AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK, Asia Cup Final: ಫೈನಲ್​ನಲ್ಲಿ ಟಾಸ್ ಗೆದ್ದ ಭಾರತ: ಹಾರ್ದಿಕ್ ಅಲಭ್ಯ, ರಿಂಕುಗೆ ಸ್ಥಾನ

India vs Pakistan Playing XI: ಏಷ್ಯಾ ಕಪ್ 2025 ರ ಪ್ರಶಸ್ತಿ ಪಂದ್ಯ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿದೆ. ಈ ಪಂದ್ಯ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈಗಾಗಲೇ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

IND vs PAK, Asia Cup Final: ಫೈನಲ್​ನಲ್ಲಿ ಟಾಸ್ ಗೆದ್ದ ಭಾರತ: ಹಾರ್ದಿಕ್ ಅಲಭ್ಯ, ರಿಂಕುಗೆ ಸ್ಥಾನ
Ind Vs Pak
ಮಾಲಾಶ್ರೀ ಅಂಚನ್​
| Edited By: |

Updated on:Sep 28, 2025 | 7:43 PM

Share

ಬೆಂಗಳೂರು (ಸೆ. 28): ಏಷ್ಯಾಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ (Indian Cricket Team) ಮತ್ತು ಪಾಕಿಸ್ತಾನ ನಡುವೆ ಫೈನಲ್ ಪಂದ್ಯ ನಡೆಯುತ್ತಿದೆ. ಈ ಹೈವೋಲ್ಟೇಜ್ ಕದನಕ್ಕೆ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದೆ. ಈ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡು ಪಂದ್ಯಗಳನ್ನು ಆಡಿದ್ದು, ಭಾರತ ಈ ಎರಡನ್ನೂ ಗೆದ್ದಿದೆ. ಸದ್ಯ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ದೊಡ್ಡ ಬದಲಾವಣೆ ಮಾಡಲಾಗಿದೆ. ಇಂಜುರಿಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಫೈನಲ್ ಕದನಕ್ಕೆ ಅಲಭ್ಯರಾಗಿದ್ದಾರೆ. ಇವರ ಜಾಗಕ್ಕೆ ರಿಂಕು ಸಿಂಗ್ ಆಯ್ಕೆ ಆಗಿದ್ದಾರೆ. ಹಾಗೆಯೆ ಕಳೆದ ಸೂಪರ್ 4 ನಲ್ಲಿ ಶ್ರೀಲಂಕಾ ವಿರುದ್ಧ ವಿಶ್ರಾಂತಿ ಪಡೆದುಕೊಂಡಿದ್ದ ಜಸ್​ಪ್ರಿತ್ ಬುಮ್ರಾ ಕಮ್​ಬ್ಯಾಕ್ ಮಾಡಿದ್ದಾರೆ. ಶಿವಂ ದುವೆ ಕೂಡ ತಂಡಕ್ಕೆ ಮರಳಿದ್ದಾರೆ.

ಭಾರತ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಸರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ವರುಣ್ ಚಕ್ರವರ್ತಿ.

ಇದನ್ನೂ ಓದಿ
Image
ಪಂದ್ಯ ಆರಂಭಕ್ಕು ಮುನ್ನ ಭಾರತ- ಪಾಕಿಸ್ತಾನ ತಂಡಕ್ಕೆ ಶುಭಸುದ್ದಿ
Image
ಬಿಸಿಸಿಐ ಚುಕ್ಕಾಣಿ ಹಿಡಿದ ಜಮ್ಮು ಮೂಲದ ಅನ್‌ಕ್ಯಾಪ್ಡ್ ಆಟಗಾರ
Image
ಪಾಕಿಸ್ತಾನಕ್ಕೆ ಮತ್ತೆ ಮುಖಭಂಗ; ಭಾರತಕ್ಕೆ ಏಷ್ಯಾಕಪ್
Image
IND vs PAK: ಫೈನಲ್ ಗೆದ್ದರೂ ಭಾರತ ಏಷ್ಯಾಕಪ್ ಟ್ರೋಫಿ ಸ್ವೀಕರಿಸಲ್ವಾ?

ಅತ್ತ ಪಾಕಿಸ್ತಾನ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಪಾಕಿಸ್ತಾನ ಪ್ಲೇಯಿಂಗ್ XI: ಸಾಹಿಬ್ಜಾದಾ ಫರ್ಹಾನ್, ಫಖರ್ ಜಮಾನ್, ಸೈಮ್ ಅಯೂಬ್, ಸಲ್ಮಾನ್ ಅಘಾ (ನಾಯಕ), ಹುಸೇನ್ ತಲತ್, ಮೊಹಮ್ಮದ್ ಹ್ಯಾರಿಸ್( ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.

Asia Cup 2025 Prize Money: ಪಂದ್ಯ ಆರಂಭಕ್ಕು ಮುನ್ನ ಭಾರತ- ಪಾಕಿಸ್ತಾನ ತಂಡಕ್ಕೆ ಶುಭಸುದ್ದಿ ಕೊಟ್ಟ ACC: ಬಹುಮಾನದ ಮೊತ್ತ ಹೆಚ್ಚಳ

ಯುಎಇ ವಿರುದ್ಧ 9 ವಿಕೆಟ್‌ಗಳಿಂದ ಗೆಲುವು, ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿ ಮತ್ತು ಓಮನ್ ವಿರುದ್ಧ 21 ರನ್‌ಗಳಿಂದ ಸೋಲಿಸಿ ಗುಂಪು ಹಂತದ ಪಂದ್ಯ ಭಾರತ ಗೆದ್ದರೆ, ಬಳಿಕ ಸೂಪರ್ 4 ನಲ್ಲಿ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿ ಬಾಂಗ್ಲಾದೇಶವನ್ನು 41 ರನ್‌ಗಳಿಂದ ಸೋಲಿಸಿ, ಶ್ರೀಲಂಕಾವನ್ನು ಸೂಪರ್ ಓವರ್‌ನಲ್ಲಿ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದೆ.

ಏಷ್ಯಾ ಕಪ್‌ನ 41 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ. ಹಾಲಿ ಚಾಂಪಿಯನ್ ಭಾರತ ತನ್ನ ಒಂಬತ್ತನೇ ಪ್ರಶಸ್ತಿಯನ್ನು ಗುರಿಯಾಗಿಸಿಕೊಂಡರೆ, ಪಾಕಿಸ್ತಾನ ತನ್ನ ಮೂರನೇ ಏಷ್ಯಾ ಕಪ್ ಟ್ರೋಫಿಯನ್ನು ಗುರಿಯಾಗಿಸಿಕೊಂಡಿದೆ.

ಅಭಿಷೇಕ್ ಶರ್ಮಾ ಮೇಲೆ ಎಲ್ಲರ ಕಣ್ಣಿದೆ:

ಪ್ರಸ್ತುತ ಅತ್ಯುತ್ತಮ ಫಾರ್ಮ್‌ನಲ್ಲಿರುವ ವಿಶ್ವದ ನಂ. 1 ಟಿ20ಐ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ, 2025 ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ಪರ ಇನ್ನಿಂಗ್ಸ್ ತೆರೆಯಲಿದ್ದಾರೆ. ಇಲ್ಲಿಯವರೆಗೆ ಟೂರ್ನಿಯ ಆರು ಪಂದ್ಯಗಳಲ್ಲಿ 309 ರನ್ ಗಳಿಸಿದ್ದಾರೆ ಮತ್ತು ದಾರಿಯುದ್ದಕ್ಕೂ ಹಲವಾರು ಬ್ಯಾಟಿಂಗ್ ದಾಖಲೆಗಳನ್ನು ಮುರಿದಿದ್ದಾರೆ. ಅಭಿಷೇಕ್ ಶರ್ಮಾ ಇನ್ನೂ 11 ರನ್‌ಗಳನ್ನು ಗಳಿಸಿದರೆ, ಅವರು ವಿರಾಟ್ ಕೊಹ್ಲಿ ಅವರ ಭಾರತಕ್ಕಾಗಿ ಟಿ20ಐ ಸರಣಿ/ಟೂರ್ನಮೆಂಟ್‌ನಲ್ಲಿ ಅತಿ ಹೆಚ್ಚು ರನ್‌ಗಳ ದಾಖಲೆಯನ್ನು ಮುರಿಯುತ್ತಾರೆ. ಇದು ಇಂದೇ ಆಗುತ್ತ ನೋಡಬೇಕು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Sun, 28 September 25

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ