IND vs NZ: ಡಕ್… ಡಕ್… ಭಾರತಕ್ಕೆ ಆರಂಭಿಕ ಆಘಾತ ನೀಡಿದ ಕಿವೀಸ್

India vs New Zealand, 1st Test: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟವು ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಎರಡನೇ ದಿನದಾಟದಲ್ಲಿ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಎರಡಂಕಿ ಮೊತ್ತ ಕಲೆಹಾಕುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂರು ವಿಕೆಟ್​ಗಳನ್ನು ಕಳೆದುಕೊಂಡಿದೆ.

IND vs NZ: ಡಕ್... ಡಕ್... ಭಾರತಕ್ಕೆ ಆರಂಭಿಕ ಆಘಾತ ನೀಡಿದ ಕಿವೀಸ್
IND vs NZ
Follow us
|

Updated on: Oct 17, 2024 | 10:45 AM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೊಳಗಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

ನಾಯಕ ರೋಹಿತ್ ಶರ್ಮಾ ಕೇವಲ 2 ರನ್​ಗಳಿಸಿ ಟಿಮ್ ಸೌಥಿ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (0) ಕೂಡ ಶೂನ್ಯದೊಂದಿಗೆ ಪೆವಿಲಿಯನ್​ಗೆ ಹಿಂತಿರುಗಿದರು. ಇನ್ನು ಶುಭ್​ಮನ್ ಗಿಲ್ ಬದಲಿಯಾಗಿ ತಂಡದಲ್ಲಿ ಅವಕಾಶ ಪಡೆದ ಸರ್ಫರಾಝ್ ಖಾನ್ (0) ಕೂಡ ಸೊನ್ನೆ ಸುತ್ತುವ ಮೂಲಕ ನಿರಾಸೆ ಮೂಡಿಸಿದರು.

ಅಂದರೆ ಭಾರತ ತಂಡವು ಕೇವಲ 13 ರನ್​ಗಳಿಸುವಷ್ಟರಲ್ಲಿ 3 ಪ್ರಮುಖ ವಿಕೆಟ್ ಕಳೆದುಕೊಂಡಿದೆ. ಈ ಮೂವರಲ್ಲಿ ಇಬ್ಬರು ಡಕ್​ ಔಟ್ ಆಗಿರುವುದು ವಿಶೇಷ. ಇನ್ನು 12 ಓವರ್​ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 13 ರನ್​ ಕಲೆಹಾಕಿದ್ದು, ಕ್ರೀಸ್​ನಲ್ಲಿ ಯಶಸ್ವಿ ಜೈಸ್ವಾಲ್ (8) ಹಾಗೂ ರಿಷಭ್ ಪಂತ್ (3) ಬ್ಯಾಟಿಂಗ್ ಮಾಡುತ್ತಿದ್ದಾರೆ.

ಭಾರತ- 13/3 (12.4)

ವಿ.ಸೂ: ಸದ್ಯ ಮಳೆಯ ಕಾರಣ ಪಂದ್ಯ ಸ್ಥಗಿತಗೊಂಡಿದೆ.

ಶುಭ್​ಮನ್, ವಿಲಿಯಮ್ಸನ್ ಅಲಭ್ಯ:

ಬೆಂಗಳೂರು ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಶುಭ್​ಮನ್ ಗಿಲ್ ಹೊರಗುಳಿದಿದ್ದಾರೆ. ಕತ್ತು ನೋವಿನ ಕಾರಣ ಗಿಲ್ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದು, ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಮತ್ತೊಂದೆಡೆ ನ್ಯೂಝಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಕೂಡ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಅವರು ಪುಣೆಯಲ್ಲಿ ನಡೆಯಲಿರುವ ಎರಡನೇ ಪಂದ್ಯದ ವೇಳೆ ನ್ಯೂಝಿಲೆಂಡ್ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ರಿಷಭ್ ಪಂತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್.

ಇದನ್ನೂ ಓದಿ: IPL 2025: ಮೂವರು ಆಟಗಾರರಿಗೆ 55 ಕೋಟಿ ರೂ. ನೀಡಿದ SRH

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಅಜಾಝ್ ಪಟೇಲ್, ವಿಲಿಯಂ ಒರೋಕ್.

ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ರಣರೋಚಕ ಫೈನಲ್​ನಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್
ರಣರೋಚಕ ಫೈನಲ್​ನಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ, ಅರ್ಚಕರ ತಂಡದಿಂದ ಪೂಜೆ
ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ, ಅರ್ಚಕರ ತಂಡದಿಂದ ಪೂಜೆ
Cauvery Tirthodbhava Live: ಕಾವೇರಿ ತೀರ್ಥೋದ್ಭವ ಲೈವ್​ ನೋಡಿ
Cauvery Tirthodbhava Live: ಕಾವೇರಿ ತೀರ್ಥೋದ್ಭವ ಲೈವ್​ ನೋಡಿ