Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ 2021: ಈಡನ್ ಗಾರ್ಡನ್ಸ್​ನಲ್ಲಿ ಭಾರತ-ನ್ಯೂಜಿಲೆಂಡ್ 3ನೇ ಟಿ20: ಹೇಗಿದೆ ಪಿಚ್​?

India vs New zealand: ಈ ಪಿಚ್​ನಲ್ಲಿ ಕೊನೆಯ ಬಾರಿ ಆಡಿದ್ದು ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು. 2018 ರಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಹಂಗಾಮಿ ನಾಯಕನಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ.

IND vs NZ 2021: ಈಡನ್ ಗಾರ್ಡನ್ಸ್​ನಲ್ಲಿ ಭಾರತ-ನ್ಯೂಜಿಲೆಂಡ್ 3ನೇ ಟಿ20: ಹೇಗಿದೆ ಪಿಚ್​?
IND vs NZ 2021
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 20, 2021 | 8:46 PM

ಭಾರತ-ನ್ಯೂಜಿಲೆಂಡ್ (India vs New zealand 3rd T20) ನಡುವಣ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ (Team India) ಮುನ್ನಡೆ ಸಾಧಿಸಿದೆ. ಇದರೊಂದಿಗೆ ಭಾರತ ತಂಡವು ಸರಣಿಯನ್ನು ವಶಪಡಿಸಿಕೊಂಡಿದೆ. ಇದಾಗ್ಯೂ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಸ್ಟೇಡಿಯಂನಲ್ಲಿ ಸರಣಿಯ ಕೊನೆಯ ಪಂದ್ಯ ನಡೆಯಲಿದ್ದು, ಈ ಪಂದ್ಯವನ್ನು ಗೆಲ್ಲುವ ಮೂಲಕ ವೈಟ್​ವಾಶ್ ತಪ್ಪಿಸಿಕೊಳ್ಳುವ ಇರಾದೆಯಲ್ಲಿದೆ ನ್ಯೂಜಿಲೆಂಡ್. ಇತ್ತ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಉತ್ಸಾಹದಲ್ಲಿದ್ದಾರೆ. ಹೀಗಾಗಿಯೇ ಕೊನೆಯ ಟಿ20 ಪಂದ್ಯ ಕೂಡ ಮಹತ್ವ ಪಡೆದುಕೊಂಡಿದೆ.

ಈಡನ್ ಗಾರ್ಡನ್ಸ್​ ಪಿಚ್ ಬ್ಯಾಟರ್‌ಗಳಿಗೆ ಅತ್ಯುತ್ತಮ ಪಿಚ್​ ಎನಿಸಿಕೊಂಡಿದೆ. ಅದರಲ್ಲೂ ಇಲ್ಲಿ ಆಡಲಾದ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2ನೇ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ತಂಡಗಳು ಅತೀ ಹೆಚ್ಚು ಬಾರಿ ಗೆದ್ದಿರುವುದು ವಿಶೇಷ. ಹೀಗಾಗಿ ಟಾಸ್ ಗೆದ್ದ ತಂಡವು ಬೌಲಿಂಗ್ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಇದುವರೆಗೆ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ಒಟ್ಟು 7 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಲಾಗಿದೆ. ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಅಂದರೆ ಚೇಸಿಂಗ್ ತಂಡ 5 ಬಾರಿ ಜಯ ಸಾಧಿಸಿದೆ. ಹಾಗಾಗಿ ಈ ಮೈದಾನದಲ್ಲೂ ಟಾಸ್ ನಿರ್ಣಾಯಕ ಪಾತ್ರವಹಿಸುತ್ತದೆ ಎಂದೇ ಹೇಳಬಹುದು. ಹಾಗೆಯೇ ಈ ಪಿಚ್​ನ ಅವರೇಜ್ ಸ್ಕೋರ್ 143. ಹೀಗಾಗಿ ಮೊದಲು ಬ್ಯಾಟ್ ಮಾಡಿದ ತಂಡ ಬೃಹತ್ ಮೊತ್ತ ಪೇರಿಸದಿದ್ದರೆ ಗೆಲುವು ಕಷ್ಟ.

ಇನ್ನು ಈ ಪಿಚ್​ನಲ್ಲಿ ಕೊನೆಯ ಬಾರಿ ಆಡಿದ್ದು ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು. 2018 ರಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಹಂಗಾಮಿ ನಾಯಕನಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ. ಅಂದು ಟಾಸ್ ಗೆದ್ದಿದ್ದ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ವೆಸ್ಟ್ ಇಂಡೀಸ್ ತಂಡವನ್ನು ಟೀಮ್ ಇಂಡಿಯಾ ಬೌಲರುಗಳು ಕೇವಲ 109 ರನ್​ಗಳಿಗೆ ಆಲೌಟ್ ಮಾಡಿದ್ದರು.

110 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ 17.5 ಎಸೆತಗಳಲ್ಲಿ 3 ವಿಕೆಟ್​ ನಷ್ಟದೊಂದಿಗೆ ಗುರಿ ಮುಟ್ಟಿತ್ತು. ಅಂದರೆ ಅಂದು ಒಟ್ಟು 13 ವಿಕೆಟ್​ಗಳು ಉರುಳಿದ್ದವು. ಅದರಲ್ಲಿ 5 ವಿಕೆಟ್ ಕಬಳಿಸಿದ್ದು ಸ್ಪಿನ್ನರ್​ಗಳು ಎಂಬುದು ವಿಶೇಷ. ಹೀಗಾಗಿ ಈ ಪಿಚ್​ನಲ್ಲಿ ಸ್ಪಿನ್ನರ್​ಗಳು ಪ್ರಮುಖ ಪಾತ್ರವಹಿಸುತ್ತಾರೆ. ಹಾಗಾಗಿ ಟೀಮ್ ಇಂಡಿಯಾ ಕೂಡ ಉತ್ತಮ ಸ್ಪಿನ್ನರ್​ಗಳೊಂದಿಗೆ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

ಇದೀಗ 3 ವರ್ಷಗಳ ಬಳಿಕ ಮತ್ತೊಮ್ಮೆ ಈಡನ್ ಗಾರ್ಡನ್ಸ್​ ಅಂತಾರಾಷ್ಟ್ರೀಯ ಟಿ20 ಪಂದ್ಯದ ಆತಿಥ್ಯಕ್ಕೆ ಸಜ್ಜಾಗಿದೆ. ಈ ಬಾರಿ ಕೂಡ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದು, ಈ ಗೆಲುವಿನ ಮೂಲಕ ನ್ಯೂಜಿಲೆಂಡ್ ತಂಡವನ್ನು ಕ್ಲೀನ್ ಸ್ವೀಪ್​ ಮಾಡುವ ಇರಾದೆಯಲ್ಲಿದ್ದಾರೆ ಹಿಟ್​ಮ್ಯಾನ್​.

ಇದನ್ನೂ ಓದಿ: Syed Mushtaq Ali Trophy 2021: ರೋಚಕ ಜಯದೊಂದಿಗೆ ಫೈನಲ್​ಗೆ ಲಗ್ಗೆಯಿಟ್ಟ ಕರ್ನಾಟಕ

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು