AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಕಿವೀಸ್ ವಿರುದ್ಧ ಸರಣಿ ಗೆಲ್ಲುವ ಖುಷಿಯಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತಕ್ಕೆ ಆಘಾತ..!

IND vs NZ: ಮೊದಲ ಇನ್ನಿಂಗ್ಸ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಶುಬ್‌ಮನ್ ಗಿಲ್ ಅವರ ಬಲ ಮೊಣಕೈಗೆ ಗಾಯವಾಗಿತ್ತು, ಇದರಿಂದ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಅವರು ಮುನ್ನೆಚ್ಚರಿಕೆಯಾಗಿ ಮೈದಾನಕ್ಕೆ ಮರಳಲಿಲ್ಲ.

IND vs NZ: ಕಿವೀಸ್ ವಿರುದ್ಧ ಸರಣಿ ಗೆಲ್ಲುವ ಖುಷಿಯಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತಕ್ಕೆ ಆಘಾತ..!
ಗಾಯಗೊಂಡ ಗಿಲ್
TV9 Web
| Edited By: |

Updated on: Dec 04, 2021 | 7:21 PM

Share

ಮುಂಬೈ ಟೆಸ್ಟ್‌ನ ಎರಡನೇ ದಿನ ಭಾರತ ಕ್ರಿಕೆಟ್ ತಂಡಕ್ಕೆ ಶುಭ ದಿನ ಎಂದು ಸಾಭೀತಾಯಿತು. ವಾಂಖೆಡೆ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ 325 ರನ್‌ಗಳಿಗೆ ಆಲೌಟ್ ಆದ ನಂತರ, ಟೀಮ್ ಇಂಡಿಯಾ ಬೌಲಿಂಗ್‌ನಲ್ಲಿ ಅದ್ಭುತ ಪುನರಾಗಮನವನ್ನು ಮಾಡಿತು ಮತ್ತು ಕಿವೀಸ್ ತಂಡವನ್ನು ಕೇವಲ 62 ರನ್‌ಗಳಿಗೆ ಕಟ್ಟಿಹಾಕಿತು. ರವಿಚಂದ್ರನ್ ಅಶ್ವಿನ್ ಮತ್ತು ಮೊಹಮ್ಮದ್ ಸಿರಾಜ್ ನಾಯಕತ್ವದಲ್ಲಿ ಟೀಂ ಇಂಡಿಯಾದ ಬೌಲರ್‌ಗಳು ಕೇವಲ 28 ಓವರ್‌ಗಳಲ್ಲಿ ಕಿವೀಸ್ ಬ್ಯಾಟ್ಸ್‌ಮನ್‌ಗಳನ್ನು ಆಲೌಟ್ ಮಾಡಿದರು. ಇದಾದ ಬಳಿಕ ಎರಡನೇ ಇನಿಂಗ್ಸ್ ನಲ್ಲೂ ಉತ್ತಮ ಆಟ ಆರಂಭಿಸಿದ ಟೀಂ ಇಂಡಿಯಾ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 69 ರನ್ ಗಳಿಸಿದೆ. ಆದರೆ ಈ ಅವಧಿಯಲ್ಲಿ ಟೀಂ ಇಂಡಿಯಾ ಕೂಡ ದೊಡ್ಡ ಹಿನ್ನಡೆ ಅನುಭವಿಸಿದೆ. ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ಇಂಜುರಿಯಿಂದಾಗಿ 2ನೇ ಇನ್ನಿಂಗ್ಸ್​ನಲ್ಲಿ ಆರಂಭಿಕರಾಗಿ ಬ್ಯಾಟಿಂಗ್​ಗೆ ಇಳಿದಿಲ್ಲ.

ನ್ಯೂಜಿಲೆಂಡ್‌ನ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಯುವ ಬ್ಯಾಟ್ಸ್‌ಮನ್ ಶಾರ್ಟ್ ಲೆಗ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಗಾಯಗೊಂಡರು. ಇನಿಂಗ್ಸ್‌ನ 13ನೇ ಓವರ್‌ನಲ್ಲಿ ಎಡಗೈ ಕಿವೀಸ್ ಬ್ಯಾಟ್ಸ್‌ಮನ್ ಹೆನ್ರಿ ನಿಕೋಲ್ಸ್ ಅಕ್ಸರ್ ಪಟೇಲ್ ಎಸೆತದಲ್ಲಿ ಹುರುಪಿನ ಸ್ವೀಪ್ ಶಾಟ್ ಆಡಿದರು. ಬ್ಯಾಟ್ಸ್‌ಮನ್‌ಗೆ ಸಮೀಪದಲ್ಲಿ ಕ್ಯಾಚಿಂಗ್ ಸ್ಥಾನದಲ್ಲಿದ್ದ ಶುಬ್‌ಮನ್ ಈ ಹೊಡೆತದಲ್ಲಿ ಚೆಂಡನ್ನು ತಪ್ಪಿಸಲು ಪ್ರಯತ್ನಿಸಿದರು, ಆದರೆ ಚೆಂಡು ಬಲಗೈ ಮೊಣಕೈಗೆ ಬಡಿಯಿತು. ಚೆಂಡು ಬಡಿದ ತಕ್ಷಣ, ಶುಭಮನ್ ನೋವಿನಿಂದ ನರಳುತ್ತಾ ಮೈದಾನದಲ್ಲಿ ಕುಳಿತುಕೊಂಡರು. ಭಾರತ ತಂಡದ ಫಿಸಿಯೋ ಮೈದಾನಕ್ಕೆ ಬಂದು ಶುಭ್‌ಮಾನ್‌ರನ್ನು ಪರೀಕ್ಷಿಸಿದರು ಮತ್ತು ನಂತರ ಗಿಲ್ ಮೈದಾನದಿಂದ ಹೊರಬರಬೇಕಾಯಿತು. ಶುಬ್‌ಮನ್ ಬದಲಿಗೆ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್‌ಗೆ ಬಂದರು ಮತ್ತು ಅವರು ಶಾರ್ಟ್ ಲೆಗ್‌ನಲ್ಲಿ ಎರಡು ಅದ್ಭುತ ಕ್ಯಾಚ್‌ಗಳನ್ನು ಪಡೆದರು.

ಶುಭ್‌ಮನ್‌ಗೆ ಕ್ಷೇತ್ರರಕ್ಷಣೆ ಸಾಧ್ಯವಾಗಲಿಲ್ಲ ಸ್ವಲ್ಪ ಸಮಯದ ನಂತರ, ಬಿಸಿಸಿಐ ಯುವ ಆರಂಭಿಕ ಆಟಗಾರನ ಫಿಟ್ನೆಸ್ ಕುರಿತು ಅಪ್ಡೇಟ್ ಮಾಡಿದೆ. ಮಂಡಳಿ ನೀಡಿರುವ ಹೇಳಿಕೆಯ ಪ್ರಕಾರ, ಮೊದಲ ಇನ್ನಿಂಗ್ಸ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಶುಬ್‌ಮನ್ ಗಿಲ್ ಅವರ ಬಲ ಮೊಣಕೈಗೆ ಗಾಯವಾಗಿತ್ತು, ಇದರಿಂದ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಅವರು ಮುನ್ನೆಚ್ಚರಿಕೆಯಾಗಿ ಮೈದಾನಕ್ಕೆ ಮರಳಲಿಲ್ಲ ಎಂದಿದೆ.

ಪೂಜಾರ ಓಪನಿಂಗ್‌ಗೆ ಗಿಲ್ ಗಾಯದಿಂದಾಗಿ ಭಾರತ ತಂಡ ತನ್ನ ಯೋಜನೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಯಿತು. ಮೂರನೇ ಸೆಷನ್‌ನಲ್ಲಿ ನ್ಯೂಜಿಲೆಂಡ್ ಅನ್ನು ಆಲ್​ಔಟ್ ಮಾಡಿದ ನಂತರ ಟೀಮ್ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್ ಅನ್ನು ಪ್ರಾರಂಭಿಸಿತು. ಹಿರಿಯ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಮಯಾಂಕ್ ಅಗರ್ವಾಲ್ ಅವರೊಂದಿಗೆ ಆರಂಭಿಕರಾಗಿ ಬ್ಯಾಟಿಂಗ್​ಗೆ ಇಳಿದರು. ಮೊದಲ ಇನಿಂಗ್ಸ್‌ನಲ್ಲಿ ಭರ್ಜರಿ 150 ರನ್ ಗಳಿಸಿದ್ದ ಮಯಾಂಕ್ ಮತ್ತೊಮ್ಮೆ ಉತ್ತಮ ಆರಂಭ ಕಂಡರೆ, ಮೊದಲ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯದೆ ಔಟಾದ ಪೂಜಾರ ಕೂಡ ಆ ವೈಫಲ್ಯವನ್ನು ಬಿಟ್ಟು ಸುಗಮವಾಗಿ ಆರಂಭ ಮಾಡಿದರು. ಅವರ ಇನ್ನಿಂಗ್ಸ್ ಸಮಯದಲ್ಲಿ, ಪೂಜಾರ ಸರಿಯಾದ ವೇಗದಲ್ಲಿ ರನ್ ಗಳಿಸಿದರು ಮತ್ತು ಉತ್ತಮ ಸಿಕ್ಸರ್ ಅನ್ನು ಸಹ ಹೊಡೆದರು. ದಿನದಾಟದ ಅಂತ್ಯಕ್ಕೆ ಪೂಜಾರ 29 ಮತ್ತು ಮಯಾಂಕ್ 38 ರನ್ ಗಳಿಸಿ ಅಜೇಯರಾಗಿ ಮರಳಿದರು.

Follow Us
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ