಯಾಂಪರ್
  • ಬ್ಯಾರಿ ಮೆಕಾರ್ಥಿ
  • ಜೋರ್ಡಾನ್ ನೀಲ್

ಐರ್ಲೆಂಡ್ ತಂಡ: ಲೋರ್ಕನ್ ಟಕರ್ (ನಾಯಕ), ರಾಸ್ ಅಡೈರ್, ಬೆನ್ ಕೌಲ್ಟಿಡ್ಜ್, ಗ್ಯಾರೆತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಸ್ಟೀಫನ್ ಡೊಹೆನಿ, ಮ್ಯಾಥ್ಯೂ ಹಂಫ್ರೈಸ್, ಗ್ಯಾವಿನ್ ಹೋಯ್, ಮ್ಯಾಥ್ಯೂ ಹೊಲ್ಲಾರ್ಡ್, ಲಿಯಾಮ್ ಮೆಕಾರ್ಥಿ, ಜೇ ಮುಂದ್ರಾ, ಹ್ಯಾರಿ ಟೆಕ್ಟರ್, ಟಿಮ್ ಟೆಕ್ಟರ್, ರೂಬೆನ್ ವಿಲ್ಸನ್.

ಲೋರ್ಕನ್ ಟಕರ್ ಯಾರು?

ಐರ್ಲೆಂಡ್‌ನ ಹೊಸ ಟಿ20 ನಾಯಕ ಲೋರ್ಕನ್ ಟಕರ್ ಕಳೆದ 10 ವರ್ಷಗಳಿಂದ ಅಂತರರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದಾರೆ. 2016 ರಲ್ಲಿ ಪಾದಾರ್ಪಣೆ ಮಾಡಿದ ಅವರು 91 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 22.7 ರ ಸರಾಸರಿಯಲ್ಲಿ 1,730 ರನ್ ಗಳಿಸಿದ್ದಾರೆ. ಹಾಗೆಯೇ ಏಕದಿನ ಪಂದ್ಯಗಳಲ್ಲಿ 25 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 1,054 ರನ್ ಗಳಿಸಿದ್ದಾರೆ. 10 ಟೆಸ್ಟ್‌ಗಳಲ್ಲಿ ಟಕರ್, 41.83 ರ ಸರಾಸರಿಯಲ್ಲಿ 753 ರನ್ ಗಳಿಸಿದ್ದಾರೆ. ಮೂರು ಮಾದರಿಯಲ್ಲಿ ಅವರು 21 ಅರ್ಧಶತಕಗಳು ಮತ್ತು ಒಂದು ಶತಕವನ್ನು ಸಹ ಬಾರಿಸಿದ್ದಾರೆ.

ಭಾರತದ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್​ ಪ್ರಯಾಣ ಇಷ್ಟರಲ್ಲೇ ಅಂತ್ಯ

 ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್ ಮತ್ತು ವೈಭವ್ ಸೂರ್ಯವಂಶಿ

ಟಿ20 ಸರಣಿ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ ಜೂನ್ 26 ರಂದು ಬೆಲ್‌ಫಾಸ್ಟ್‌ನಲ್ಲಿ ಸಂಜೆ 6 ಗಂಟೆಗೆ ಆರಂಭವಾಗಲಿದೆ.
  • ಎರಡನೇ ಟಿ20 ಪಂದ್ಯ ಜೂನ್ 28 ರಂದು ಸಂಜೆ 6 ಗಂಟೆಗೆ ಬೆಲ್‌ಫಾಸ್ಟ್‌ನಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:00 pm, Mon, 22 June 26

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!