AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಚ್ಚರಿಗೆ 160 ರನ್​ಗಳ ಸೋಲು! ಅಭಿಮಾನಿಗಳಿಗೆ ಗೆಲುವಿನ ಉಡುಗೊರೆ ನೀಡಿದ ಟೀಂ ಇಂಡಿಯಾ

IND vs NED, ICC World Cup 2023: ಇದು  ಈ ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಸತತ 9ನೇ ಗೆಲುವಾಗಿದ್ದು, ಈ ಗೆಲುವಿನೊಂದಿಗೆ ಭಾರತ ಒಂದು ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ಸತತ ಗೆಲುವುಗಳನ್ನು ಪಡೆದ ಎರಡನೇ ತಂಡ ಎನಿಸಿಕೊಂಡಿದೆ. ಸತತ 11 ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.

ಡಚ್ಚರಿಗೆ 160 ರನ್​ಗಳ ಸೋಲು! ಅಭಿಮಾನಿಗಳಿಗೆ ಗೆಲುವಿನ ಉಡುಗೊರೆ ನೀಡಿದ ಟೀಂ ಇಂಡಿಯಾ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Nov 12, 2023 | 10:15 PM

Share

ಬೆಂಗಳೂರಿನ ಎಂ ಚಿನ್ನಸ್ವಾಮಿ  ಮೈದಾನದಲ್ಲಿ (M. Chinnaswamy Stadium) ನಡೆದ ಭಾರತ ಹಾಗೂ ನೆದರ್ಲೆಂಡ್ಸ್ (India Vs Netherlands) ನಡುವಿನ ವಿಶ್ವಕಪ್ (ICC ODI World Cup 2023) ಪಂದ್ಯವನ್ನು ರೋಹಿತ್ ಪಡೆ ಬರೋಬ್ಬರಿ 160 ರನ್​ಗಳಿಂದ ಗೆದ್ದು ಬೀಗಿದೆ. ಇದು  ಈ ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಸತತ 9ನೇ ಗೆಲುವಾಗಿದ್ದು, ಈ ಗೆಲುವಿನೊಂದಿಗೆ ಭಾರತ ಒಂದು ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ಸತತ ಗೆಲುವುಗಳನ್ನು ಪಡೆದ ಎರಡನೇ ತಂಡ ಎನಿಸಿಕೊಂಡಿದೆ. ಸತತ 11 ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಬಳಿಕ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 410 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ್ದ ನೆದರ್ಲೆಂಡ್ಸ್ ತಂಡ 250 ರನ್​ಗಳಿಗೆ ಆಲೌಟ್ ಆಯಿತು.

ಆರಂಭಿಕರ ಅರ್ಧಶತಕ

ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ 100 ರನ್​ಗಳ ಶತಕದ ಜೊತೆಯಾಟ ಹಂಚಿಕೊಂಡರು. ಇದೇ ವೇಳೆ ನಾಯಕ ರೋಹಿತ್ ಶರ್ಮಾ 54 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಾಯದಿಂದ 61 ರನ್ ಚಚ್ಚಿದರು. ಹಾಗೆಯೇ ರೋಹಿತ್​ಗೆ ಉತ್ತಮ ಸಾಥ್ ನೀಡಿದ ಶುಭ್​ಮನ್ ಗಿಲ್ ಕೂಡ 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 51 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಇವರಿಬ್ಬರಿಗೂ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ.

KL Rahul: ಬೆಂಗಳೂರಿನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್..!

ವಿರಾಟ್ ಅರ್ಧಶತಕ

ಮೊದಲ ಎರಡು ವಿಕೆಟ್​ಗಳ ಪತನದ ಬಳಿಕ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅರ್ಧಶತಕದ ಜೊತೆಯಾಟ ಹಂಚಿಕೊಂಡರು. ಕರ್ನಾಟಕದ ದತ್ತುಪುತ್ರ ಎನಿಸಿಕೊಳ್ಳುವ ಕೊಹ್ಲಿ ಬೆಂಗಳೂರಿನಲ್ಲಿ 50ನೇ ಶತಕ ಸಿಡಿಸುತ್ತಾರೆ ಎಂದು ಎಲ್ಲರು ನಿರೀಕ್ಷಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಅಂತಿಮವಾಗಿ ಕೊಹ್ಲಿ 56 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 51 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು. ಆದರೆ ಶ್ರೇಯಸ್ ಅಯ್ಯರ್ ಮಾತ್ರ ಅರ್ಧಶತಕದ ಬಳಿಕವೂ ತಮ್ಮ ಆಕ್ರಮಣಕಾರಿ ಆಟವನ್ನು ಮುಂದುವರಿಸಿದರು.

ಶ್ರೇಯಸ್- ರಾಹುಲ್ ಶತಕ

ಶ್ರೇಯಸ್​ಗೆ ಉತ್ತಮ ಸಾಥ್ ನೀಡಿದ ಕನ್ನಡಿಗ ಕೆಎಲ್ ರಾಹುಲ್ ತವರಿನಲ್ಲಿ ಶತಕ ಸಿಡಿಸಿ ಮಿಂಚಿದರು. ಇದರಲ್ಲಿ ಶ್ರೇಯಸ್ ಅಯ್ಯರ್, ತಮ್ಮ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್​ಗಳ ಸಹಿತ ಅಜೇಯ 128 ರನ್ ಚಚ್ಚಿದರು. ಕೆಎಲ್ ರಾಹುಲ್ ಕೂಡ ಅಯ್ಯರ್ ಜೊತೆಗೆ 200 ರನ್​ಗಳ ಜೊತೆಯಾಟ ಹಂಚಿಕೊಂಡಿದಲ್ಲದೆ, 64 ಎಸೆತಗಳಲ್ಲಿ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಬಾರಿಸಿ ಇನ್ನಿಂಗ್ಸ್​ನ ಕೊನೆಯ ಓವರ್​ನಲ್ಲಿ ತಮ್ಮ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡು 410 ರನ್ ಕಲೆಹಾಕಿತು.

ನೆದರ್ಲೆಂಡ್ಸ್ ಇನ್ನಿಂಗ್ಸ್

411 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ನೆದರ್ಲೆಂಡ್ಸ್​ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ವೆಸ್ಲಿ ಬ್ಯಾರೆಸಿ ಕೇವಲ 4 ರನ್​ಗಳಿಗೆ ಪೆವಲಿಯನ್ ಸೇರಿಕೊಂಡರು. ನಂತರ ಮ್ಯಾಕ್ಸ್ ಒ’ಡೌಡ್ (30 ರನ್) ಹಾಗೂ ಕಾಲಿನ್ ಅಕರ್ಮನ್ (35 ರನ್) 61 ರನ್​ಗಳ ಜೊತೆಯಾಟ ಹಂಚಿಕೊಂಡರು. ಆದರೆ ಇವರಿಬ್ಬರಿಗೂ ಬೃಹತ್ ಜೊತೆಯಾಟ ಕಟ್ಟಲು ಸಾಧ್ಯವಾಗಲಿಲ್ಲ. ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ ಕೂಡ 45 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಕೆಳಕ್ರಮಾಂಕದಲ್ಲಿ ತೇಜ ನಿಡಮನೂರು ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಕೊಂಚ ಹೋರಾಟ ನೀಡಿದರು. ಉಳಿದಂತೆ ತಂಡದ ಯಾವ ಬ್ಯಾಟರ್​ಗಳಿಗೂ​ ಕೂಡ ಭಾರತದ ಬೌಲಿಂಗ್ ದಾಳಿ ಮುಂದೆ ನಿಲ್ಲಲು ಸಾಧ್ಯವಾಗಲಿಲ್ಲ. ಭಾರತದ ಪರ ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರೆ, ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ತಲಾ 1 ವಿಕೆಟ್ ಪಡೆದರು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಬರೋಬ್ಬರಿ 9 ಬೌಲರ್​ಗಳನ್ನು ದಾಳಿಗಿಳಿಸಿದ್ದು ವಿಶೇಷವಾಗಿತ್ತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:39 pm, Sun, 12 November 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?