AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಟೀಂ ಇಂಡಿಯಾಕ್ಕೆ ಆಘಾತ; ಗಾಯಗೊಂಡು ಮೈದಾನದಿಂದ ಹೊರನಡೆದ ಪಂತ್..!

Rishabh Pant Injury: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಟೀಂ ಇಂಡಿಯಾಗೆ ಇದೀಗ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ಗಾಯದ ಸಮಸ್ಯೆಯಿಂದ ಮೈದಾನದಿಂದ ಹೊರ ಹೋಗಿದ್ದಾರೆ.

IND vs NZ: ಟೀಂ ಇಂಡಿಯಾಕ್ಕೆ ಆಘಾತ; ಗಾಯಗೊಂಡು ಮೈದಾನದಿಂದ ಹೊರನಡೆದ ಪಂತ್..!
ರಿಷಬ್ ಪಂತ್
ಪೃಥ್ವಿಶಂಕರ
|

Updated on:Oct 17, 2024 | 5:23 PM

Share

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಟೀಂ ಇಂಡಿಯಾಗೆ ಇದೀಗ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ಗಾಯದ ಸಮಸ್ಯೆಯಿಂದ ಮೈದಾನದಿಂದ ಹೊರ ಹೋಗಿದ್ದಾರೆ. ವಾಸ್ತವವಾಗಿ, ವಿಕೆಟ್ ಕೀಪಿಂಗ್ ಮಾಡುವಾಗ ಪಂತ್ ಈ ಗಾಯಕ್ಕೆ ಒಳಗಾಗಿದ್ದು ಅವರ ಗಾಯದ ತೀವ್ರತೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದೀಗ ಪಂತ್ ಬದಲಿಗೆ ಧೃವ್ ಜುರೇಲ್ ವಿಕೆಟ್ ಕೀಪಿಂಗ್​ ಮಾಡುತ್ತಿದ್ದಾರೆ.

ಗಾಯಕ್ಕೆ ತುತ್ತಾದ ಪಂತ್

ವಾಸ್ತವವಾಗಿ ಈ ಘಟನೆ ನಡೆದಿದ್ದು 37ನೇ ಓವರ್‌ನ ಕೊನೆಯ ಎಸೆತದಲ್ಲಿ, ರವೀಂದ್ರ ಜಡೇಜಾ ಎಸೆದ ಚೆಂಡು ಪಂತ್ ಅವರ ಮೊಣಕಾಲಿಗೆ ಬಡಿಯಿತು.  ಹೀಗಾಗಿ ತೀವ್ರ ನೋವಿನಿಂದ ಪಂತ್ ಮೈದಾನದಲ್ಲೇ ನರಳಲಾರಂಭಿಸಿದರು. ಕೂಡಲೇ ಸ್ಥಳಕ್ಕೆ ಬಂದ ಫಿಸಿಯೋ, ಪಂತ್​ಗೆ ಪ್ರಥಮ ಚಿಕಿತ್ಸೆ ನೀಡಿದರು. ಆದಾಗ್ಯೂ ಪಂತ್​ಗೆ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರನ್ನು ಮೈದಾನದಿಂದ ಹೊರಗೆ ಕರೆದುಕೊಂಡ ಹೋಗಲಾಯಿತು. ಮೈದಾನದಿಂದ ಹೊರಹೋಗುವಾಗಲು ಪಂತ್​ ನೋವಿನಿಂದ ಕುಂಟುತ್ತಾ ಸಾಗಿದರು. ಹೀಗಾಗಿ ಪಂತ್ ಬದಲಿಗೆ ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ. ಪಂತ್ ಗಾಯಗೊಂಡಿರುವುದು ಇದೀಗ ಟೀಂ ಇಂಡಿಯಾದ ಟೆನ್ಶನ್ ಹೆಚ್ಚಿಸಿದೆ. ಏಕೆಂದರೆ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 46 ರನ್ ಗಳಿಸಲು ಪಂತ್ ಅವರೇ ಕಾರಣ. ತಂಡದ ಪರ ಅತ್ಯಧಿಕ 20 ರನ್ ಬಾರಿಸಿದ್ದು ಇದೇ ಪಂತ್. ಹೀಗಾಗಿ ಪಂತ್ ಬೇಗನೇ ಚೇತರಿಸಿಕೊಳ್ಳಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ಕಿವೀಸ್ ಮೇಲುಗೈ

ಬೆಂಗಳೂರು ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ತಂಡ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಭಾರತವನ್ನು ಕೇವಲ 46 ರನ್‌ಗಳಿಗೆ ಆಲೌಟ್ ಮಾಡಿದ ನ್ಯೂಜಿಲೆಂಡ್ ತಂಡ, ತನ್ನ ಮೊದಲ ಇನ್ನಿಂಗ್ಸ್​ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದೆ. ಸದ್ಯ ಕಿವೀಸ್ ತಂಡ ಈ ಸುದ್ದಿ ಬರೆಯುವ ವೇಳೆಗೆ 3 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿದೆ. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ 134 ರನ್​ಗಳ ಮುನ್ನಡೆ ಸಾಧಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:05 pm, Thu, 17 October 24

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ