AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಬೆಂಗಳೂರು ಟೆಸ್ಟ್ ಸೋಲು; ಟೀಂ ಇಂಡಿಯಾಗೆ ಶತಕ ವೀರನ ಆಗಮನ

IND vs NZ: ಬೆಂಗಳೂರು ಟೆಸ್ಟ್ ಸೋತಿರುವ ಟೀಂ ಇಂಡಿಯಾ ಇದೀಗ ಪುಣೆಯಲ್ಲಿ ನಡೆಯಲ್ಲಿರುವ ಎರಡನೇ ಟೆಸ್ಟ್​ ಪಂದ್ಯಕ್ಕೆ ತನ್ನ ತಯಾರಿ ಆರಂಭಿಸಿದೆ. ಅದರಂತೆ ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಿಜಿ ಟ್ರೋಫಿಯಲ್ಲಿ ದೆಹಲಿ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದ ಟೀಂ ಇಂಡಿಯಾದ ಯುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಎರಡನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಆಯ್ಕೆ ಮಾಡಿದೆ.

IND vs NZ: ಬೆಂಗಳೂರು ಟೆಸ್ಟ್ ಸೋಲು; ಟೀಂ ಇಂಡಿಯಾಗೆ ಶತಕ ವೀರನ ಆಗಮನ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Oct 20, 2024 | 6:23 PM

Share

ನ್ಯೂಜಿಲೆಂಡ್ ವಿರುದ್ಧ ಬೆಂಗಳೂರು ಟೆಸ್ಟ್ ಸೋತಿರುವ ಟೀಂ ಇಂಡಿಯಾ ಇದೀಗ ಪುಣೆಯಲ್ಲಿ ನಡೆಯಲ್ಲಿರುವ ಎರಡನೇ ಟೆಸ್ಟ್​ ಪಂದ್ಯಕ್ಕೆ ತನ್ನ ತಯಾರಿ ಆರಂಭಿಸಿದೆ. ಅದರಂತೆ ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಿಜಿ ಟ್ರೋಫಿಯಲ್ಲಿ ದೆಹಲಿ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದ ಟೀಂ ಇಂಡಿಯಾದ ಯುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಉಳಿದಿರುವ ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಆಯ್ಕೆ ಮಾಡಿದೆ. ಇದರರ್ಥ ಪುಣೆ ಟೆಸ್ಟ್​ಗೆ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡುವ ಸೂಚನೆಯನ್ನು ಬಿಸಿಸಿಐ ನೀಡಿದೆ. ಸುಂದರ್ ಆಗಮನದಿಂದಾಗಿ ಆರ್ ಅಶ್ವಿನ್ ತಂಡದಿಂದ ಹೊರನಡೆಯುವ ಸಾಧ್ಯತೆಗಳಿವೆ.

ಸುಂದರ್​ಗೆ ಟೀಂ ಇಂಡಿಯಾದಿಂದ ಬುಲಾವ್

ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಭಾರತೀಯ ಹಿರಿಯ ಆಯ್ಕೆ ಸಮಿತಿಯು ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ನ್ಯೂಜಿಲೆಂಡ್ ವಿರುದ್ಧ ಉಳಿದಿರುವ ಇನ್ನೇರಡು ಟೆಸ್ಟ್ ಪಂದ್ಯಗಳಿಗೆ ತಂಡದಲ್ಲಿ ಆಯ್ಕೆ ಮಾಡಿದ್ದು, ಪ್ರಸ್ತುತ ರಣಜಿಯಲ್ಲಿ ನಿರತರಾಗಿರುವ ಸುಂದರ್ ಇಷ್ಟರಲ್ಲೇ ಟೀಂ ಇಂಡಿಯಾವನ್ನು ಪುಣೆಯಲ್ಲಿ ಕೂಡಿಕೊಳ್ಳಲಿದ್ದಾರೆ ಎಂದಿದೆ.

ವಾಷಿಂಗ್ಟನ್ ಸುಂದರ್ 2021 ರಲ್ಲಿ ಟೀಂ ಇಂಡಿಯಾ ಪರ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಅಂದರೆ ಅವರು ಬಹಳ ದಿನಗಳ ನಂತರ ಭಾರತ ಟೆಸ್ಟ್ ತಂಡದಲ್ಲಿ ಪುನರಾಗಮನ ಮಾಡಲಿದ್ದಾರೆ. ಸುಂದರ್ ಇದುವರೆಗೆ ಟೀಂ ಇಂಡಿಯಾ ಪರ 4 ಟೆಸ್ಟ್ ಪಂದ್ಯಗಳನ್ನಾಡಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು ಆಡಿರುವ ಆರು ಇನ್ನಿಂಗ್ಸ್‌ಗಳಲ್ಲಿ ಮೂರು ಅರ್ಧ ಶತಕ ಸೇರಿದಂತೆ 66.25 ಸರಾಸರಿಯಲ್ಲಿ 265 ರನ್ ಕಲೆಹಾಕಿದ್ದಾರೆ. ಇದಲ್ಲದೇ 6 ವಿಕೆಟ್ ಕೂಡ ಕಬಳಿಸಿದ್ದಾರೆ.

ರಣಜಿ ಟ್ರೋಫಿಯಲ್ಲಿ ಡೆಲ್ಲಿ ವಿರುದ್ಧ ಶತಕ

ವಾಷಿಂಗ್ಟನ್ ಸುಂದರ್ ಪ್ರಸ್ತುತ ರಣಜಿ ಟ್ರೋಫಿಯ ಎಲೈಟ್ ಗ್ರೂಪ್ ಡಿ ನಲ್ಲಿ ತಮಿಳುನಾಡು ಮತ್ತು ದೆಹಲಿ ತಂಡಗಳ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಆಡುತ್ತಿದ್ದಾರೆ. ವಾಷಿಂಗ್ಟನ್ ಸುಂದರ್ ಈ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಶತಕ ಸಿಡಿಸಿದ್ದರು. ಕಳೆದ 7 ವರ್ಷಗಳಲ್ಲಿ ಇದು ಅವರ ಮೊದಲ ಪ್ರಥಮ ದರ್ಜೆ ಶತಕವಾಗಿದೆ. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಅವರು 269 ಎಸೆತಗಳಲ್ಲಿ 19 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 152 ರನ್ ಬಾರಿಸಿದಲ್ಲದೆ, ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಸುಂದರ್ ಎರಡು ವಿಕೆಟ್ ಕೂಡ ಪಡೆದಿದ್ದಾರೆ.

ಸುಂದರ್ ವೃತ್ತಿಜೀವನ

ವಾಷಿಂಗ್ಟನ್ ಸುಂದರ್ ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಆಡುವ ಅವಕಾಶ ಪಡೆದಿದ್ದರು. ಇದಕ್ಕೂ ಮುನ್ನ ಅವರು ಶ್ರೀಲಂಕಾ ಪ್ರವಾಸದಲ್ಲಿ ಏಕದಿನ ತಂಡದ ಭಾಗವಾಗಿದ್ದರು. ವಾಷಿಂಗ್ಟನ್ ಸುಂದರ್ ಇದುವರೆಗೆ ಟೀಂ ಇಂಡಿಯಾ ಪರ 22 ಏಕದಿನ ಹಾಗೂ 52 ಟಿ20 ಪಂದ್ಯಗಳನ್ನು ಆಡಿದ್ದಾರೆ. ಏಕದಿನದಲ್ಲಿ ಅವರು 23 ವಿಕೆಟ್‌ಗಳನ್ನು ಕಬಳಿಸಿದ್ದು, 315 ರನ್‌ಗಳನ್ನು ಸಹ ಬಾರಿಸಿದ್ದಾರೆ. ಮತ್ತೊಂದೆಡೆ, ಟಿ20ಯಲ್ಲಿ, ವಾಷಿಂಗ್ಟನ್ ಸುಂದರ್ ಇದುವರೆಗೆ ಟೀಂ ಇಂಡಿಯಾ ಪರ 47 ವಿಕೆಟ್‌ಗಳನ್ನು ಕಬಳಿಸಿದ್ದು, ಬ್ಯಾಟಿಂಗ್‌ನಲ್ಲಿ 161 ರನ್‌ ಸಹ ಸಿಡಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Sun, 20 October 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್