AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ದುಬೈ ಮೈದಾನದಲ್ಲಿ ಭಾರತ- ಪಾಕಿಸ್ತಾನ ನಡುವಿನ ದಾಖಲೆ ಹೇಗಿದೆ?: ಟೀಮ್ ಇಂಡಿಯಾ ಹಲವು ಬಾರಿ ಸೋತಿದೆ

India vs Pakistan Asia Cup 2025: 2025 ರ T20 ಏಷ್ಯಾ ಕಪ್‌ನ ಹೈ-ವೋಲ್ಟೇಜ್ ಪಂದ್ಯ ಭಾರತ ಮತ್ತು ಪಾಕಿಸ್ತಾನ ನಡುವೆ ಸೆಪ್ಟೆಂಬರ್ 14 ರಂದು ನಡೆಯಲಿದ್ದು, ಪ್ರಪಂಚದಾದ್ಯಂತದ ಅಭಿಮಾನಿಗಳ ಕಣ್ಣುಗಳು ಈ ಪಂದ್ಯದ ಮೇಲೆ ನೆಟ್ಟಿವೆ. ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ರಣರೋಚಕ ಪಂದ್ಯ ನಡೆಯಲಿದೆ.

IND vs PAK: ದುಬೈ ಮೈದಾನದಲ್ಲಿ ಭಾರತ- ಪಾಕಿಸ್ತಾನ ನಡುವಿನ ದಾಖಲೆ ಹೇಗಿದೆ?: ಟೀಮ್ ಇಂಡಿಯಾ  ಹಲವು ಬಾರಿ ಸೋತಿದೆ
Ind Vs Pak
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 13, 2025 | 8:57 AM

Share

ಬೆಂಗಳೂರು (ಸೆ. 12): ಟಿ20 ಏಷ್ಯಾ ಕಪ್ 2025 ರ ಟೂರ್ನಿ ಸಾಕಷ್ಟು ರೋಚಕತೆ ಸೃಷ್ಟಿಸುತ್ತಿದೆ. ಅಭಿಮಾನಿಗಳು ಪ್ರತಿದಿನ ರೋಮಾಂಚಕಾರಿ ಪಂದ್ಯಗಳನ್ನು ವೀಕ್ಷಿಸುತ್ತಿದ್ದಾರೆ. ಈಗ ಏಷ್ಯಾ ಕಪ್ 2025 ರಲ್ಲಿ ಭಾರತ (Indian Cricket Team) ಮತ್ತು ಪಾಕಿಸ್ತಾನ ನಡುವಿನ ರಣರೋಚಕ ಪಂದ್ಯವು ಸೆಪ್ಟೆಂಬರ್ 14 ರಂದು ದುಬೈ ಮೈದಾನದಲ್ಲಿ ನಡೆಯಲಿದೆ. ಎರಡೂ ತಂಡಗಳು ಟಿ20 ಕ್ರಿಕೆಟ್‌ನ ಶ್ರೇಷ್ಠ ಆಟಗಾರರನ್ನು ಹೊಂದಿವೆ. ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಅಘಾ, ಎರಡೂ ತಂಡ ಯುವ ಆಟಗಾರರಿಂದ ಕೂಡಿದೆ.

ದುಬೈನಲ್ಲಿ ಭಾರತ ವಿರುದ್ಧ ಪಾಕಿಸ್ತಾನ 2 ಟಿ20 ಪಂದ್ಯಗಳನ್ನು ಗೆದ್ದಿದೆ

ದುಬೈ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ ಒಟ್ಟು ಮೂರು ಪಂದ್ಯಗಳು ನಡೆದಿದ್ದು, ಅವುಗಳಲ್ಲಿ ಪಾಕಿಸ್ತಾನ ಎರಡರಲ್ಲಿ ಗೆದ್ದಿದೆ ಮತ್ತು ಭಾರತ ತಂಡ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಎರಡೂ ತಂಡಗಳು ಕೊನೆಯ ಬಾರಿಗೆ ಇಲ್ಲಿ ಪಂದ್ಯವನ್ನು ಆಡಿದ್ದು 2022 ರಲ್ಲಿ.

ಈ ಪಂದ್ಯವನ್ನು ಮೊದಲ ಬಾರಿಗೆ ದುಬೈನಲ್ಲಿ 2021 ರಲ್ಲಿ ನಡೆಸಲಾಯಿತು

2021 ರ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ದುಬೈ ಮೈದಾನದಲ್ಲಿ ಪಂದ್ಯವನ್ನು ಆಡಿದ್ದವು, ಇದರಲ್ಲಿ ಭಾರತ ತಂಡವು ಮೊದಲು ಬ್ಯಾಟ್ ಮಾಡಿ 151 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ, ಪಾಕಿಸ್ತಾನವು ಗುರಿಯನ್ನು ತಲುಪಿತು ಮತ್ತು ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಅಜಮ್ ಅವರ ಅರ್ಧಶತಕದ ಇನ್ನಿಂಗ್ಸ್‌ ನೆರವಿನಿಂದ 10 ವಿಕೆಟ್‌ಗಳಿಂದ ಗೆದ್ದಿತು.

ಇದನ್ನೂ ಓದಿ
Image
ಮೊದಲ ಓವರ್ 2ನೇ ಎಸೆತದಲ್ಲೇ ಆಘಾತ ಎದುರಿಸಿದ ಪಾಕಿಸ್ತಾನ
Image
ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಪಾರಾದ ಸಚಿನ್ ತೆಂಡೂಲ್ಕರ್ ಕುಟುಂಬ
Image
ತನ್ನನ್ನು ತಾನೇ ಹೊಗಳಿಕೊಂಡು ಟ್ರೋಲಿಗರಿಗೆ ಆಹಾರವಾದ ಪಾಕ್ ಕ್ರಿಕೆಟಿಗ
Image
ಏಷ್ಯಾಕಪ್​ನಲ್ಲಿ ಭಾರತ- ಪಾಕ್ ಮುಖಾಮುಖಿ ದಾಖಲೆ ಹೇಗಿದೆ?

ಇದಾದ ನಂತರ, 2022 ರಲ್ಲಿ, ದುಬೈ ಮೈದಾನದಲ್ಲಿ ನಡೆದ T20I ಪಂದ್ಯದಲ್ಲಿ, ಭಾರತ ತಂಡವು ಪಾಕಿಸ್ತಾನದ ವಿರುದ್ಧ ಐದು ವಿಕೆಟ್‌ಗಳಿಂದ ಜಯಗಳಿಸಿತು. ನಂತರ ಈ ವರ್ಷ ಮತ್ತೊಂದು T20I ಪಂದ್ಯ ನಡೆಯಿತು, ಇದರಲ್ಲಿ ಪಾಕಿಸ್ತಾನ 5 ವಿಕೆಟ್‌ಗಳಿಂದ ಗೆದ್ದಿತು.

Pak vs Oman: ಸೊನ್ನೆಗೆ ಪಾಕ್ ಆರಂಭಿಕನ ವಿಕೆಟ್ ಉರುಳಿಸಿದ ಒಮಾನ್ ವೇಗಿ; ವಿಡಿಯೋ ನೋಡಿ

ಪಾಕಿಸ್ತಾನ ತಂಡ ಭಾರತದ ವಿರುದ್ಧ ಕೇವಲ 3 ಟಿ20 ಪಂದ್ಯಗಳನ್ನು ಮಾತ್ರ ಗೆದ್ದಿದೆ

ಭಾರತ ಮತ್ತು ಪಾಕಿಸ್ತಾನ ನಡುವೆ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ ಒಟ್ಟು 13 ಪಂದ್ಯಗಳು ನಡೆದಿದ್ದು, ಅವುಗಳಲ್ಲಿ ಭಾರತ 10 ಪಂದ್ಯಗಳಲ್ಲಿ ಗೆದ್ದಿದೆ ಮತ್ತು ಪಾಕಿಸ್ತಾನ ಮೂರು ಬಾರಿ ಮಾತ್ರ ಗೆಲುವು ಸಾಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ, ಟಿ20ಐ ಕ್ರಿಕೆಟ್‌ನಲ್ಲಿ ಗೆಲ್ಲುವ ಪಂದ್ಯಗಳಲ್ಲಿ ಭಾರತ ತಂಡ ಪಾಕಿಸ್ತಾನಕ್ಕಿಂತ ಬಹಳ ಮುಂದಿದೆ. ಆದರೆ, ದುಬೈ ಮೈದಾನದಲ್ಲಿ ಟೀಮ್ ಇಂಡಿಯಾ ಯಾವರೀತಿಯ ಪ್ರದರ್ಶನ ನೀಡುತ್ತೆ ನೋಡಬೇಕಿದೆ.

ಭಾರತದ ಮುಂದಿನ ಪಂದ್ಯ ಯಾವಾಗ?

ಏಷ್ಯಾಕಪ್‌ನಲ್ಲಿ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಎರಡೂ ತಂಡಗಳು ಸೆಪ್ಟೆಂಬರ್ 14 ರಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಭಾರತ vs ಪಾಕಿಸ್ತಾನ ಪಂದ್ಯವನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಸೋನಿ ಲಿವ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ಆನಂದಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ