AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಸರಣಿ ಸಮಬಲಕ್ಕೆ ಹೋರಾಟ: ಭಾರತ- ನ್ಯೂಜಿಲೆಂಡ್ ಮೂರನೇ ಏಕದಿನ ಪಂದ್ಯ ಯಾವಾಗ?

India vs New Zealand 3rd ODI: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಏಕದಿನ ಪಂದ್ಯ ನವೆಂಬರ್ 30 ರಂದು ಕ್ರಿಸ್ಟ್​ಚರ್ಚ್​ನ ಹೇಗ್ಲೆ ಓವಲ್ ಮೈದಾನದಲ್ಲಿ ನಡೆಯಲಿದೆ. ಬಾರತೀಯ ಕಾಲಮಾನದ ಪ್ರಕಾರ ಪಂದ್ಯ ಬೆಳಗ್ಗೆ 7 ಗಂಟೆಗೆ ಶುರುವಾಗಲಿದೆ.

IND vs NZ: ಸರಣಿ ಸಮಬಲಕ್ಕೆ ಹೋರಾಟ: ಭಾರತ- ನ್ಯೂಜಿಲೆಂಡ್ ಮೂರನೇ ಏಕದಿನ ಪಂದ್ಯ ಯಾವಾಗ?
india vs new zealand 3rd ODI
TV9 Web
| Edited By: |

Updated on:Nov 28, 2022 | 8:17 AM

Share

ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಏಕದಿನ ಸರಣಿ ಸಾಕಷ್ಟು ರೋಚಕತೆ ಪಡೆದುಕೊಂಡಿದೆ. ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ 7 ವಿಕೆಟ್​ಗಳ ಜಯ ಸಾಧಿಸಿ 1-0 ಮುನ್ನಡೆ ಪಡೆದುಕೊಂಡರೆ ದ್ವಿತೀಯ ಪಂದ್ಯ ಮಳೆಯಿಂದಾಗಿ ರದ್ದಾಯಿತು ಇನ್ನು ಉಳಿದಿರುವುದು ಕೇವಲ ಪಂದ್ಯ ಮಾತ್ರ. ಹೀಗಾಗಿ ಸರಣಿ ಗೆಲ್ಲುವ ಟೀಮ್ ಇಂಡಿಯಾದ (Team India) ಕನಸು ನುಚ್ಚಿನೂರಾಗಿದೆ. ಈಗೇನಿದ್ದರು ಕನಿಷ್ಠ ಸರಣಿಯನ್ನು ಕಳೆದುಕೊಳ್ಳದೆ ಸಮಬಲ ಮಾಡಲು ಹೋರಾಟ ನಡೆಸಬೇಕಿದೆ. ಸೋತರೆ ಧವನ್ (Shikhar Dhawan)​ ನಾಯಕತ್ವಕ್ಕೆ ಹಾಗೂ ಭಾರತಕ್ಕೆ ದೊಡ್ಡ ಹಿನ್ನಡೆಯೆಂದೇ ಹೇಳಬಹುದು. ಹಾಗಾದರೆ ತೃತೀಯ ಏಕದಿನ ಕದನ ಯಾವಾಗ?, ಎಲ್ಲಿ ನಡೆಯಲಿದೆ? ಎಂಬುದನ್ನು ನೋಡೋಣ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಏಕದಿನ ಪಂದ್ಯ ನವೆಂಬರ್ 30 ರಂದು ಕ್ರಿಸ್ಟ್​ಚರ್ಚ್​ನ ಹೇಗ್ಲೆ ಓವಲ್ ಮೈದಾನದಲ್ಲಿ ನಡೆಯಲಿದೆ. ಬಾರತೀಯ ಕಾಲಮಾನದ ಪ್ರಕಾರ ಪಂದ್ಯ ಬೆಳಗ್ಗೆ 7 ಗಂಟೆಗೆ ಶುರುವಾಗಲಿದೆ. 6:30 ಕ್ಕೆ ಟಾಸ್ ಪ್ರಕ್ರಿಯೆ ಶುರುವಾಗಲಿದೆ. ಹೇಗ್ಲೆ ಓವಲ್ ಮೈದಾನದ ಪಿಚ್ ಬ್ಯಾಟರ್​ ಮತ್ತು ಬೌಲರ್ ಇಬ್ಬರಿಗೂ ಸಹಾಯ ಮಾಡಲಿದೆ. ಇಲ್ಲಿ 300+ ರನ್ ಸುಲಭವಾಗಿ ಕಲೆಹಾಕಬಹುದು. ವೇಗಿಗಳು ಲೈನ್ ಮತ್ತು ಲೆಂತ್ ಅನ್ನು ಅರಿತು ಬೌಲಿಂಗ್ ಮಾಡಿದರೆ ಬ್ಯಾಟರ್​ಗಳು ಪರದಾಡುವುದು ಖಚಿತ. ಭಾರತ ಈ ಮೈದಾನದಲ್ಲಿ ಇದುವರೆಗೆ ಒಂದೂ ಏಕದಿನ ಪಂದ್ಯವನ್ನು ಆಡಿಲ್ಲ. ನ್ಯೂಜಿಲೆಂಡ್ ಆಡಿದ 11 ಪಂದ್ಯಗಳ ಪೈಕಿ 10 ರಲ್ಲಿ ಜಯ ಸಾಧಿಸಿದೆ. ಈ ಪಂದ್ಯಕ್ಕೆ ಮಳೆ ಬರುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ.

ಸಂಜು ಸ್ಯಾಮ್ಸನ್​ಗೆ ಅವಕಾಶವಿಲ್ಲ:

ಇದನ್ನೂ ಓದಿ
Image
ಭಾರತದಲ್ಲಿನ ವಿಶ್ವಕಪ್ ಬಹಿಷ್ಕರಿಸುವ ಧೈರ್ಯ ಪಾಕಿಸ್ತಾನಕ್ಕಿಲ್ಲ ಎಂದ ಪಾಕ್ ಕ್ರಿಕೆಟಿಗ
Image
Suresh Raina: ಸುರೇಶ್ ರೈನಾ ಹೆಸರಿನಲ್ಲಿರುವ ಈ 3 IPL ದಾಖಲೆಗಳ ಬಗ್ಗೆ ಗೊತ್ತಾ?
Image
Suryakumar Yadav: ಟಾಪ್-1 ಪಟ್ಟಿಗೆ ಸೂರ್ಯಕುಮಾರ್ ಯಾದವ್ ಎಂಟ್ರಿ..!
Image
Shubman Gill: ಸಚಿನ್, ದ್ರಾವಿಡ್ ದಾಖಲೆ ಮುರಿದ ಶುಭ್​ಮನ್ ಗಿಲ್

ಮೂರನೇ ಏಕದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಅನುಮಾನ. ದ್ವಿತೀಯ ಪಂದ್ಯದಲ್ಲಿ ಆಡಿದ ಆಟಗಾರರೇ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಸಂಜು ಸ್ಯಾಮ್ಸನ್ ಮತ್ತೊಮ್ಮೆ ಬೆಂಚ್ ಕಾಯಬೇಕಿದೆ. ಭಾರತದಲ್ಲಿ ಆರನೇ ಬೌಲರ್​ ಅವಶ್ಯತೆ ತುಂಬಾ ಇದೆ. ಮೊದಲ ಪಂದ್ಯದಲ್ಲಿ ಅರ್ಶ್​ದೀಪ್ ಸಿಂಗ್, ಯುಜ್ವೇಂದ್ರ ಚಹಲ್​, ಶಾರ್ದೂಲ್​ ಸೇರಿ ಪ್ರತಿ ಬೌಲರ್ ದುಬಾರಿಯಾದರು. ಹೀಗಾಗಿ ಎರಡನೇ ಏಕದಿನಕ್ಕೆ ಅರನೇ ಬೌಲರ್ ಅಗತ್ಯವಿದ್ದ ಕಾರಣ ಓರ್ವ ಬ್ಯಾಟರ್ ಅನ್ನು ಹೊರಗಿಡುವುದು ಅನಿವಾರ್ಯವಾಗಿತ್ತು. ಧವನ್ ನಾಯಕನಾದರೆ, ಗಿಲ್ ಓಪನರ್, ಶ್ರೇಯಸ್ ಅಯ್ಯರ್ ಹಾಗೂ ಸೂರ್ಯಕುಮರ್ ಫಾರ್ಮ್​ನಲ್ಲಿದ್ದಾರೆ. ರಿಷಭ್ ಪಂತ್ ಉಪ ನಾಯಕ. ಹೀಗೆ ತಂಡದಿಂದ ಸ್ಯಾಮ್ಸನ್ ಅವರನ್ನು ಬಿಟ್ಟರೆ ಮತ್ಯಾರನ್ನು ಹೊರಗಿಡುವ ಸ್ಥಿತಿಯಲ್ಲಿ ಮ್ಯಾನೇಜ್ಮೆಂಟ್ ಇರಲಿಲ್ಲ. ಇದು ತೃತೀಯ ಏಕದಿನಕ್ಕೂ ಮುಂದುವರೆಯಲಿದೆ.

ದ್ವಿತೀಯ ಏಕದಿನ ಏನಾಗಿತ್ತು?:

ಹ್ಯಾಮಿಲ್ಟನ್​ನ ಸೀಡನ್ ಪಾರ್ಕ್​ನಲ್ಲಿ ನಡದ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ದ್ವಿತೀಯ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಪಂದ್ಯ ಆರಂಭಕ್ಕೂ ಮುನ್ನ ಟಾಸ್ ಪ್ರಕ್ರಿಯೆಗೇ ವರುಣ ಅಡ್ಡಿ ಪಡಿಸಿದ. ಬಳಿಕ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್​​ಗೆ ಇಳಿದ ಟೀಮ್ ಇಂಡಿಯಾ ಪರ ಓಪನರ್​ಗಳಾದ ನಾಯಕ ಶಿಖರ್ ಧವನ್ ಹಾಗೂ ಶುಭ್​ಮನ್ ಗಿಲ್ ಉತ್ತಮ ಆರಂಭ ಒದಗಿಸಿದರು. ಆದರೆ, 4.5 ಓವರ್​ಗೆ ಭಾರತ ವಿಕೆಟ್ ನಷ್ಟವಿಲ್ಲದೆ 22 ರನ್ ಗಳಿಸಿದ್ದಾಗ ಮಳೆ ಪುನಃ ಶುರುವಾಯಿತು. ಬಳಿಕ ಓವರ್ ಕಡಿತದ ಪ್ರಕ್ರಿಯೆ ಶುರುವಾಯಿತು. ಹೀಗಾಗಿ 29 ಓವರ್​ಗಳ ಪಂದ್ಯವನ್ನ ಆಡಿಸಲು ನಿರ್ಧಾರ ಮಾಡಲಾಯಿತು.

ಮಳೆ ನಿತ್ತ ಬಳಿಕ ಬ್ಯಾಟಿಂಗ್ ಮುಂಂದುವರೆಸಲು ಬಂದ ಭಾರತ ಶಿಖರ್ ಧವನ್ (3) ವಿಕೆಟ್ ಕಳೆದುಕೊಂಡಿತು. ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ಶುಭ್​ಮನ್ ಗಿಲ್ ಬಿರುಸಿನ ಆಟ ಆಡಿದರು. ಆದರೆ, ಮಳೆಯ ಆಟದ ಮುಂದೆ ಯಾರ ಆಟವೂ ನಿಂತು ಹೋಯಿತು. 13ನೇ ಓವರ್ ಆಗುವಾಗ ಮತ್ತೆ ಜೋರಾಗಿ ಮಳೆ ಸುರಿದ ಪರಿಣಾಮ ಆಟಗಾರರೆಲ್ಲ ಪೆವಿಲಿಯನ್​ಗೆ ತೆರಳಿದರು. ಈ ಸಂದರ್ಭ ಭಾರತ 12.5 ಓವರ್​ಗೆ 1 ವಿಕೆಟ್ ನಷ್ಟಕ್ಕೆ 89 ರನ್ ಗಳಿಸಿತ್ತು. ಸೂರ್ಯ ಅಜೇಯ 34 ಮತ್ತು ಗಿಲ್ ಅಜೇಯ 45 ರನ್ ಸಿಡಿಸಿದ್ದರು. ನಂತರ ಕೆಲಹೊತ್ತು ಕಾದರೂ ಮಳೆ ಕಡಿಮೆ ಆಗಲಿಲ್ಲ. ಅಂತಿಮವಾಗಿ ಪಂದ್ಯವನ್ನು ಸ್ಥಗಿತಗೊಳಿಸುವ ತೀರ್ಮಾನಕ್ಕೆ ಬಂದರು.

Published On - 8:17 am, Mon, 28 November 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್