AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಸಂಜು ಸ್ಯಾಮ್ಸನ್​​ಗೆ ಇದುವೇ ಕೊನೆಯ ಚಾನ್ಸ್​

India vs New zealand: ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಬ್ಯಾಟರ್ ಎಂದರೆ ಅದು ಸಂಜು ಸ್ಯಾಮ್ಸನ್. ಆಡಿದ 4 ಇನಿಂಗ್ಸ್​ಗಳಿಂದ ಕಲೆಹಾಕಿದ್ದು ಕೇವಲ 40 ರನ್​ಗಳು ಮಾತ್ರ. ಹೀಗಾಗಿಯೇ ಸಂಜು ಸ್ಯಾಮ್ಸನ್ ಪಾಲಿಗೆ ಐದನೇ ಟಿ20 ಪಂದ್ಯವು ನಿರ್ಣಾಯಕ.

IND vs NZ: ಸಂಜು ಸ್ಯಾಮ್ಸನ್​​ಗೆ ಇದುವೇ ಕೊನೆಯ ಚಾನ್ಸ್​
Sanju Samson
ಝಾಹಿರ್ ಯೂಸುಫ್
|

Updated on: Jan 31, 2026 | 2:15 PM

Share

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು (ಜ.31) ತಿರುವನಂತಪುರದ ಗ್ರೀನ್​ಫೀಲ್ಡ್ ಮೈದಾನದಲ್ಲಿ ನಡೆಯಲಿರುವ ಪಂದ್ಯವು ಸಂಜು ಸ್ಯಾಮ್ಸನ್​ ಪಾಲಿಗೆ ಕೊನೆಯ ಚಾನ್ಸ್​. ಏಕೆಂದರೆ ಕಳೆದ ನಾಲ್ಕು ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಸ್ಯಾಮ್ಸನ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ.

ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 10 ರನ್ ಬಾರಿಸಿದ್ದ ಸ್ಯಾಮ್ಸನ್, ದ್ವಿತೀಯ ಪಂದ್ಯದಲ್ಲಿ 6 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ಮೂರನೇ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಹಾಗೆಯೇ ನಾಲ್ಕನೇ ಪಂದ್ಯದಲ್ಲಿ 24 ರನ್​ ಬಾರಿಸಿ ವಿಕೆಟ್ ಒಪ್ಪಿಸಿದ್ದರು.

ಅಂದರೆ ಕಳೆದ ನಾಲ್ಕು ಇನಿಂಗ್ಸ್​ಗಳ ಮೂಲಕ ಸ್ಯಾಮ್ಸನ್ ಕಲೆಹಾಕಿರುವುದು ಕೇವಲ 40 ರನ್​ಗಳು ಮಾತ್ರ. ಹೀಗಾಗಿಯೇ ಐದನೇ ಟಿ20 ಪಂದ್ಯವು ಸಂಜು ಸ್ಯಾಮ್ಸನ್ ಪಾಲಿಗೆ ನಿರ್ಣಾಯಕ. ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರೆ ಮಾತ್ರ ಅವರು ಟಿ20 ವಿಶ್ವಕಪ್​ನಲ್ಲಿ ಆರಂಭಿಕನಾಗಿ ಮುಂದುವರೆಯಬಹುದು.

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು:

ಸಂಜು ಸ್ಯಾಮ್ಸನ್ ಐದನೇ ಟಿ20 ಪಂದ್ಯದಲ್ಲೂ ವಿಫಲರಾದರೆ, ಟಿ20 ವಿಶ್ವಕಪ್​ನಲ್ಲಿ ಆರಂಭಿಕನಾಗಿ ಇಶಾನ್ ಕಿಶನ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಏಕೆಂದರೆ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿರುವ ತಿಲಕ್ ವರ್ಮಾ ಮುಂಬರುವ ಟಿ20 ವಿಶ್ವಕಪ್​ ವೇಳೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ತಿಲಕ್ ವರ್ಮಾ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಇತ್ತ ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿರುವ ಇಶಾನ್ ಕಿಶನ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ.

ಸಂಜು ಸ್ಯಾಮ್ಸನ್ ಕೊನೆಯ ಟಿ20 ಪಂದ್ಯದಲ್ಲೂ ವಿಫಲರಾದರೆ ಇಶಾನ್ ಕಿಶನ್​ಗೆ ಆರಂಭಿಕನ ಸ್ಥಾನ ದೊರೆಯುವುದು ಖಚಿತ. ಹೀಗಾಗಿಯೇ ನ್ಯೂಝಿಲೆಂಡ್ ವಿರುದ್ಧದ ಕೊನೆಯ ಟಿ20 ಪಂದ್ಯವು ಸಂಜು ಸ್ಯಾಮ್ಸನ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಈ ಪಂದ್ಯದಲ್ಲೂ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದರೆ ಟಿ20 ವಿಶ್ವಕಪ್​ನಲ್ಲಿ ಅಭಿಷೇಕ್ ಶರ್ಮಾ ಜೊತೆ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

ಇದನ್ನೂ ಓದಿ: ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಗುಡ್ ನ್ಯೂಸ್

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್.

Follow Us
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ