AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sarfaraz Khan: ಸ್ಪೋಟಕ ಸೆಂಚುರಿ ಸಿಡಿಸಿದ ಸರ್ಫರಾಝ್ ಖಾನ್

India vs New Zealand, 1st Test: ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಕತ್ತು ನೋವಿನ ಕಾರಣ ಶುಭ್​ಮನ್ ಗಿಲ್ ಹೊರಗುಳಿದಿದ್ದು, ಅವರ ಸ್ಥಾನದಲ್ಲಿ ಸರ್ಫರಾಝ್ ಖಾನ್ ಅವಕಾಶ ಪಡೆದಿದ್ದರು. ಇದೀಗ ಸಿಕ್ಕ ಅವಕಾಶದಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ.

Sarfaraz Khan: ಸ್ಪೋಟಕ ಸೆಂಚುರಿ ಸಿಡಿಸಿದ ಸರ್ಫರಾಝ್ ಖಾನ್
Sarfaraz Khan
ಝಾಹಿರ್ ಯೂಸುಫ್
|

Updated on:Oct 19, 2024 | 9:57 AM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ಸರ್ಫರಾಝ್ ಖಾನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ 110 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಸಿಡಿಸಿದ್ದಾರೆ.

ಇದಕ್ಕೂ ಮುನ್ನ ಮೊದಲ ಇನಿಂಗ್ಸ್​ನಲ್ಲಿ ಸರ್ಫರಾಝ್ ಖಾನ್ ಶೂನ್ಯಕ್ಕೆ ಔಟಾಗಿದ್ದರು. ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಯುವ ದಾಂಡಿಗ 3ನೇ ದಿನದಾಟದ ಮುಕ್ತಾಯದ ವೇಳೆಗೆ 78 ಎಸೆತಗಳಲ್ಲಿ 70 ರನ್ ಬಾರಿಸಿದ್ದರು. ಅದರಂತೆ ನಾಲ್ಕನೇ ದಿನದಾಟದಲ್ಲಿ ಇನಿಂಗ್ಸ್ ಮುಂದುವರೆಸಿದ ಸರ್ಫರಾಝ್ ಚೊಚ್ಚಲ ಸೆಂಚುರಿ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟೀಮ್ ಇಂಡಿಯಾ ಕಂಬ್ಯಾಕ್:

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು. ಮೊದಲ ಇನಿಂಗ್ಸ್​ನಲ್ಲಿ ಕೇವಲ 46 ರನ್​ಗಳಿಗೆ ಆಲೌಟ್ ಆಗುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಇದಾದ ಬಳಿಕ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ತಂಡವು ರಚಿನ್ ರವೀಂದ್ರ (134) ಅವರ ಶತಕದ ನೆರವಿನಿಂದ 402 ರನ್​ ಕಲೆಹಾಕಿ ಆಲೌಟ್ ಆಯಿತು.

356 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 71 ರನ್​ ಪೇರಿಸಿದ ಬಳಿಕ ಜೈಸ್ವಾಲ್ (35) ಔಟಾದರು.

ಇನ್ನು 63 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 52 ರನ್​ ಬಾರಿಸಿ ರೋಹಿತ್ ಶರ್ಮಾ ಕೂಡ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಸರ್ಫರಾಝ್ ಖಾನ್ ಶತಕದ ಜೊತೆಯಾಟದ ಮೂಲಕ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು.

ಆದರೆ ಮೂರನೇ ದಿನದಾಟದ ಅಂತಿಮ ಓವರ್​ನ ಕೊನೆಯ ಎಸೆತದಲ್ಲಿ ವಿರಾಟ್ ಕೊಹ್ಲಿ (70) ವಿಕೆಟ್​ ಕೀಪರ್​ಗೆ ಕ್ಯಾಚಿತ್ತು ನಿರಾಸೆ ಮೂಡಿಸಿದರು. ಇನ್ನು ನಾಲ್ಕನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಸರ್ಫರಾಝ್ ಖಾನ್ 110 ಎಸೆತಗಳಲ್ಲಿ 13 ಫೋರ್ ಹಾಗೂ 3 ಸಿಕ್ಸ್​ಗಳೊಂದಿಗೆ ಶತಕ ಪೂರೈಸಿದರು. ಈ ಶತಕದ ನೆರವಿನಿಂದ ಟೀಮ್ ಇಂಡಿಯಾ 57 ಓವರ್​ಗಳ ಮುಕ್ತಾಯದ ವೇಳೆ 3 ವಿಕೆಟ್ ಕಳೆದುಕೊಂಡು 275 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಸರ್ಫರಾಝ್ ಖಾನ್ ಹಾಗೂ ರಿಷಭ್ ಪಂತ್ ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ರಿಷಭ್ ಪಂತ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025: RCB ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ ರೆಡಿ

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ವಿಲ್ ಯಂಗ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ವಿಲಿಯಂ ಒರೋಕ್, ಅಜಾಝ್ ಪಟೇಲ್.

Published On - 9:53 am, Sat, 19 October 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ