AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್​ ವುಮನ್ ಕ್ಯಾಚ್: ಅತ್ಯದ್ಭುತ ಡೈವಿಂಗ್ ಕ್ಯಾಚ್ ಹಿಡಿದ ರಾಧಾ ಯಾದವ್

India Women vs New Zealand Women: ಭಾರತ ಮತ್ತು ನ್ಯೂಝಿಲೆಂಡ್ ಮಹಿಳಾ ತಂಡಗಳ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ್ತಿ ರಾಧಾ ಯಾದವ್ ಅತ್ಯದ್ಭುತ ಡೈವಿಂಗ್ ಕ್ಯಾಚ್ ಹಿಡಿದಿದ್ದಾರೆ. ಈ ಅದ್ಭುತ ಫೀಲ್ಡಿಂಗ್ ವಿಡಿಯೋ ಇದೀಗ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ಪಡೆದುಕೊಳ್ಳುತ್ತಿದೆ.

TV9 Web
| Edited By: |

Updated on: Oct 28, 2024 | 8:21 AM

Share

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ಮಹಿಳಾ ತಂಡದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ್ತಿ ರಾಧಾ ಯಾದವ್ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಪರಿಣಾಮ 31 ಓವರ್​ಗಳ ವೇಳೆ ನ್ಯೂಝಿಲೆಂಡ್ ತಂಡವು 135 ರನ್​ಗಳನ್ನು ಕಲೆಹಾಕಿತ್ತು. ಈ ಹಂತದಲ್ಲಿ ದಾಳಿಗಿಳಿದ ಆರುಂಧತಿ ಪ್ರಿಯಾ ಮಿಶ್ರಾ ಇಂಡಿಯಾಗೆ ಅಮೂಲ್ಯ ಯಶಸ್ಸು ತಂದುಕೊಟ್ಟರು. ಈ ಯಶಸ್ಸಿಗೆ ಕಾರಣಕರ್ತರಾಗಿದ್ದು ರಾಧಾ ಯಾದವ್.

ಪಂದ್ಯದ 32ನೇ ಓವರ್​ನ ಮೂರನೇ ಎಸೆತದಲ್ಲಿ ಬ್ರೂಕ್ ಹಾಲ್ಲಿಡೆ ಆಫ್ ಸೈಡ್​ನತ್ತ ಬಾರಿಸಿದ್ದರು. ಚೆಂಡು 30-ಯಾರ್ಡ್-ಸರ್ಕಲ್‌ನ ಹೊರಗೆ ಬೀಳಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಇನ್​ ಫೀಲ್ಡ್​ನಲ್ಲಿದ್ದ ರಾಧಾ ಯಾದವ್ ಹಿಮ್ಮುಖವಾಗಿ ಓಡಿ ಹೋಗಿ ಅದ್ಭುತ ಡೈವಿಂಗ್​​ನೊಂದಿಗೆ ಕ್ಯಾಚ್ ಹಿಡಿದರು.

ರಾಧಾ ಯಾದವ್ ಅವರ ಈ ಸ್ಟನ್ನಿಂಗ್ ಕ್ಯಾಚ್ ನೋಡಿ ಪ್ರೇಕ್ಷಕರು ಕೂಡ ನಿಬ್ಬೆರಗಾದರು. ಇದೀಗ ಟೀಮ್ ಇಂಡಿಯಾ ಆಟಗಾರ್ತಿಯ ಅತ್ಯುತ್ತಮ ಫೀಲ್ಡಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 259 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 47.1 ಓವರ್​ಗಳಲ್ಲಿ 183 ರನ್​ಗಳಿಗೆ ಆಲೌಟ್ ಆಗಿ 76 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ