AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಸ್ ಗೆದ್ದವರೇ ಬಾಸ್: ಆದರೆ 15 ಓವರ್​ಗಳ ಬಳಿಕ ಪಂದ್ಯದ ಚಿತ್ರಣ ಬದಲಿಸಬಹುದು..!

India vs New Zealand: ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸುವ ತಂಡಗಳು ಗೆಲ್ಲಬೇಕಿದ್ದರೆ ತನ್ನ ರಣತಂತ್ರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕಿರುವುದು ಅನಿವಾರ್ಯ. ಏಕೆಂದರೆ ಈ ಮೈದಾನದಲ್ಲಿ ಮೊದಲು ಬ್ಯಾಟ್​ ಮಾಡಿದ ತಂಡವು ಪವರ್​ಪ್ಲೇನಲ್ಲಿ ಒಟ್ಟು 209 ರನ್ಸ್ ಕಲೆಹಾಕಿದೆ. ಈ ವೇಳೆ 5 ವಿಕೆಟ್​ಗಳನ್ನು ಕಬಳಿಸಲಷ್ಟೇ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

ಟಾಸ್ ಗೆದ್ದವರೇ ಬಾಸ್: ಆದರೆ 15 ಓವರ್​ಗಳ ಬಳಿಕ ಪಂದ್ಯದ ಚಿತ್ರಣ ಬದಲಿಸಬಹುದು..!
India vs New Zealand
TV9 Web
| Updated By: ಝಾಹಿರ್ ಯೂಸುಫ್|

Updated on: Nov 14, 2023 | 5:58 PM

Share

ಏಕದಿನ ವಿಶ್ವಕಪ್​ನ ನಾಕೌಟ್ ಪಂದ್ಯಕ್ಕೆ ಅಖಾಡ ಸಿದ್ಧವಾಗಿದೆ. ಬುಧವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತ-ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇಲ್ಲಿ ಉಭಯ ತಂಡಗಳು ಸಮಬಲ ಹೊಂದಿದ್ದರೂ, ಗೆಲುವಿನಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಏಕೆಂದರೆ ಈ ಬಾರಿಯ ವಿಶ್ವಕಪ್​ನಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಒಟ್ಟು 4 ಪಂದ್ಯಗಳನ್ನಾಡಲಾಗಿದೆ. ಈ 4 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದ್ದು ಮೊದಲು ಬ್ಯಾಟ್ ಮಾಡಿದ ತಂಡ ಎಂಬುದು ವಿಶೇಷ. ಅದರಲ್ಲೂ ಈ ನಾಲ್ಕು ಪಂದ್ಯಗಳಲ್ಲಿ ಮೂರು ಮ್ಯಾಚ್​ಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 300 ಕ್ಕೂ ಅಧಿಕ ರನ್ ಕಲೆಹಾಕಿದೆ.

ಇನ್ನು 4ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ 291 ರನ್​ ಕಲೆಹಾಕಿತ್ತು. ಅಂದರೆ ಇಲ್ಲಿ ಮೊದಲು ಬ್ಯಾಟ್ ಮಾಡುವ ತಂಡವು ಪಿಚ್​ನ ಸಂಪೂರ್ಣ ನೆರವು ಪಡೆಯಬಹುದು. ಏಕೆಂದರೆ ಮೊದಲು ಬ್ಯಾಟ್ ಮಾಡಿದ ತಂಡದ ಇಲ್ಲಿನ ಸರಾಸರಿ ಸ್ಕೋರ್ 357 ರನ್​ಗಳು.

ಇದಾಗ್ಯೂ ದ್ವಿತೀಯ ಇನಿಂಗ್ಸ್​ ಆಡುವ ತಂಡಕ್ಕೂ ಗೆಲ್ಲುವ ಅವಕಾಶವಿದೆ. ಇದಕ್ಕೆ ಸಾಕ್ಷಿಯೇ 91 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾ ತಂಡ ಅಫ್ಘಾನಿಸ್ತಾನ್ ವಿರುದ್ಧ 3 ವಿಕೆಟ್​ಗಳ ರೋಚಕ ಜಯ ಸಾಧಿಸಿರುವುದು.

ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸುವ ತಂಡಗಳು ಗೆಲ್ಲಬೇಕಿದ್ದರೆ ತನ್ನ ರಣತಂತ್ರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕಿರುವುದು ಅನಿವಾರ್ಯ. ಏಕೆಂದರೆ ಈ ಮೈದಾನದಲ್ಲಿ ಮೊದಲು ಬ್ಯಾಟ್​ ಮಾಡಿದ ತಂಡವು ಪವರ್​ಪ್ಲೇನಲ್ಲಿ ಒಟ್ಟು 209 ರನ್ಸ್ ಕಲೆಹಾಕಿದೆ. ಈ ವೇಳೆ 5 ವಿಕೆಟ್​ಗಳನ್ನು ಕಬಳಿಸಲಷ್ಟೇ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

ಇದೇ ವೇಳೆ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ತಂಡಗಳು ಪವರ್​ಪ್ಲೇನಲ್ಲಿ ಕಲೆಹಾಕಿದ್ದು 168 ರನ್​ಗಳು ಮಾತ್ರ. ಈ ವೇಳೆ 17 ವಿಕೆಟ್​ ಉರುಳಿಸುವಲ್ಲಿ ಬೌಲರ್​ಗಳು ಯಶಸ್ವಿಯಾಗಿದ್ದಾರೆ. ಅಂದರೆ ದ್ವಿತೀಯ ಇನಿಂಗ್ಸ್​ನ ಆರಂಭದಲ್ಲಿ ಸೀಮ್ ಬೌಲಿಂಗ್ ಚೆನ್ನಾಗಿ ನಡೆಯುತ್ತದೆ. ಹಾಗೆಯೇ  ಹೆಚ್ಚು ಸ್ವಿಂಗ್​ ಪಡೆಯುತ್ತದೆ. ಇದನ್ನೇ ಬಳಸಿಕೊಂಡು ದ್ವಿತೀಯ ಇನಿಂಗ್ಸ್​ನಲ್ಲಿ ಬೌಲರ್​ಗಳು ಯಶಸ್ಸು ಸಾಧಿಸಿದ್ದಾರೆ.

ಆದರೆ ದ್ವಿತೀಯ ಇನಿಂಗ್ಸ್​ನ 15 ಓವರ್​ಗಳ ಬಳಿಕ ಇದೇ ಪಿಚ್​ನಲ್ಲಿ ಬ್ಯಾಟಿಂಗ್ ಮಾಡುವುದು ಸುಲಭ. ಹೀಗಾಗಿಯೇ ವಾಂಖೆಡೆಯಲ್ಲಿ ಸೆಕೆಂಡ್ ಇನಿಂಗ್ಸ್ ಆಡುವ ತಂಡವು ಆರಂಭದಲ್ಲಿ ಟೆಸ್ಟ್ ಕ್ರಿಕೆಟ್ ಆಡುವುದು ಸೂಕ್ತ. ಒಂದು ಹಂತದವರೆಗೆ ವಿಕೆಟ್ ಬೀಳದಂತೆ ಕ್ರೀಸ್ ಕಚ್ಚಿ ನಿಂತರೆ ಆ ಬಳಿಕ ಪಂದ್ಯದ ಚಿತ್ರಣವನ್ನೇ ಬದಲಿಸಬಹುದು.

ಇದನ್ನೂ ಓದಿ: ಏಕದಿನ ವಿಶ್ವಕಪ್​ನಲ್ಲಿ ಹೊಸ ಇತಿಹಾಸ ಬರೆದ ರಚಿನ್ ರವೀಂದ್ರ

ಹೀಗಾಗಿ ವಾಂಖೆಡೆ ಮೈದಾನದಲ್ಲಿ ಟಾಸ್ ಸೋತರೂ ಗೆಲ್ಲುವ ಅವಕಾಶವಂತು ಎದುರಾಳಿ ತಂಡಕ್ಕಿದೆ. ಆದರೆ ಅದಕ್ಕಾಗಿ ಆರಂಭಿಕ ಓವರ್​ಗಳ ವೇಳೆ ತಾಳ್ಮೆಯುತ ಬ್ಯಾಟಿಂಗ್ ಪ್ರದರ್ಶಿಸಬೇಕಷ್ಟೇ. ಹೀಗೆ ತಾಳ್ಮೆಯುತ ಬ್ಯಾಟಿಂಗ್​ನೊಂದಿಗೆ 2011 ರಲ್ಲಿ ಇದೇ ಮೈದಾನದಲ್ಲಿ ಶ್ರೀಲಂಕಾ ನೀಡಿದ 275 ರನ್​ಗಳ ಗುರಿಯನ್ನು ಬೆನ್ನತ್ತಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿತ್ತು ಎಂಬುದು ಮರೆಯುವಂತಿಲ್ಲ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ