AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 12 ವರ್ಷಗಳ ನಂತರ ಟೆಸ್ಟ್ ಸರಣಿ ಸೋಲು; ಟೀಂ ಇಂಡಿಯಾ ಆಟಗಾರರಿಗೆ ದೀಪಾವಳಿ ರಜೆ ರದ್ದು

Team India's Diwali Sacrifice: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಸರಣಿಯಲ್ಲಿ ಸೋಲು ಅನುಭವಿಸಿರುವ ಭಾರತ ತಂಡ, ದೀಪಾವಳಿ ರಜೆಯನ್ನು ರದ್ದುಗೊಳಿಸಿ ತೀವ್ರ ತರಬೇತಿಯಲ್ಲಿ ತೊಡಗಿದೆ. ಎಲ್ಲಾ ಆಟಗಾರರು ಕಡ್ಡಾಯವಾಗಿ ತರಬೇತಿಯಲ್ಲಿ ಪಾಲ್ಗೊಳ್ಳಬೇಕಾಗಿದೆ. ಮುಂಬೈನಲ್ಲಿ ಭಾರತದ ಉತ್ತಮ ಟೆಸ್ಟ್ ದಾಖಲೆಯು ತಂಡಕ್ಕೆ ಆತ್ಮವಿಶ್ವಾಸ ನೀಡುತ್ತದೆ.

IND vs NZ: 12 ವರ್ಷಗಳ ನಂತರ ಟೆಸ್ಟ್ ಸರಣಿ ಸೋಲು; ಟೀಂ ಇಂಡಿಯಾ ಆಟಗಾರರಿಗೆ ದೀಪಾವಳಿ ರಜೆ ರದ್ದು
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Oct 28, 2024 | 10:44 PM

Share

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ರೋಹಿತ್ ಶರ್ಮಾ ನೇತೃತ್ವದ ತಂಡ ಸರಣಿಯಲ್ಲಿ ಕ್ಲೀನ್ ಸ್ವೀಪ್ ತಪ್ಪಿಸಿಕೊಳ್ಳಲು ಬಯಸಿದೆ. ಟೀಂ ಇಂಡಿಯಾ ಈಗಾಗಲೇ ಈ ಸರಣಿಯನ್ನು ಕಳೆದುಕೊಂಡಿದ್ದು, ಈಗ ಮೂರನೇ ಪಂದ್ಯವನ್ನು ಗೆದ್ದು ಸರಣಿಯನ್ನು 2-1 ರಿಂದ ಅಂತ್ಯಗೊಳಿಸಲು ಬಯಸಿದೆ. ಆದಾಗ್ಯೂ ಮೊದಲ ಎರಡು ಟೆಸ್ಟ್ ಪಂದ್ಯಗಳ ಸೋಲು ಟೀಂ ಇಂಡಿಯಾವನ್ನು ಸಾಕಷ್ಟು ಮುಜುಗರಕ್ಕೀಡು ಮಾಡಿರುವುದಲ್ಲದೆ ವಿಶ್ವ ಕ್ರಿಕೆಟ್‌ನ ದೊಡ್ಡಣ್ಣ ಬಿಸಿಸಿಐಗೂ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೀಗಾಗಿ ಸರಣಿ ಸೋಲಿನ ನಂತರ ಕಾರ್ಯಪ್ರವೃತ್ತವಾಗಿರುವ ತಂಡದ ಮ್ಯಾನೇಜ್‌ಮೆಂಟ್ ಎಲ್ಲಾ ಆಟಗಾರರನ್ನು ತರಬೇತಿ ಸೆಷನ್​ನಲ್ಲಿ ಭಾಗವಹಿಸುವಂತೆ ಸೂಚನೆ ನೀಡಿದೆ. ಅದರಂತೆ ಇದೀಗ ತಂಡದ ಎಲ್ಲಾ ಆಟಗಾರರು ದೀಪಾವಳಿ ಹಬ್ಬವನ್ನು ಮರೆತು ತರಬೇತಿಯಲ್ಲಿ ಭಾಗಿಯಾಗಬೇಕಾಗಿದೆ.

ದೀಪಾವಳಿ ರಜೆ ರದ್ದು

ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನ ಸುದ್ದಿಯ ಪ್ರಕಾರ, ತಂಡದ ಮ್ಯಾನೇಜ್‌ಮೆಂಟ್ ಎಲ್ಲಾ ಆಟಗಾರರನ್ನು ತರಬೇತಿ ಸೆಷನ್​ನಲ್ಲಿ ಭಾಗವಹಿಸುವಂತೆ ಸೂಚನೆ ನೀಡಿದೆ. ಅಕ್ಟೋಬರ್ 30 ಮತ್ತು 31 ರಂದು ತರಬೇತಿ ಸೆಷನ್ ನಡೆಯಲಿದ್ದು, ಎಲ್ಲಾ ಆಟಗಾರರಿಗೆ ಇದು ಕಡ್ಡಾಯವಾಗಿರುತ್ತದೆ. ವಿರಾಟ್, ರೋಹಿತ್ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಈ ತರಬೇತಿ ಸೆಷನ್​ನಲ್ಲಿ ಭಾಗವಹಿಸಬೇಕಾಗಿದೆ. ವಾಸ್ತವವಾಗಿ ಈ ಹಿಂದೆ ಹಲವು ಆಟಗಾರರಿಗೆ ತರಬೇತಿ ಸೆಷನ್​ನಿಂದ ವಿಶ್ರಾಂತಿ ನೀಡಲಾಗುತ್ತಿತ್ತು. ಆದರೆ ಇದೀಗ ಆ ಸಂಪ್ರದಾಯಕ್ಕೆ ಬ್ರೇಕ್ ಬಿದ್ದಿದೆ. ಆದ್ದರಿಂದ ಎಲ್ಲಾ ಆಟಗಾರರು ದೀಪಾವಳಿಯಂದು ತರಬೇತಿ ಸೆಷನ್​ನಲ್ಲಿ ಭಾಗವಹಿಸಲಿದ್ದಾರೆ.

ಎರಡು ದಿನಗಳ ವಿರಾಮ

ವರದಿ ಪ್ರಕಾರ, ಪುಣೆ ಟೆಸ್ಟ್‌ನಲ್ಲಿ ಸೋಲಿನ ನಂತರ ಬಿಸಿಸಿಐ ಆಟಗಾರರಿಗೆ ಎರಡು ದಿನಗಳ ವಿರಾಮ ನೀಡಿದೆ. ಟೆಸ್ಟ್ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ನವೆಂಬರ್ 1 ರಿಂದ ಮುಂಬೈನಲ್ಲಿ ನಡೆಯಲಿದೆ. ಆದ್ದರಿಂದ, ಹೆಚ್ಚಿನ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಭಾನುವಾರವೇ ಮುಂಬೈಗೆ ಬಂದಿಳಿದಿದ್ದಾರೆ. ಆದರೆ ವಿರಾಟ್ ಮತ್ತು ರೋಹಿತ್ ಸದ್ಯ ಕುಟುಂಬದೊಂದಿಗೆ ಇದ್ದು, ಅವರು ಕೂಡ ಶೀಘ್ರದಲ್ಲೇ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಮುಂಬೈನಲ್ಲಿ ಭಾರತದ ದಾಖಲೆ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಇಲ್ಲಿ ಟೀಂ ಇಂಡಿಯಾದ ಟೆಸ್ಟ್ ದಾಖಲೆ ಉತ್ತಮವಾಗಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ಇದುವರೆಗೆ 26 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ ಅವಧಿಯಲ್ಲಿ 12 ಪಂದ್ಯಗಳನ್ನು ಗೆದ್ದಿದ್ದರೆ, 7 ಪಂದ್ಯಗಳಲ್ಲಿ ಸೋಲು ಕಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ