Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ವಿರುದ್ಧ ಮಾತ್ರ ಗೆಲ್ಲುವ ನ್ಯೂಝಿಲೆಂಡ್

India vs New Zealand, Final: ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಐಸಿಸಿ ಟೂರ್ನಿಯ ಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಭಾರತ ಗೆದ್ದಂತಹ ಇತಿಹಾಸವಿಲ್ಲ. ಹೀಗಾಗಿ ಈ ಬಾರಿ ಏನಾಗಲಿದೆ ಎಂಬುದೇ ಈಗ ಕುತೂಹಲ.

ಟೀಮ್ ಇಂಡಿಯಾ ವಿರುದ್ಧ ಮಾತ್ರ ಗೆಲ್ಲುವ ನ್ಯೂಝಿಲೆಂಡ್
India Vs New Zealand
Follow us
ಝಾಹಿರ್ ಯೂಸುಫ್
|

Updated on: Mar 09, 2025 | 7:24 AM

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಮಾ.9) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇದು ಐಸಿಸಿ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಭಾರತ-ನ್ಯೂಝಿಲೆಂಡ್ ನಡುವಣ ಮೂರನೇ ಮುಖಾಮುಖಿ. ಇದಕ್ಕೂ ಮುನ್ನ ಎರಡು ಬಾರಿ ಭಾರತ ಮತ್ತು ನ್ಯೂಝಿಲೆಂಡ್ ಫೈನಲ್ ಪಂದ್ಯಗಳನ್ನಾಡಿದೆ. ಈ ಎರಡು ಮ್ಯಾಚ್​ಗಳಲ್ಲೂ ಕಿವೀಸ್ ಪಡೆ ಜಯಿಸಿರುವುದು ವಿಶೇಷ.

ಭಾರತದ ವಿರುದ್ಧ ಗೆಲ್ಲುವ ನ್ಯೂಝಿಲೆಂಡ್:

ಐಸಿಸಿ ಟೂರ್ನಿಗಳಲ್ಲಿ ನ್ಯೂಝಿಲೆಂಡ್ ತಂಡವು ಈವರೆಗೆ 6 ಬಾರಿ ಫೈನಲ್ ಆಡಿದೆ. ಈ ಆರು ಫೈನಲ್​ಗಳಲ್ಲಿ ನ್ಯೂಝಿಲೆಂಡ್ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಅದು ಕೂಡ ಭಾರತದ ವಿರುದ್ಧ ಎಂಬುದೇ ಅಚ್ಚರಿ.

  • 2000 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಿತ್ತು. ಈ ವೇಳೆ 4 ವಿಕೆಟ್​ಗಳ ಜಯ ಸಾಧಿಸಿ ಕಿವೀಸ್ ಪಡೆ ಟ್ರೋಫಿ ಎತ್ತಿ ಹಿಡಿಯಿತು.
  • 2009 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ನ್ಯೂಝಿಲೆಂಡ್ ತಂಡ ಮತ್ತೊಮ್ಮೆ ಫೈನಲ್​ಗೆ ಪ್ರವೇಶಿಸಿತ್ತು. ಆದರೆ ಈ ಬಾರಿ ಆಸ್ಟ್ರೇಲಿಯಾ ವಿರುದ್ಧ ಕಿವೀಸ್ ಪಡೆ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದ್ದರು.
  • 2015ರ ಏಕದಿನ ವಿಶ್ವಕಪ್​ನಲ್ಲಿ ಫೈನಲ್​ಗೇರಿದ್ದ ನ್ಯೂಝಿಲೆಂಡ್ ತಂಡಕ್ಕೆ 7 ವಿಕೆಟ್​​ಗಳ ಸೋಲುಣಿಸಿ ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿಯಿತು.
  • 2019ರ ಏಕದಿನ ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ಬೌಂಡರಿ ಕೌಂಟ್​ನಲ್ಲಿ ಜಯ ಸಾಧಿಸಿ ಚೊಚ್ಚಲ ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡಿದ್ದರು.
  • 2021 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಭಾರತ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿ ಕಿವೀಸ್ ಪಡೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು.
  • 2021ರ ಟಿ20 ವಿಶ್ವಕಪ್​ನಲ್ಲಿ ಫೈನಲ್​ಗೇರಿದ್ದ ನ್ಯೂಝಿಲೆಂಡ್ ತಂಡವು ಆಸ್ಟ್ರೇಲಿಯಾ ವಿರುದ್ಧ 8 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತ್ತು.

ಅಂದರೆ ನ್ಯೂಝಿಲೆಂಡ್ ತಂಡವು ಈವರೆಗೆ ಆಡಿದ 6 ಐಸಿಸಿ ಟೂರ್ನಿ ಫೈನಲ್​ಗಳಲ್ಲಿ 2 ಬಾರಿ ಮಾತ್ರ ಜಯ ಸಾಧಿಸಿದೆ. ಅದು ಕೂಡ ಭಾರತದ ವಿರುದ್ಧ ಮಾತ್ರ. ಇದೀಗ ಉಭಯ ತಂಡಗಳು ಮೂರನೇ ಬಾರಿ ಮುಖಾಮುಖಿಯಾಗಲು ಸಜ್ಜಾಗಿದೆ.

ಇದನ್ನೂ ಓದಿ
Image
ವಿರಾಟ್ ಕೊಹ್ಲಿಗೆ 100 ಕೋಟಿ ರೂ: ಶುಭ್​ಮನ್ ಗಿಲ್​ಗೆ ಎಷ್ಟು?
Image
VIDEO: ಅಳುತ್ತಿದ್ದ ಅಭಿಮಾನಿಯನ್ನು ಸಮಾಧಾನ ಮಾಡಿದ ಕೆಎಲ್ ರಾಹುಲ್
Image
ನಾನು ಹೊಡೀತಿದ್ದೆ ಅಲ್ವಾ... ವಿರಾಟ್ ಕೊಹ್ಲಿ ಮುಂದೆ ಕೆಎಲ್ ರಾಹುಲ್ ಹತಾಶೆ
Image
Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಇದನ್ನೂ ಓದಿ: IPL 2026: ಐಪಿಎಲ್​ಗೆ ಪಾಕಿಸ್ತಾನ್ ವೇಗಿ ಮೊಹಮ್ಮದ್ ಅಮೀರ್

ಟೀಮ್ ಇಂಡಿಯಾ ಕಳೆದ ಎರಡು ಫೈನಲ್​ ಸೋಲಿನ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದ್ದರೆ, ಅತ್ತ ನ್ಯೂಝಿಲೆಂಡ್ ತಂಡವು ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ. ಹೀಗಾಗಿ ಇಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ