AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಟೀಂ ಇಂಡಿಯಾಕ್ಕೆ ಆಘಾತ; ಗಾಯಗೊಂಡು ಮೈದಾನದಿಂದ ಹೊರನಡೆದ ಪಂತ್..!

Rishabh Pant Injury: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಟೀಂ ಇಂಡಿಯಾಗೆ ಇದೀಗ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ಗಾಯದ ಸಮಸ್ಯೆಯಿಂದ ಮೈದಾನದಿಂದ ಹೊರ ಹೋಗಿದ್ದಾರೆ.

IND vs NZ: ಟೀಂ ಇಂಡಿಯಾಕ್ಕೆ ಆಘಾತ; ಗಾಯಗೊಂಡು ಮೈದಾನದಿಂದ ಹೊರನಡೆದ ಪಂತ್..!
ರಿಷಬ್ ಪಂತ್
ಪೃಥ್ವಿಶಂಕರ
|

Updated on:Oct 17, 2024 | 5:23 PM

Share

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಟೀಂ ಇಂಡಿಯಾಗೆ ಇದೀಗ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ಗಾಯದ ಸಮಸ್ಯೆಯಿಂದ ಮೈದಾನದಿಂದ ಹೊರ ಹೋಗಿದ್ದಾರೆ. ವಾಸ್ತವವಾಗಿ, ವಿಕೆಟ್ ಕೀಪಿಂಗ್ ಮಾಡುವಾಗ ಪಂತ್ ಈ ಗಾಯಕ್ಕೆ ಒಳಗಾಗಿದ್ದು ಅವರ ಗಾಯದ ತೀವ್ರತೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದೀಗ ಪಂತ್ ಬದಲಿಗೆ ಧೃವ್ ಜುರೇಲ್ ವಿಕೆಟ್ ಕೀಪಿಂಗ್​ ಮಾಡುತ್ತಿದ್ದಾರೆ.

ಗಾಯಕ್ಕೆ ತುತ್ತಾದ ಪಂತ್

ವಾಸ್ತವವಾಗಿ ಈ ಘಟನೆ ನಡೆದಿದ್ದು 37ನೇ ಓವರ್‌ನ ಕೊನೆಯ ಎಸೆತದಲ್ಲಿ, ರವೀಂದ್ರ ಜಡೇಜಾ ಎಸೆದ ಚೆಂಡು ಪಂತ್ ಅವರ ಮೊಣಕಾಲಿಗೆ ಬಡಿಯಿತು.  ಹೀಗಾಗಿ ತೀವ್ರ ನೋವಿನಿಂದ ಪಂತ್ ಮೈದಾನದಲ್ಲೇ ನರಳಲಾರಂಭಿಸಿದರು. ಕೂಡಲೇ ಸ್ಥಳಕ್ಕೆ ಬಂದ ಫಿಸಿಯೋ, ಪಂತ್​ಗೆ ಪ್ರಥಮ ಚಿಕಿತ್ಸೆ ನೀಡಿದರು. ಆದಾಗ್ಯೂ ಪಂತ್​ಗೆ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರನ್ನು ಮೈದಾನದಿಂದ ಹೊರಗೆ ಕರೆದುಕೊಂಡ ಹೋಗಲಾಯಿತು. ಮೈದಾನದಿಂದ ಹೊರಹೋಗುವಾಗಲು ಪಂತ್​ ನೋವಿನಿಂದ ಕುಂಟುತ್ತಾ ಸಾಗಿದರು. ಹೀಗಾಗಿ ಪಂತ್ ಬದಲಿಗೆ ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ. ಪಂತ್ ಗಾಯಗೊಂಡಿರುವುದು ಇದೀಗ ಟೀಂ ಇಂಡಿಯಾದ ಟೆನ್ಶನ್ ಹೆಚ್ಚಿಸಿದೆ. ಏಕೆಂದರೆ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 46 ರನ್ ಗಳಿಸಲು ಪಂತ್ ಅವರೇ ಕಾರಣ. ತಂಡದ ಪರ ಅತ್ಯಧಿಕ 20 ರನ್ ಬಾರಿಸಿದ್ದು ಇದೇ ಪಂತ್. ಹೀಗಾಗಿ ಪಂತ್ ಬೇಗನೇ ಚೇತರಿಸಿಕೊಳ್ಳಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ಕಿವೀಸ್ ಮೇಲುಗೈ

ಬೆಂಗಳೂರು ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ತಂಡ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಭಾರತವನ್ನು ಕೇವಲ 46 ರನ್‌ಗಳಿಗೆ ಆಲೌಟ್ ಮಾಡಿದ ನ್ಯೂಜಿಲೆಂಡ್ ತಂಡ, ತನ್ನ ಮೊದಲ ಇನ್ನಿಂಗ್ಸ್​ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದೆ. ಸದ್ಯ ಕಿವೀಸ್ ತಂಡ ಈ ಸುದ್ದಿ ಬರೆಯುವ ವೇಳೆಗೆ 3 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿದೆ. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ 134 ರನ್​ಗಳ ಮುನ್ನಡೆ ಸಾಧಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:05 pm, Thu, 17 October 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ