AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮಳೆಯ ಕಾಟ?: ಇಲ್ಲಿದೆ ಹವಾಮಾನ ವರದಿ, ಪಿಚ್ ರಿಪೋರ್ಟ್

Asia Cup 2022: ಏಷ್ಯಾಕಪ್ ಟೂರ್ನಿ ಸೂಪರ್ 4 ಹಂತಕ್ಕೆ ತಲುಪಿದ್ದು ಇಂದು ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿ ಆಗಲಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜನೆಯಾಗಿದ್ದು ಹೈವೋಲ್ಟೇಜ್ ಪಂದ್ಯ ಆಗುವುದು ಖಚಿತ

IND vs PAK: ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮಳೆಯ ಕಾಟ?: ಇಲ್ಲಿದೆ ಹವಾಮಾನ ವರದಿ, ಪಿಚ್ ರಿಪೋರ್ಟ್
IND vs PAK Asia Cup 2022
TV9 Web
| Edited By: |

Updated on:Sep 04, 2022 | 10:04 AM

Share

ಹದಿನೈದನೇ ಆವೃತ್ತಿಯ ಏಷ್ಯಾಕಪ್ ಟೂರ್ನಿ (Asia Cup 2022) ಸೂಪರ್ 4 ಹಂತಕ್ಕೆ ತಲುಪಿದ್ದು ಇಂದು ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿ ಆಗಲಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜನೆಯಾಗಿದ್ದು ಹೈವೋಲ್ಟೇಜ್ ಪಂದ್ಯ ಆಗುವುದು ಖಚಿತ. ಲೀಗ್ ಹಂತದ ಮೊದಲ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿ ಆಗಿದ್ದವು. ಇದರಲ್ಲಿ ಟೀಮ್ ಇಂಡಿಯಾ (Team India) 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸುತ್ತು. ಈ ಮೂಲಕ ಕಳೆದ ವರ್ಷ ಟಿ20 ವಿಶ್ವಕಪ್​ನಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಂಡಿತ್ತು. ಇದೀಗ ಈ ಬಾರಿಯ ಏಷ್ಯಾಕಪ್​ನಲ್ಲಿ ಒಂದೂ ಸೋಲು ಕಾಣದ ರೋಹಿತ್ ಪಡೆ ಗೆಲುವಿನ ಓಟವನ್ನು ಮುಂದುವರೆಸುವ ತವಕದಲ್ಲಿದ್ದರೆ ಇತ್ತ ಪಾಕಿಸ್ತಾನ ಗೆಲುವಿನಗೆ ರಣತಂತ್ರ ರೂಪಿಸುತ್ತಿದೆ.

ಪಿಚ್ ರಿಪೋರ್ಟ್:

ಭಾರತ ಹಾಗೂ ಪಾಕಿಸ್ತಾನ ಪಂದ್ಯ ನಡೆಯಲಿರುವ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಪಿಚ್​ನಲ್ಲಿ ಉಭಯ ತಂಡಗಳ ಆಟಗಾರರು ಸಾಕಷ್ಟು ಪಂದ್ಯಗಳನ್ನು ಆಡಿದ್ದಾರೆ. ಪಾಕಿಸ್ತಾನಕ್ಕೆ ಇದು ಎರಡನೇ ತವರಿದ್ದಂತೆ. ಭಾರತದ ಆಟಗಾರರು ಇಲ್ಲಿ ಅನೇಕ ಐಪಿಎಲ್ ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ. ಇಲ್ಲಿನ ಪಿಚ್‌ ಸಮಯೋಜಿತವಾಗಿದೆ. ಹೊಸ ಚೆಂಡಿನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಆದರೆ, ಈ ಪಿಚ್‌ನಲ್ಲಿ ವಿಕೆಟ್‌ಗಳನ್ನು ಉಳಿಸಿಕೊಳ್ಳುವುದು ಬಹುಮುಖ್ಯ ಸಂಗತಿಯಾಗಿದೆ. ಪಂದ್ಯ ಸಾಗುತ್ತಿದ್ದಂತೆ ಬ್ಯಾಟಿಂಗ್ ಸ್ವಲ್ಪ ಸುಲಭವಾಗುತ್ತದೆ.

ಇದನ್ನೂ ಓದಿ
Image
Virat Kohli: ಪಾಕಿಸ್ತಾನ ವಿರುದ್ಧ 3 ಸಿಕ್ಸ್ ಸಿಡಿಸಿದ್ರೆ ಸಾಕು: ವಿರಾಟ್ ಕೊಹ್ಲಿ ಖಾತೆಗೆ ಸೇರಲಿದೆ ಶತಕದ ದಾಖಲೆ
Image
SL vs AFG: ಸೂಪರ್ 4 ನ ಮೊದಲ ಪಂದ್ಯ ಗೆದ್ದ ಶ್ರೀಲಂಕಾ: ರೋಚಕ ಕಾದಾಟದಲ್ಲಿ ಅಫ್ಘಾನ್​ಗೆ ಸೋಲು
Image
IND vs PAK: ಏಷ್ಯಾಕಪ್​ನಲ್ಲಿಂದು ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ: ಕೊಹ್ಲಿ ಮೇಲೆ ಎಲ್ಲರ ಕಣ್ಣು
Image
India Playing XI: 2 ಬದಲಾವಣೆ ಖಚಿತ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್

ಇನ್ನು ಈ ಪಿಚ್​ನಲ್ಲಿ ನಿಧಾನಗತಿಯ ಬೌಲರ್‌ಗಳು ಹೆಚ್ಚಿನ ಯಶಸ್ಸು ಸಾಧಿಸಿದ ಇತಿಹಾಸವಿದೆ. ಅಂತೆಯೆ ಸ್ಪಿನ್ನರ್‌ಗಳ ದಾಳಿಯ ಮುಂದೆ ಬ್ಯಾಟರ್‌ಗಳು ಪರದಾಡುವುದು ಖಚಿತ. ಭಾರತ ಈ ಪಿಚ್​ನಲ್ಲಿ ನಮೀಬಿಯ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಸ್ಕಾಟ್ಲೆಂಡ್ ತಂಡದ ವಿರುದ್ಧ ಆಡಿದೆ. ಇದರಲ್ಲಿ ಪಾಕಿಸ್ತಾನ, ನಮೀಬಿಯ ಮತ್ತು ಸ್ಕಾಟ್ಲೆಂಡ್ ವಿರುದ್ಧ ಜಯ ಸಾಧಿಸಿದೆ.

ಹವಾಮಾನ ವರದಿ:

ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿಲ್ಲ. ಹೀಗಾಗಿ ಪಂದ್ಯ ನಿರಾತಂಕವಾಗಿ ಸಾಗಲಿದೆ. ದಿನವಿಡೀ ಶುಭ್ರ ವಾತಾವರಣದಿಂದ ಕೂಡಿರಲಿದೆ. ಪಂದ್ಯದ ದಿನದಂದು ಗಾಳಿ ಕೊಂಚ ಇರಬಹುದು ಎಂದು ಹೇಳಲಾಗಿದ್ದು ಹಗಲು ತಾಪಮಾನವು ಸುಮಾರು 39 ಡಿಗ್ರಿ ಸೆಲ್ಸಿಯಸ್‌ ಮತ್ತು ರಾತ್ರಿ 30 ಡಿಗ್ರಿ ಸೆಲ್ಸಿಯಸ್ ಇರಲಿದೆಯಂತೆ. ಹೀಗಾಗಿ ಯಾವುದೇ ಅಡೆತಡೆ ಇಲ್ಲದೆ ಈ ರೋಚಕ ಪಂದ್ಯ ನಡೆಯಲಿದೆ. ಮಳೆ ಆಗುವ ಪ್ರಮಾರ ಶೇ. 4 ರಷ್ಟು ಮಾತ್ರ ಇದೆ.

ಟಾಸ್ ಕೂಡ ಈ ಪಂದ್ಯದಲ್ಲಿ ಬಹುಮುಖ್ಯ ಪಾತ್ರವಹಿಸಲಿದ್ದು, ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಯಾಕೆಂದರೆ ಇಲ್ಲಿ ಚೇಸಿಂಗ್ ಮಾಡಿದ ತಂಡ ಹೆಚ್ಚು ಗೆದ್ದ ಇತಿಹಾಸವಿದೆ. ಮೊದಲ ಇನ್ನಿಂಗ್ಸ್ ಸರಾಸರಿ 142 ರನ್ ಆದರೆ, ಎರಡನೇ ಇನ್ನಿಂಗ್ಸ್ ಸರಾಸರಿ 124 ಆಗಿದೆ. 211 ರನ್ ಗಳಿಸಿರುವುದು ಈ ಗ್ರೌಂಡ್​ನ ಗರಿಷ್ಠ ಸ್ಕೋರ್ ಆಗಿದೆ.

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI:

ಭಾರತ: ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌/ಆರ್. ಅಶ್ವಿನ್, ಯುಜ್ವೇಂದ್ರ ಚಹಲ್‌.

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಝಾಮಾನ್, ಇಫ್ತಿಕರ್ ಅಹ್ಮದ್, ಕುಶ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಹಾರಿಸ್ ರೌಫ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹಸನ್ ಅಲಿ.

Published On - 10:04 am, Sun, 4 September 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ