AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಟೀಮ್ ಇಂಡಿಯಾ ಪಾಲಿಗೆ ಸಂಡೆ ಸೂಪರಲ್ಲ..!

India vs New Zealand, Final: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಫೈನಲ್ ಪಂದ್ಯವು ಇಂದು ಜರುಗಲಿದೆ. ಆದರೆ ಈ ಪಂದ್ಯವು ಭಾನುವಾರ ನಡೆಯುತ್ತಿರುವುದೇ ಈಗ ಟೀಮ್ ಇಂಡಿಯಾ ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ. ಏಕೆಂದರೆ ಭಾನುವಾರ ಫೈನಲ್ ಪಂದ್ಯ ನಡೆದರೆ ಭಾರತ ತಂಡ ಗೆದ್ದ ಇತಿಹಾಸವಿಲ್ಲ. ಆದರೆ ಈ ಬಾರಿ ಇತಿಹಾಸ ಬದಲಿಸುವ ಅವಕಾಶ ಭಾರತ ತಂಡದ ಮುಂದಿದೆ.

IND vs NZ: ಟೀಮ್ ಇಂಡಿಯಾ ಪಾಲಿಗೆ ಸಂಡೆ ಸೂಪರಲ್ಲ..!
Team India
TV9 Web
| Edited By: |

Updated on: Mar 09, 2025 | 8:31 AM

Share

ಟೀಮ್ ಇಂಡಿಯಾ ಪಾಲಿಗೆ ಸಂಡೆ ಸೂಪರಲ್ಲ. ಅದು ಸಹ ಐಸಿಸಿ ಫೈನಲ್​ನಲ್ಲಿ..! ಹೌದು, ಐಸಿಸಿ ಟೂರ್ನಿ ಇತಿಹಾಸದಲ್ಲಿ ಭಾರತ ತಂಡ ಭಾನುವಾರ ಫೈನಲ್ ಪಂದ್ಯ ಗೆದ್ದಿಲ್ಲ. ಆದರೆ ಈ ಬಾರಿ ಇತಿಹಾಸ ಬದಲಿಸುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಇಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್​ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದರೆ ಟೀಮ್ ಇಂಡಿಯಾ ಪಾಲಿಗೆ ಸಂಡೇ ಕೂಡ ಸೂಪರ್ ಆಗಲಿದೆ.

ಇದಕ್ಕೂ ಮುನ್ನ ಟೀಮ್ ಇಂಡಿಯಾ ಭಾನುವಾರ 5 ಬಾರಿ ಐಸಿಸಿ ಟೂರ್ನಿ ಫೈನಲ್ ಪಂದ್ಯಗಳನ್ನು ಆಡಿದೆ. ಕಾಕತಾಳೀಯ ಎಂಬಂತೆ ಈ ಐದು ಪಂದ್ಯಗಳಲ್ಲೂ ಭಾರತ ತಂಡ ಸೋತಿದೆ. ಆ ಫೈನಲ್ ಪಂದ್ಯಗಳಾವುವು ಎಂದು ನೋಡುವುದಾದರೆ…

  • 2000ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯವು ಅಕ್ಟೋಬರ್ 15 ರಂದು, ಭಾನುವಾರ ನಡೆದಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಝಿಲೆಂಡ್ 4 ವಿಕೆಟ್​ಗಳಿಂದ ಸೋಲನುಭವಿಸಿತ್ತು.
  • 2003ರ ವಿಶ್ವಕಪ್‌ನ ಫೈನಲ್ ಮಾರ್ಚ್ 23 ರಂದು ಭಾನುವಾರ ನಡೆಯಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 125 ರನ್​ಗಳಿಂದ ಸೋಲೊಪ್ಪಿಕೊಂಡಿತು.
  • 2014ರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಏಪ್ರಿಲ್ 4 ರಂದು ಭಾನುವಾರ ನಡೆಯಿತು. ಶ್ರೀಲಂಕಾ ವಿರುದ್ಧದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳಿಂದ ಸೋಲನುಭವಿಸಿತ್ತು.
  • 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಕೂಡ ನಡೆದಿರುವುದು ಭಾನುವಾರ. ಜೂನ್ 18 ರಂದು ನಡೆದಿದ್ದ ಈ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ 180 ರನ್​ಗಳಿಂದ ಪರಾಜಯಗೊಂಡಿತು.
  • 2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಸಹ ಭಾನುವಾರದಂದೇ ಜರುಗಿತು. ನವೆಂಬರ್ 19 ರಂದು ಅಹಮದಾಬಾದ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಭಾರತ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತ್ತು.

ಅಂದರೆ ಐಸಿಸಿ ಟೂರ್ನಿಗಳಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಒಮ್ಮೆಯೂ ಗೆದ್ದಿಲ್ಲ. ಇನ್ನು ಟೀಮ್ ಇಂಡಿಯಾ ಗೆದ್ದಿರುವ ಐಸಿಸಿ ಟ್ರೋಫಿಗಳ ದಿನವನ್ನು ನೋಡುವುದಾದರೆ…

ಇದನ್ನೂ ಓದಿ
Image
ವಿರಾಟ್ ಕೊಹ್ಲಿಗೆ 100 ಕೋಟಿ ರೂ: ಶುಭ್​ಮನ್ ಗಿಲ್​ಗೆ ಎಷ್ಟು?
Image
VIDEO: ಅಳುತ್ತಿದ್ದ ಅಭಿಮಾನಿಯನ್ನು ಸಮಾಧಾನ ಮಾಡಿದ ಕೆಎಲ್ ರಾಹುಲ್
Image
ನಾನು ಹೊಡೀತಿದ್ದೆ ಅಲ್ವಾ... ವಿರಾಟ್ ಕೊಹ್ಲಿ ಮುಂದೆ ಕೆಎಲ್ ರಾಹುಲ್ ಹತಾಶೆ
Image
Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ
  • 1983ರ ಏಕದಿನ ವಿಶ್ವಕಪ್​ನಲ್ಲಿ ವೆಸ್ಟ್ ಇಂಡೀಸ್ ಅನ್ನು ಸೋಲಿಸಿ ಟೀಮ್ ಇಂಡಿಯಾ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಈ ಪಂದ್ಯ​ ನಡೆದಿದ್ದು 1983, ಜೂನ್ 25 ಶನಿವಾರ.
  • 2007ರ ಟಿ20 ವಿಶ್ವಕಪ್​ ಫೈನಲ್ ಪಂದ್ಯವು ಸೆಪ್ಟೆಂಬರ್ 24 ರ ಸೋಮವಾರದಂದು ಆಡಲಾಗಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಸೋಲುಣಿಸಿ ಟೀಮ್ ಇಂಡಿಯಾ ಚೊಚ್ಚಲ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು.
  • 2011ರ ಏಕದಿನ ವಿಶ್ವಕಪ್​ ಫೈನಲ್ ಪಂದ್ಯ ಏಪ್ರಿಲ್ 2 ಸೋಮವಾರದಂದು ಮುಂಬೈನಲ್ಲಿ ನಡೆಯಿತು. ಈ ಮ್ಯಾಚ್​ನಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
  • 2013ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಜರುಗಿದ್ದು ಏಪ್ರಿಲ್ 2, ಸೋಮವಾರ. ಈ ಪಂದ್ಯದಲ್ಲಿ ಇಂಗ್ಲೆಂಡ್​ಗೆ ಸೋಲುಣಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು.
  • 2024ರ ಟಿ20 ವಿಶ್ವಕಪ್ ಫೈನಲ್ ಪಂದ್ಯ ನಡೆದಿದ್ದು ಶನಿವಾರ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ 7 ರನ್​ಗಳ ಜಯ ಸಾಧಿಸಿ ಟೀಮ್ ಇಂಡಿಯಾ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿತ್ತು.

ಇದನ್ನೂ ಓದಿ: IPL 2026: ಐಪಿಎಲ್​ಗೆ ಪಾಕಿಸ್ತಾನ್ ವೇಗಿ ಮೊಹಮ್ಮದ್ ಅಮೀರ್

ಇದೀಗ ಟೀಮ್ ಇಂಡಿಯಾ ಮತ್ತೊಂದು ಫೈನಲ್ ಪಂದ್ಯಕ್ಕೆ ಸಜ್ಜಾಗಿದೆ. ಈ ಬಾರಿ ಭಾರತ ತಂಡದ ಎದುರಾಳಿ ನ್ಯೂಝಿಲೆಂಡ್. ಕಿವೀಸ್ ಪಡೆಯನ್ನು ಸೋಲಿಸಿ ಟೀಮ್ ಇಂಡಿಯಾ ಸಂಡೆಯನ್ನು ಸೂಪರ್ ಸಂಡೆಯನ್ನಾಗಿಸಲಿದೆಯಾ ಕಾದು ನೋಡಬೇಕಿದೆ.

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು