AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಟೀಂ ಇಂಡಿಯಾ ವಿರುದ್ಧದ ಪಂದ್ಯಕ್ಕೆ ಪಾಕ್ ತಂಡ ಪ್ರಕಟ! ಬಾಬರ್ ಪಡೆಯಲ್ಲಿ ಯಾರೆಲ್ಲ ಇದ್ದಾರೆ ಗೊತ್ತಾ?

Pakistan Playing XI vs IND: ಭಾರತ ವಿರುದ್ಧದ ಏಷ್ಯಾಕಪ್ ಪಂದ್ಯಕ್ಕೆ ಒಂದು ದಿನ ಮುನ್ನವೇ ಪಾಕಿಸ್ತಾನ ತನ್ನ ಪ್ಲೇಯಿಂಗ್ ಇಲೆವೆನ್ ಅನ್ನು ಪ್ರಕಟಿಸಿದೆ. ಏಷ್ಯಾಕಪ್​ನ ಉದ್ಘಾಟನಾ ಪಂದ್ಯದಲ್ಲಿ ನೇಪಾಳ ವಿರುದ್ಧ ಕಣಕ್ಕಿಳಿದಿದ್ದ ಅದೇ ತಂಡವನ್ನು ಕಣಕ್ಕಿಳಿಸಲು ಪಾಕ್ ಮಂಡಳಿ ಮುಂದಾಗಿದೆ.

Breaking: ಟೀಂ ಇಂಡಿಯಾ ವಿರುದ್ಧದ ಪಂದ್ಯಕ್ಕೆ ಪಾಕ್ ತಂಡ ಪ್ರಕಟ! ಬಾಬರ್ ಪಡೆಯಲ್ಲಿ ಯಾರೆಲ್ಲ ಇದ್ದಾರೆ ಗೊತ್ತಾ?
ಪಾಕಿಸ್ತಾನ ತಂಡ
ಪೃಥ್ವಿಶಂಕರ
|

Updated on:Sep 01, 2023 | 8:41 PM

Share

ಸೆಪ್ಟೆಂಬರ್ 2 ರಂದು ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲ್ಲಿರುವ ಭಾರತ ವಿರುದ್ಧದ ಏಷ್ಯಾಕಪ್ (Asia Cup 2023) ಪಂದ್ಯಕ್ಕೆ ಒಂದು ದಿನ ಮುನ್ನವೇ ಪಾಕಿಸ್ತಾನ (India vs Pakistan) ತನ್ನ ಪ್ಲೇಯಿಂಗ್ ಇಲೆವೆನ್ ಅನ್ನು ಪ್ರಕಟಿಸಿದೆ. ಏಷ್ಯಾಕಪ್​ನ ಉದ್ಘಾಟನಾ ಪಂದ್ಯದಲ್ಲಿ ನೇಪಾಳ ವಿರುದ್ಧ ಕಣಕ್ಕಿಳಿದಿದ್ದ ಅದೇ ತಂಡವನ್ನು ಕಣಕ್ಕಿಳಿಸಲು ಪಾಕ್ ಮಂಡಳಿ ಮುಂದಾಗಿದೆ. ಏಷ್ಯಾಕಪ್​ನ ಹೈವೋಲ್ಟೇಜ್ ಪಂದ್ಯಕ್ಕೆ ಇನ್ನೊಂದು ದಿನ ಬಾಕಿ ಇರುವಾಗಲೇ ಪಾಕಿಸ್ತಾನ ತನ್ನ ಆಡುವ ಹನ್ನೊಂದರ ಬಳಗವನ್ನು (Pakistan Cricket team) ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದೆ. ಇಂದು ಅಂದರೆ ಶುಕ್ರವಾರ, ಸೆಪ್ಟೆಂಬರ್ 1 ರಂದು ನಡೆದ ಕ್ಯಾಪ್ಟನ್ ಬಾಬರ್ ಆಝಂ (Babar Azam) ಅವರ ಪತ್ರಿಕಾಗೋಷ್ಠಿಯ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ.

ವಾಸ್ತವವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಪಂದ್ಯ ನಡೆಯುವ ಒಂದು ದಿನ ಮೊದಲು ಪ್ರಕಟಿಸುವ ಸಂಪ್ರದಾಯ ಹೊಂದಿಲ್ಲ. ಆದರೆ ಈ ಬಾರಿಯ ಏಷ್ಯಾಕಪ್​ನಲ್ಲಿ ಪಾಕ್ ಮಂಡಳಿ ಆ ರೀತಿಯ ವಿನೂತನ ಪ್ರಯತ್ನಕ್ಕೆ ಕೈಹಾಕಿದೆ. ಈ ಹಿಂದೆ ಅಂದರೆ ಆಗಸ್ಟ್ 30 ರಂದು ನಡೆದ ಪಂದ್ಯಾವಳಿಯ ಮೊದಲ ಪಂದ್ಯ ನಡೆಯುವ ಒಂದು ದಿನಕ್ಕೂ ಮುನ್ನ ಪಾಕ್ ಮಂಡಳಿ ತನ್ನ ತಂಡವನ್ನು ಪ್ರಕಟಿಸಿತ್ತು. ಇನ್ನು ಆ ಪಂದ್ಯದಲ್ಲಿ ನೇಪಾಳ ತಂಡವನ್ನು ಪಾಕಿಸ್ತಾನ 238 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿತ್ತು. ಆ ಪಂದ್ಯದಲ್ಲಿ ಪಾಕ್ ಪರ ನಾಯಕ ಬಾಬರ್ ಆಝಂ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಇಫ್ತಿಕರ್ ಅಹ್ಮದ್ ಅದ್ಭುತ ಶತಕ ಸಿಡಿಸಿ ಮಿಂಚಿದ್ದರಯ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಎರಡು ಶತಕಗಳ ನೆರವಿನಿಂದ 342 ರನ್​ಗಳ ಟಾರ್ಗೆಟ್ ಸೆಟ್ ಮಾಡಿತ್ತು. ಈ ಗುರಿ ಬೆನ್ನಟ್ಟಿದ ನೇಪಾಳ ಶಾಹೀನ್ ಶಾ ಆಫ್ರಿದಿ, ಹ್ಯಾರಿಸ್ ರೌಫ್ ಮತ್ತು ಶಾದಾಬ್ ಖಾನ್ ದಾಳಿಗೆ ತತ್ತರಿಸಿ ಕೇವಲ 104 ರನ್‌ಗಳಿಗೆ ಆಲೌಟ್ ಆಗಿತ್ತು.

ಪಾಕ್ ಎದುರು ಭಾರತ ಮೊದಲು ಬ್ಯಾಟ್ ಮಾಡಬೇಕೇ ಅಥವಾ ಬೌಲಿಂಗ್ ಮಾಡಬೇಕೇ? ಇಲ್ಲಿದೆ ಕ್ಯಾಂಡಿ ಪಿಚ್‌ ವರದಿ

ತಂಡ ಬದಲಾದರೂ ಬದಲಾಗಬಹುದು

ಹೀಗಾಗಿ ಭಾರತ ವಿರುದ್ಧದ ಪಂದ್ಯಕ್ಕೂ ತನ್ನ ಗೆಲುವಿನ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ಪಾಕಿಸ್ತಾನ ನಿರ್ಧರಿಸಿದೆ. ಆದಾಗ್ಯೂ, ಪಂದ್ಯದ ಮೊದಲು ಪಾಕಿಸ್ತಾನಿ ತಂಡವು ಆಡುವ ಹನ್ನೊಂದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಇದರ ಅರ್ಥವಲ್ಲ. ನಿಯಮಗಳ ಪ್ರಕಾರ, ಟಾಸ್ ಮೊದಲು ಪಾಕಿಸ್ತಾನಿ ತಂಡ ಪ್ಲೇಯಿಂಗ್ ಇಲೆವೆನ್ ಅನ್ನು ಬದಲಾಯಿಸಬಹುದಾಗಿದೆ. ಆದರೆ ಹಾಗೆ ಆಗುವ ಸಾಧ್ಯತೆಗಳು ತೀರ ಕಡಿಮೆ ಇವೆ.

ನ್ಯೂನತೆಗಳಿದ್ದರೂ ತಂಡದಲ್ಲಿ ಬದಲಾವಣೆ ಇಲ್ಲ

ಆದಾಗ್ಯೂ, ನೇಪಾಳ ವಿರುದ್ಧ ಜಯಗಳಿಸಿದರೂ, ಪಾಕಿಸ್ತಾನದ ಕೆಲವು ಮಾಜಿ ಅನುಭವಿಗಳು ತಂಡದಲ್ಲಿ ಬದಲಾವಣೆಗೆ ಒತ್ತಾಯಿಸಿದ್ದರು. ವಿಶೇಷವಾಗಿ ತಂಡದಲ್ಲಿ ಆರಂಭಿಕ ಆಟಗಾರ ಫಖರ್ ಜಮಾನ್ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಅವರು ಕಳೆದ ಕೆಲವು ತಿಂಗಳುಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಅಲ್ಲದೆ ನೇಪಾಳ ವಿರುದ್ಧವೂ ಅವರ ಬ್ಯಾಟ್ ಸದ್ದು ಮಾಡಿರಲಿಲ್ಲ. ಇವರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಹೆಚ್ಚಿನ ಅನುಭವ ಹೊಂದಿಲ್ಲದ ಅಘಾ ಸಲ್ಮಾನ್ ಉಪಸ್ಥಿತಿಯ ಬಗ್ಗೆಯೂ ಪ್ರಶ್ನೆ ಮಾಡಲಾಗಿತ್ತು. ಇದರ ಹೊರತಾಗಿಯೂ ನೇಪಾಳದ ವಿರುದ್ಧ ಪಾಕಿಸ್ತಾನ ಜಯಭೇರಿ ಬಾರಿಸಿತ್ತು. ಆದರೆ ಪಾಕ್ ತಂಡದ ನಿಜವಾದ ಪರೀಕ್ಷೆ ಈಗ ಭಾರತದ ವಿರುದ್ಧ ನಡೆಯಲಿದ್ದು, ಪಾಕಿಸ್ತಾನದ ನಿರ್ಧಾರ ಸರಿಯೋ ತಪ್ಪೋ ಎಂಬುದು ಶನಿವಾರವಷ್ಟೇ ತಿಳಿಯಲಿದೆ.

ಪಾಕಿಸ್ತಾನ ತಂಡ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಆಝಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಸಲ್ಮಾನ್ ಅಘಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್ ಮತ್ತು ನಸೀಮ್ ಶಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:52 pm, Fri, 1 September 23

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ