AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಜೇಬಿಗೆ ಕತ್ತರಿ ಹಾಕಿದ ಐಸಿಸಿ!

IND vs NZ: ಐಸಿಸಿ ವಿಧಿಸಿರುವ ದಂಡದ ಪ್ರಕಾರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಪಂದ್ಯ ಶುಲ್ಕ ಶೇ.60ರಷ್ಟು ಕಡಿತವಾಗಲಿದೆ. ಅದೇ ಸಮಯದಲ್ಲಿ, ಉಳಿದ ಆಟಗಾರರ ಪಂದ್ಯದ ಶುಲ್ಕದಿಂದ ಶೇಕಡಾ 20 ರಷ್ಟು ಮೊತ್ತವನ್ನು ಕಡಿತಗೊಳಿಸಲಾಗುತ್ತದೆ.

IND vs NZ: ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಜೇಬಿಗೆ ಕತ್ತರಿ ಹಾಕಿದ ಐಸಿಸಿ!
ಟೀಂ ಇಂಡಿಯಾ
TV9 Web
| Updated By: ಪೃಥ್ವಿಶಂಕರ|

Updated on:Jan 20, 2023 | 3:04 PM

Share

ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ (Team India) ದೊಡ್ಡ ಹೊಡೆತ ಬಿದ್ದಿದೆ. ಸ್ಲೋ ಓವರ್ ರೇಟ್​ನಿಂದಾಗಿ ಟೀಂ ಇಂಡಿಯಾಕ್ಕೆ ಐಸಿಸಿ ದಂಡ ವಿಧಿಸಿದೆ. ಹೈದರಾಬಾದ್​ನಲ್ಲಿ ನಡೆದ ಮೊದಲ ಏಕದಿನ ಪಂದ್ಯಕ್ಕೆದಲ್ಲಿ ರೋಹಿತ್ (Rohit Sharma) ಬಳಗ ನಿಗಧಿತ ಸಮಯಕ್ಕೆ ಓವರ್ ಮುಗಿಸದ ಕಾರಣ ಈ ದಂಡ ಹಾಕಲಾಗಿದೆ. ಹೈದರಾಬಾದ್ ಏಕದಿನ ಪಂದ್ಯದಲ್ಲಿ ಭಾರತ ತಂಡ ನಿಗದಿತ ಸಮಯಕ್ಕೆ 3 ಓವರ್ ಕಡಿಮೆ ಬೌಲಿಂಗ್ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಐಸಿಸಿ ನೀತಿ ಸಂಹಿತೆಯ (ICC Code of Conduct) ಕಲಂ 2.22ರ ಅಡಿಯಲ್ಲಿ ಭಾರತ ತಂಡಕ್ಕೆ ದಂಡ ವಿಧಿಸಲಾಗಿದೆ.

ಐಸಿಸಿ ವಿಧಿಸಿರುವ ದಂಡದ ಪ್ರಕಾರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಪಂದ್ಯ ಶುಲ್ಕ ಶೇ.60ರಷ್ಟು ಕಡಿತವಾಗಲಿದೆ. ಅದೇ ಸಮಯದಲ್ಲಿ, ಉಳಿದ ಆಟಗಾರರ ಪಂದ್ಯದ ಶುಲ್ಕದಿಂದ ಶೇಕಡಾ 20 ರಷ್ಟು ಮೊತ್ತವನ್ನು ಕಡಿತಗೊಳಿಸಲಾಗುತ್ತದೆ.

3 ಓವರ್ ಕಡಿಮೆ ಬೌಲ್ ಮಾಡಿದ ಭಾರತ

ಹೈದರಾಬಾದ್‌ನಲ್ಲಿ ಮೊದಲ ಏಕದಿನ ಪಂದ್ಯ ಮುಗಿದಾಗ ಟೀಂ ಇಂಡಿಯಾ ನಿಗದಿತ ಸಮಯದಲ್ಲಿ 3 ಓವರ್ ಕಡಿಮೆ ಬೌಲ್ ಮಾಡಿರುವುದರ ಬಗ್ಗೆ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಐಸಿಸಿ ಗಮನಕ್ಕೆ ತಂದ ಬಳಿಕ ದಂಡ ವಿಧಿಸಲಾಗಿದೆ. ವಾಸ್ತವವಾಗಿ, ಐಸಿಸಿ ನಿಯಮಗಳ ಪ್ರಕಾರ, ಆಟಗಾರರು ನಿಗದಿತ ಸಮಯದಲ್ಲಿ ಬೌಲ್ ಮಾಡದ ಪ್ರತಿ ಓವರ್‌ಗೆ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯ ಪಂದ್ಯ ಶುಲ್ಕವನ್ನು ಕಡಿತಗೊಳಿಸಲಾಗುತ್ತದೆ.

15 ಸಿಕ್ಸರ್, 15 ಬೌಂಡರಿ, 192 ರನ್‌ಗಳ ಜೊತೆಯಾಟ! ವಿಶ್ವದಾಖಲೆ ಮುರಿದ ಶಕೀಬ್-ಇಫ್ತಿಕರ್

ತಪ್ಪು ಒಪ್ಪಿಕೊಂಡ ರೋಹಿತ್ ಶರ್ಮಾ

ಆನ್ ಫೀಲ್ಡ್ ಅಂಪೈರ್​ಗಳಾದ ಅನಿಲ್ ಚೌಧರಿ, ನಿತಿನ್ ಮೆನನ್, ಮೂರನೇ ಅಂಪೈರ್ ಕೆಎನ್ ಅನಂತಪದ್ಮನಾಭನ್ ಮತ್ತು ನಾಲ್ಕನೇ ಅಂಪೈರ್ ಜಯರಾಮನ್ ಮದನಗೋಪಾಲ್ ಟೀಂ ಇಂಡಿಯಾ ಸ್ಲೋ ಓವರ್ ಮಾಡಿರುವುದಾಗಿ ದೂರು ನೀಡಿದ್ದರು. ಅಂಪೈರ್‌ಗಳ ದೂರಿನ ನಂತರ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಆದ್ದರಿಂದ ಈ ಬಗ್ಗೆ ಯಾವುದೇ ವಿಚಾರಣೆಯ ಅಗತ್ಯವಿಲ್ಲ ಎಂದು ಐಸಿಸಿ ಹೇಳಿದೆ.

ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಗೆಲುವು

ಹೈದರಾಬಾದ್​ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 12 ರನ್‌ಗಳಿಂದ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಆಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 349 ರನ್ ಗಳಿಸಿತು. ಭಾರತದ ಪರ ಶುಭ್​ಮನ್ ಗಿಲ್ 146 ಎಸೆತಗಳಲ್ಲಿ 19 ಬೌಂಡರಿ ಮತ್ತು 9 ಸಿಕ್ಸರ್‌ಗಳ ನೆರವಿನಿಂದ ದಾಖಲೆಯ 208 ರನ್ ಬಾರಿಸಿದರು. ಭಾರತ ನೀಡಿದ್ದ 350 ರನ್ ಗಳ ಗುರಿ ಬೆನ್ನತ್ತಿದ್ದ ಕಿವೀಸ್ ತಂಡ ಕೂಡ ಉತ್ತಮ ಹೋರಾಟ ನಡೆಸಿತು. ತಂಡದ ಪರವಾಗಿ ಮೈಕಲ್ ಬ್ರೇಸ್‌ವೆಲ್ ಬಿರುಸಿನ ಶತಕ ಗಳಿಸಿದರು. ಆದರೆ ಗೆಲುವಿಗೆ ಕೇವಲ 12 ರನ್‌ಗಳ ಬೇಕಿದ್ದಾಗ ಕಿವೀಸ್ ತಂಡ ಆಲೌಟ್ ಆಗುವ ಮೂಲಕ ಪಂದ್ಯವನ್ನು ಕಳೆದುಕೊಂಡಿತು.

ಇದೀಗ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಜನವರಿ 21 ರಂದು ರಾಯ್‌ಪುರದಲ್ಲಿ ನಡೆಯಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Fri, 20 January 23

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?