IND vs NZ: ಟೀಂ ಇಂಡಿಯಾಕ್ಕೆ ಆಘಾತ; ಗಾಯಗೊಂಡು ಮೈದಾನದಿಂದ ಹೊರನಡೆದ ಪಂತ್..!

Rishabh Pant Injury: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಟೀಂ ಇಂಡಿಯಾಗೆ ಇದೀಗ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ಗಾಯದ ಸಮಸ್ಯೆಯಿಂದ ಮೈದಾನದಿಂದ ಹೊರ ಹೋಗಿದ್ದಾರೆ.

IND vs NZ: ಟೀಂ ಇಂಡಿಯಾಕ್ಕೆ ಆಘಾತ; ಗಾಯಗೊಂಡು ಮೈದಾನದಿಂದ ಹೊರನಡೆದ ಪಂತ್..!
ರಿಷಬ್ ಪಂತ್
Follow us
|

Updated on:Oct 17, 2024 | 5:23 PM

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಟೀಂ ಇಂಡಿಯಾಗೆ ಇದೀಗ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ಗಾಯದ ಸಮಸ್ಯೆಯಿಂದ ಮೈದಾನದಿಂದ ಹೊರ ಹೋಗಿದ್ದಾರೆ. ವಾಸ್ತವವಾಗಿ, ವಿಕೆಟ್ ಕೀಪಿಂಗ್ ಮಾಡುವಾಗ ಪಂತ್ ಈ ಗಾಯಕ್ಕೆ ಒಳಗಾಗಿದ್ದು ಅವರ ಗಾಯದ ತೀವ್ರತೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದೀಗ ಪಂತ್ ಬದಲಿಗೆ ಧೃವ್ ಜುರೇಲ್ ವಿಕೆಟ್ ಕೀಪಿಂಗ್​ ಮಾಡುತ್ತಿದ್ದಾರೆ.

ಗಾಯಕ್ಕೆ ತುತ್ತಾದ ಪಂತ್

ವಾಸ್ತವವಾಗಿ ಈ ಘಟನೆ ನಡೆದಿದ್ದು 37ನೇ ಓವರ್‌ನ ಕೊನೆಯ ಎಸೆತದಲ್ಲಿ, ರವೀಂದ್ರ ಜಡೇಜಾ ಎಸೆದ ಚೆಂಡು ಪಂತ್ ಅವರ ಮೊಣಕಾಲಿಗೆ ಬಡಿಯಿತು.  ಹೀಗಾಗಿ ತೀವ್ರ ನೋವಿನಿಂದ ಪಂತ್ ಮೈದಾನದಲ್ಲೇ ನರಳಲಾರಂಭಿಸಿದರು. ಕೂಡಲೇ ಸ್ಥಳಕ್ಕೆ ಬಂದ ಫಿಸಿಯೋ, ಪಂತ್​ಗೆ ಪ್ರಥಮ ಚಿಕಿತ್ಸೆ ನೀಡಿದರು. ಆದಾಗ್ಯೂ ಪಂತ್​ಗೆ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರನ್ನು ಮೈದಾನದಿಂದ ಹೊರಗೆ ಕರೆದುಕೊಂಡ ಹೋಗಲಾಯಿತು. ಮೈದಾನದಿಂದ ಹೊರಹೋಗುವಾಗಲು ಪಂತ್​ ನೋವಿನಿಂದ ಕುಂಟುತ್ತಾ ಸಾಗಿದರು. ಹೀಗಾಗಿ ಪಂತ್ ಬದಲಿಗೆ ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ. ಪಂತ್ ಗಾಯಗೊಂಡಿರುವುದು ಇದೀಗ ಟೀಂ ಇಂಡಿಯಾದ ಟೆನ್ಶನ್ ಹೆಚ್ಚಿಸಿದೆ. ಏಕೆಂದರೆ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 46 ರನ್ ಗಳಿಸಲು ಪಂತ್ ಅವರೇ ಕಾರಣ. ತಂಡದ ಪರ ಅತ್ಯಧಿಕ 20 ರನ್ ಬಾರಿಸಿದ್ದು ಇದೇ ಪಂತ್. ಹೀಗಾಗಿ ಪಂತ್ ಬೇಗನೇ ಚೇತರಿಸಿಕೊಳ್ಳಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ಕಿವೀಸ್ ಮೇಲುಗೈ

ಬೆಂಗಳೂರು ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ತಂಡ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಭಾರತವನ್ನು ಕೇವಲ 46 ರನ್‌ಗಳಿಗೆ ಆಲೌಟ್ ಮಾಡಿದ ನ್ಯೂಜಿಲೆಂಡ್ ತಂಡ, ತನ್ನ ಮೊದಲ ಇನ್ನಿಂಗ್ಸ್​ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದೆ. ಸದ್ಯ ಕಿವೀಸ್ ತಂಡ ಈ ಸುದ್ದಿ ಬರೆಯುವ ವೇಳೆಗೆ 3 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿದೆ. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ 134 ರನ್​ಗಳ ಮುನ್ನಡೆ ಸಾಧಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:05 pm, Thu, 17 October 24

ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ
ಚನ್ನಪಟ್ಟಣದಿದ ಡಿಕೆ ಸುರೇಶ್, ಸುಳಿವು ನೀಡಿದ ಶಾಸಕ ತನ್ವೀರ್ ಸೇಠ್
ಚನ್ನಪಟ್ಟಣದಿದ ಡಿಕೆ ಸುರೇಶ್, ಸುಳಿವು ನೀಡಿದ ಶಾಸಕ ತನ್ವೀರ್ ಸೇಠ್
ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ