AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಪಂತ್-ಗಿಲ್ ಓಪನರ್ಸ್​, ಉಮ್ರಾನ್‌ಗೆ ಅವಕಾಶ? ಭಾರತದ ಸಂಭಾವ್ಯ ಪ್ಲೇಯಿಂಗ್ XI ಹೀಗಿದೆ

India vs New Zealand Playing XI: ಸರಣಿಯ ಮೊದಲ ಪಂದ್ಯ ನವೆಂಬರ್ 18 ಶುಕ್ರವಾರದಂದು ವೆಲ್ಲಿಂಗ್ಟನ್‌ನಲ್ಲಿ ನಡೆಯಲಿದ್ದು, ಟೀಂ ಇಂಡಿಯಾದ ಆಡುವ XI ಹೇಗಿರುತ್ತದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ?

IND vs NZ: ಪಂತ್-ಗಿಲ್ ಓಪನರ್ಸ್​, ಉಮ್ರಾನ್‌ಗೆ ಅವಕಾಶ? ಭಾರತದ ಸಂಭಾವ್ಯ ಪ್ಲೇಯಿಂಗ್ XI ಹೀಗಿದೆ
Team India
TV9 Web
| Edited By: |

Updated on: Nov 18, 2022 | 7:01 AM

Share

ಮತ್ತೊಮ್ಮೆ ಟಿ20 ವಿಶ್ವಕಪ್ (T20 World Cup 2022) ಪ್ರಶಸ್ತಿ ಗೆಲ್ಲುವ ಅವಕಾಶ ಭಾರತ ಕ್ರಿಕೆಟ್ ತಂಡದ ಕೈಯಿಂದ ಕೈ ತಪ್ಪಿದೆ. ಆಸ್ಟ್ರೇಲಿಯಾದಲ್ಲಿ ನಡೆದ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾಗೆ (Team India) ಸೆಮಿಫೈನಲ್ ಅಡಚಣೆಯನ್ನು ದಾಟಲು ಸಾಧ್ಯವಾಗಲಿಲ್ಲ. ಈ ಸೋಲಿನ ಸುಮಾರು ಒಂದು ವಾರದ ನಂತರ ಭಾರತ ತಂಡ ಮತ್ತೊಮ್ಮೆ ಮೈದಾನಕ್ಕಿಳಿಯಲಿದ್ದು, ಟಿ20 ಸರಣಿಯಲ್ಲಿ ನ್ಯೂಜಿಲೆಂಡ್ ಎದುರು ಸೆಣಸಾಡಲಿದೆ. ಸರಣಿಯ ಮೊದಲ ಪಂದ್ಯ ನವೆಂಬರ್ 18 ಶುಕ್ರವಾರದಂದು ವೆಲ್ಲಿಂಗ್ಟನ್‌ನಲ್ಲಿ ನಡೆಯಲಿದ್ದು, ಟೀಂ ಇಂಡಿಯಾದ ಆಡುವ XI ಹೇಗಿರುತ್ತದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ?

ವಿಶ್ವಕಪ್‌ನ ಮಧ್ಯೆ ಈ ಸರಣಿಗೆ ತಂಡವನ್ನು ಪ್ರಕಟಿಸಲಾಯಿತು. ಅಲ್ಲದೆ ನಾಯಕ ರೋಹಿತ್ ಶರ್ಮಾ, ಉಪನಾಯಕ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಕೆಲವು ಹಿರಿಯ ಆಟಗಾರರಿಗೆ ಈ ಸರಣಿಯಿಂದ ಬ್ರೇಕ್ ನೀಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ತಂಡದ ಸಾರಥ್ಯ ವಹಿಸಲಾಗಿದೆ.

ರಿಷಬ್ ಪಂತ್ ಮೇಲೆ ಬಿಗ್ ಬೆಟ್?

ವೆಲ್ಲಿಂಗ್ಟನ್ ಟೀಂ ಇಂಡಿಯಾದ ಮೊದಲ ಟೆಸ್ಟ್ ಆಗಿದ್ದು, ಕೆಲವು ಆಟಗಾರರಿಗೆ ದೊಡ್ಡ ಅವಕಾಶವಿದೆ. ಇದರಲ್ಲಿ ದೊಡ್ಡ ಹೆಸರು ರಿಷಬ್ ಪಂತ್. ವಿಶ್ವಕಪ್‌ನಲ್ಲಿ ಪಂತ್ ಎರಡು ಪಂದ್ಯಗಳಲ್ಲಿ ಅವಕಾಶ ಪಡೆದರೂ ಎರಡರಲ್ಲೂ ವಿಶೇಷ ಸಾಧನೆ ಮಾಡಲು ಸಾಧ್ಯವಾಗಲಿಲ್ಲ. ಆದರೆ ಹೊಸ ತಂಡದಲ್ಲಿ ಇನಿಂಗ್ಸ್ ಆರಂಭದಿಂದಲೇ ಬೌಲರ್​ಗಳನ್ನು ಒಗೆಯಲು ಆರಂಭಿಸುವ ಮೂಲಕ ಓಪನಿಂಗ್ ಜವಾಬ್ದಾರಿ ಸಿಗುತ್ತದೆ ಎಂಬ ನಿರೀಕ್ಷೆ ಹೆಚ್ಚಾಗಿದೆ. ಆದರೆ ಪಂತ್​ಗೆ ಓಪನಿಂಗ್ ಅವಕಾಶ ಸಿಗುತ್ತದೆಯೇ ಎಂಬುದು ಪ್ರಶ್ನೆ.

50ಕ್ಕೂ ಹೆಚ್ಚು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ನಂತರವೂ ಪಂತ್ ಈ ಮಾದರಿಯಲ್ಲಿ ಟೆಸ್ಟ್ ಅಥವಾ ಏಕದಿನದಂತಹ ಯಶಸ್ಸನ್ನು ಸಾಧಿಸಲು ಸಾಧ್ಯವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪಂತ್​ಗೆ ಮುಕ್ತವಾಗಿ ಆಡುವ ಅವಕಾಶ ನೀಡಲು ಓಪನಿಂಗ್ ಜವಬ್ದಾರಿ ನೀಡುವ ಸಾಧ್ಯತೆಗಳಿವೆ.

ಒಂದು ವೇಳೆ ಈ ಪಂದ್ಯದಲ್ಲಿ ಪಂತ್ ಓಪನಿಂಗ್ ಮಾಡಿದರೆ ಅವರ ಮತ್ತೊಬ್ಬ ಜೊತೆಗಾರ ಯಾರು ಎಂಬುದು ಪ್ರಶ್ನೆ. ಇಶಾನ್ ಕಿಶನ್ ಕೂಡ ಈ ತಂಡದಲ್ಲಿದ್ದು, ಕಳೆದ ಒಂದೂವರೆ ವರ್ಷದಲ್ಲಿ ಟೀಂ ಇಂಡಿಯಾ ಪರ ಹಲವು ಪಂದ್ಯಗಳನ್ನು ಆಡಿದ್ದಾರೆ. ಆದರೆ ಕಳೆದ ತಿಂಗಳುಗಳಿಂದ ಕಿಶನ್ ಬ್ಯಾಟ್ ಹೆಚ್ಚು ಸದ್ದು ಮಾಡಿಲ್ಲ. ಅಲ್ಲದೆ ಪಂತ್ ಅವರನ್ನು ಓಪನಿಂಗ್ ಕಳಿಸಿದರೆ, ಇಬ್ಬರು ಎಡಗೈ ಬ್ಯಾಟ್ಸ್‌ಮನ್‌ಗಳನ್ನು ಸಮಾನವಾಗಿ ಕಣಕ್ಕಿಳಿಸುವುದು ಪ್ರಯೋಜನಕಾರಿಯಾಗುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಚೊಚ್ಚಲ ಬಾರಿಗೆ ಟಿ20 ತಂಡದಲ್ಲಿ ಅವಕಾಶ ಪಡೆದಿರುವ ಶುಬ್ಮನ್ ಗಿಲ್ ಅವರಿಗೆ ಓಪನಿಂಗ್ ಭಾಗ್ಯ ಸಿಗಬಹುದು. ಐಪಿಎಲ್ 2022 ರಲ್ಲಿ ಗಿಲ್ ಅದ್ಭುತ ಪ್ರದರ್ಶನ ನೀಡಿದ್ದರು. ಅಲ್ಲದೆ ಅವರು ಆಕ್ರಮಣಕಾರಿ ಇನ್ನಿಂಗ್ಸ್‌ನ ಪಾತ್ರವನ್ನು ಸಹ ನಿರ್ವಹಿಸಬಲ್ಲರು.

ಅಯ್ಯರ್, ಹೂಡಾ ಅಥವಾ ಬೇರೆ ಯಾರಾದರೂ?

ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಕ್ಯಾಪ್ಟನ್ ಹಾರ್ದಿಕ್ ಅವರನ್ನು ಬೆಂಬಲಿಸಲು ಶ್ರೇಯಸ್ ಅಯ್ಯರ್ ಮತ್ತು ದೀಪಕ್ ಹೂಡಾ ಅವರಲ್ಲಿ ಒಬ್ಬರಿಗೆ ಅವಕಾಶ ಸಿಗಲಿದೆ. ಈ ಸರಣಿಗೆ ಕೋಚ್ ಆಗಿ ಹೋಗಿದ್ದ ವಿವಿಎಸ್ ಲಕ್ಷ್ಮಣ್, ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿರುವ ಆಟಗಾರರಿಗೆ ಅವಕಾಶವನ್ನು ನೀಡಬೇಕು ಎಂದು ಹೇಳಿದ್ದರು. ಹೀಗಾಗಿ ದೀಪಕ್ ಹೂಡಾಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ದಿನೇಶ್ ಕಾರ್ತಿಕ್ ಅವರ ಫಿನಿಶರ್ ಪಾತ್ರಕ್ಕೆ ಸಂಜು ಸ್ಯಾಮ್ಸನ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಮೂವರು ವೇಗಿಗಳಿಗೆ ಸ್ಥಾನ?

ಬೌಲಿಂಗ್‌ನಲ್ಲಿ ವೆಲ್ಲಿಂಗ್‌ಟನ್‌ನ ಪರಿಸ್ಥಿತಿಯನ್ನು ಪರಿಗಣಿಸಿದರೆ, ಮೂವರು ವೇಗದ ಬೌಲರ್‌ಗಳು ಇಳಿಯುವುದು ಖಚಿತ. ಒಂದು ವೇಳೆ ತಂಡ ಬದಲಾವಣೆ ಬಯಸಿದ್ದರೆ ಉಮ್ರಾನ್ ಮಲಿಕ್‌ಗೆ ಅವಕಾಶ ನೀಡಬೇಕಾಗುತ್ತದೆ. ಸ್ವಿಂಗ್‌ನ ಲಾಭ ಪಡೆಯಲು ಭುವನೇಶ್ವರ್ ಕುಮಾರ್ ಮತ್ತು ಅರ್ಷದೀಪ್ ಸಿಂಗ್ ಅವರೊಂದಿಗೆ ಉಪಸ್ಥಿತರಿರುತ್ತಾರೆ. ಆದರೆ, ಭುವಿ ಉತ್ತಮ ಪ್ರದರ್ಶನ ನೀಡಬೇಕೆಂಬ ಒತ್ತಡವಿರುತ್ತದೆ. ಒಂದು ವೇಳೆ ಭುವಿಗೆ ಕೋಕ್ ನೀಡಿದರೆ, ಹರ್ಷಲ್ ಪಟೇಲ್ ಅಥವಾ ಮೊಹಮ್ಮದ್ ಸಿರಾಜ್​ಗೆ ಸ್ಥಾನ ಸಿಗುವುದು ಖಚಿತ. ಇದರಲ್ಲಿ ಸಿರಾಜ್ ಮೇಲುಗೈ ಸಾಧಿಸುವುದು ಕಾಣುತ್ತಿದೆ. ಸ್ಪಿನ್ ವಿಭಾಗದಲ್ಲಿ ಯುಜ್ವೇಂದ್ರ ಚಾಹಲ್ ಮತ್ತು ವಾಷಿಂಗ್ಟನ್ ಸುಂದರ್ ತಂಡದಲ್ಲಿರುವ ಸಾಧ್ಯತೆಗಳಿವೆ.

ಭಾರತದ ಸಂಭಾವ್ಯ ತಂಡ

ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್/ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್ ಮತ್ತು ಯುಜ್ವೇಂದ್ರ ಚಾಹಲ್

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?