IND vs NZ: ಬೆಂಗಳೂರು ಟೆಸ್ಟ್ ಸೋಲು; ಟೀಂ ಇಂಡಿಯಾಗೆ ಶತಕ ವೀರನ ಆಗಮನ

IND vs NZ: ಬೆಂಗಳೂರು ಟೆಸ್ಟ್ ಸೋತಿರುವ ಟೀಂ ಇಂಡಿಯಾ ಇದೀಗ ಪುಣೆಯಲ್ಲಿ ನಡೆಯಲ್ಲಿರುವ ಎರಡನೇ ಟೆಸ್ಟ್​ ಪಂದ್ಯಕ್ಕೆ ತನ್ನ ತಯಾರಿ ಆರಂಭಿಸಿದೆ. ಅದರಂತೆ ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಿಜಿ ಟ್ರೋಫಿಯಲ್ಲಿ ದೆಹಲಿ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದ ಟೀಂ ಇಂಡಿಯಾದ ಯುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಎರಡನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಆಯ್ಕೆ ಮಾಡಿದೆ.

IND vs NZ: ಬೆಂಗಳೂರು ಟೆಸ್ಟ್ ಸೋಲು; ಟೀಂ ಇಂಡಿಯಾಗೆ ಶತಕ ವೀರನ ಆಗಮನ
ಟೀಂ ಇಂಡಿಯಾ
Follow us
|

Updated on:Oct 20, 2024 | 6:23 PM

ನ್ಯೂಜಿಲೆಂಡ್ ವಿರುದ್ಧ ಬೆಂಗಳೂರು ಟೆಸ್ಟ್ ಸೋತಿರುವ ಟೀಂ ಇಂಡಿಯಾ ಇದೀಗ ಪುಣೆಯಲ್ಲಿ ನಡೆಯಲ್ಲಿರುವ ಎರಡನೇ ಟೆಸ್ಟ್​ ಪಂದ್ಯಕ್ಕೆ ತನ್ನ ತಯಾರಿ ಆರಂಭಿಸಿದೆ. ಅದರಂತೆ ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಿಜಿ ಟ್ರೋಫಿಯಲ್ಲಿ ದೆಹಲಿ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದ ಟೀಂ ಇಂಡಿಯಾದ ಯುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಉಳಿದಿರುವ ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಆಯ್ಕೆ ಮಾಡಿದೆ. ಇದರರ್ಥ ಪುಣೆ ಟೆಸ್ಟ್​ಗೆ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡುವ ಸೂಚನೆಯನ್ನು ಬಿಸಿಸಿಐ ನೀಡಿದೆ. ಸುಂದರ್ ಆಗಮನದಿಂದಾಗಿ ಆರ್ ಅಶ್ವಿನ್ ತಂಡದಿಂದ ಹೊರನಡೆಯುವ ಸಾಧ್ಯತೆಗಳಿವೆ.

ಸುಂದರ್​ಗೆ ಟೀಂ ಇಂಡಿಯಾದಿಂದ ಬುಲಾವ್

ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಭಾರತೀಯ ಹಿರಿಯ ಆಯ್ಕೆ ಸಮಿತಿಯು ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ನ್ಯೂಜಿಲೆಂಡ್ ವಿರುದ್ಧ ಉಳಿದಿರುವ ಇನ್ನೇರಡು ಟೆಸ್ಟ್ ಪಂದ್ಯಗಳಿಗೆ ತಂಡದಲ್ಲಿ ಆಯ್ಕೆ ಮಾಡಿದ್ದು, ಪ್ರಸ್ತುತ ರಣಜಿಯಲ್ಲಿ ನಿರತರಾಗಿರುವ ಸುಂದರ್ ಇಷ್ಟರಲ್ಲೇ ಟೀಂ ಇಂಡಿಯಾವನ್ನು ಪುಣೆಯಲ್ಲಿ ಕೂಡಿಕೊಳ್ಳಲಿದ್ದಾರೆ ಎಂದಿದೆ.

ವಾಷಿಂಗ್ಟನ್ ಸುಂದರ್ 2021 ರಲ್ಲಿ ಟೀಂ ಇಂಡಿಯಾ ಪರ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಅಂದರೆ ಅವರು ಬಹಳ ದಿನಗಳ ನಂತರ ಭಾರತ ಟೆಸ್ಟ್ ತಂಡದಲ್ಲಿ ಪುನರಾಗಮನ ಮಾಡಲಿದ್ದಾರೆ. ಸುಂದರ್ ಇದುವರೆಗೆ ಟೀಂ ಇಂಡಿಯಾ ಪರ 4 ಟೆಸ್ಟ್ ಪಂದ್ಯಗಳನ್ನಾಡಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು ಆಡಿರುವ ಆರು ಇನ್ನಿಂಗ್ಸ್‌ಗಳಲ್ಲಿ ಮೂರು ಅರ್ಧ ಶತಕ ಸೇರಿದಂತೆ 66.25 ಸರಾಸರಿಯಲ್ಲಿ 265 ರನ್ ಕಲೆಹಾಕಿದ್ದಾರೆ. ಇದಲ್ಲದೇ 6 ವಿಕೆಟ್ ಕೂಡ ಕಬಳಿಸಿದ್ದಾರೆ.

ರಣಜಿ ಟ್ರೋಫಿಯಲ್ಲಿ ಡೆಲ್ಲಿ ವಿರುದ್ಧ ಶತಕ

ವಾಷಿಂಗ್ಟನ್ ಸುಂದರ್ ಪ್ರಸ್ತುತ ರಣಜಿ ಟ್ರೋಫಿಯ ಎಲೈಟ್ ಗ್ರೂಪ್ ಡಿ ನಲ್ಲಿ ತಮಿಳುನಾಡು ಮತ್ತು ದೆಹಲಿ ತಂಡಗಳ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಆಡುತ್ತಿದ್ದಾರೆ. ವಾಷಿಂಗ್ಟನ್ ಸುಂದರ್ ಈ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಶತಕ ಸಿಡಿಸಿದ್ದರು. ಕಳೆದ 7 ವರ್ಷಗಳಲ್ಲಿ ಇದು ಅವರ ಮೊದಲ ಪ್ರಥಮ ದರ್ಜೆ ಶತಕವಾಗಿದೆ. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಅವರು 269 ಎಸೆತಗಳಲ್ಲಿ 19 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 152 ರನ್ ಬಾರಿಸಿದಲ್ಲದೆ, ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಸುಂದರ್ ಎರಡು ವಿಕೆಟ್ ಕೂಡ ಪಡೆದಿದ್ದಾರೆ.

ಸುಂದರ್ ವೃತ್ತಿಜೀವನ

ವಾಷಿಂಗ್ಟನ್ ಸುಂದರ್ ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಆಡುವ ಅವಕಾಶ ಪಡೆದಿದ್ದರು. ಇದಕ್ಕೂ ಮುನ್ನ ಅವರು ಶ್ರೀಲಂಕಾ ಪ್ರವಾಸದಲ್ಲಿ ಏಕದಿನ ತಂಡದ ಭಾಗವಾಗಿದ್ದರು. ವಾಷಿಂಗ್ಟನ್ ಸುಂದರ್ ಇದುವರೆಗೆ ಟೀಂ ಇಂಡಿಯಾ ಪರ 22 ಏಕದಿನ ಹಾಗೂ 52 ಟಿ20 ಪಂದ್ಯಗಳನ್ನು ಆಡಿದ್ದಾರೆ. ಏಕದಿನದಲ್ಲಿ ಅವರು 23 ವಿಕೆಟ್‌ಗಳನ್ನು ಕಬಳಿಸಿದ್ದು, 315 ರನ್‌ಗಳನ್ನು ಸಹ ಬಾರಿಸಿದ್ದಾರೆ. ಮತ್ತೊಂದೆಡೆ, ಟಿ20ಯಲ್ಲಿ, ವಾಷಿಂಗ್ಟನ್ ಸುಂದರ್ ಇದುವರೆಗೆ ಟೀಂ ಇಂಡಿಯಾ ಪರ 47 ವಿಕೆಟ್‌ಗಳನ್ನು ಕಬಳಿಸಿದ್ದು, ಬ್ಯಾಟಿಂಗ್‌ನಲ್ಲಿ 161 ರನ್‌ ಸಹ ಸಿಡಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Sun, 20 October 24

‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್