AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಅಖಂಡ ಭಾರತ: ಪಾಕ್ ಅಭಿಮಾನಿಗಳಿಂದ ಭಾರತಕ್ಕೆ ಜೈಕಾರ

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಭಾರತ ಮತ್ತು ಯುಎಸ್​ಎ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ ನಡೆಯಲಿರುವ ಈ ಪಂದ್ಯದಲ್ಲಿ ಜಯಿಸಿದರೆ, ಟೀಮ್ ಇಂಡಿಯಾ ಮುಂದಿನ ಹಂತಕ್ಕೇರಲಿದೆ. ಅತ್ತ 2 ಗೆಲುವು ದಾಖಲಿಸಿರುವ ಯುಎಸ್​ಎ ತಂಡ ಕೂಡ ಗೆಲುವಿನ ವಿಶ್ವಾಸದಲ್ಲಿದ್ದು, ಈ ಮೂಲಕ ಸೂಪರ್-8 ಹಂತಕ್ಕೇರುವ ನಂಬಿಕೆಯಲ್ಲಿದೆ.

VIDEO: ಅಖಂಡ ಭಾರತ: ಪಾಕ್ ಅಭಿಮಾನಿಗಳಿಂದ ಭಾರತಕ್ಕೆ ಜೈಕಾರ
IND vs PAK
ಝಾಹಿರ್ ಯೂಸುಫ್
|

Updated on: Jun 11, 2024 | 7:38 PM

Share

T20 World Cup 2024: ಭಾರತ-ಪಾಕಿಸ್ತಾನ್ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಜಯಭೇರಿ ಬಾರಿಸಿದೆ. ಭಾನುವಾರ ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಜಯಿಸಿದ ಪಾಕ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 19 ಓವರ್​ಗಳಲ್ಲಿ 119 ರನ್​ಗಳಿಸಿ ಆಲೌಟ್ ಆಗಿತ್ತು.

120 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು ಭಾರತೀಯ ಬೌಲರ್​ಗಳ ಮಿಂಚಿನ ದಾಳಿಗೆ ದಂಗಾಗಿ ನಿಂತರು. ಪರಿಣಾಮ 20 ಓವರ್​ಗಳ ಮುಕ್ತಾಯದ ವೇಳೆಗೆ 7 ವಿಕೆಟ್ ಕಳೆದುಕೊಂಡು 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತ್ತು.

ಈ ಗೆಲುವಿನ ಬಳಿಕ ಪಾಕಿಸ್ತಾನ್ ತಂಡದ ಅಭಿಮಾನಿಗಳು ಭಾರತದ ಪರ ಘೋಷಣೆ ಕೂಗಿದ್ದು ವಿಶೇಷ. ಪಂದ್ಯದ ಮುಗಿದ ಬಳಿಕ ನ್ಯೂಯಾರ್ಕ್​ನ ಸ್ಟೇಡಿಯಂನ ಹೊರಗೆ ಭಾರತೀಯ ಅಭಿಮಾನಿಗಳೊಂದಿಗೆ ಪಾಕಿಸ್ತಾನಿಯೊಬ್ಬರು ಕುಣಿಯುತ್ತಿದ್ದರು.

ಇದೇ ವೇಳೆ ನೀವು ಡ್ಯಾನ್ಸ್ ಮಾಡಲು ಕಾರಣವೇನು ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಪಾಕಿಸ್ತಾನ್ ತಂಡದ ಅಭಿಮಾನಿ, ಡ್ಯಾನ್ಸ್ ಮಾಡಲು ಒಂದು ಕಾರಣ ಬೇಕಷ್ಟೇ. ದಿನದ ಅಂತ್ಯದಲ್ಲಿ ನಾವೆಲ್ಲರೂ ಭಾರತೀಯರು… ಅಖಂಡ ಭಾರತ… ಜೈ ಹಿಂದ್ ಎಂದಿದ್ದಾರೆ.

ಪಾಕಿಸ್ತಾನ್ ತಂಡದ ಜೆರ್ಸಿಯಲ್ಲಿ ಕಾಣಿಸಿಕೊಂಡ ಮತ್ತೊಬ್ಬ ಅಭಿಮಾನಿ ಕೂಡ ಭಾರತಕ್ಕೆ ಜೈಕಾರ ಹಾಕುತ್ತಾ ಸಾಗುತ್ತಿರುವುದು ಕಂಡು ಬಂದಿದೆ. ಈ ವಿಡಿಯೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

ಭಾರತದ ಪರ ಘೋಷಣೆ ಕೂಗಿದ ವೈರಲ್ ವಿಡಿಯೋ ಇಲ್ಲಿದೆ:

ಭಾರತ ತಂಡದ ಮುಂದಿನ ಪಂದ್ಯ ಯಾವಾಗ?

ಟೀಮ್ ಇಂಡಿಯಾ ಬುಧವಾರ (ಜೂ.12) ತನ್ನ ಮೂರನೇ ಪಂದ್ಯವಾಡಲಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡ ಯುಎಸ್​ಎ ಅನ್ನು ಎದುರಿಸಲಿದೆ.

ಇದನ್ನೂ ಓದಿ: India vs Pakistan: ಟೀಮ್ ಇಂಡಿಯಾ ಗೆಲುವಿಗೆ ಸಿರಾಜ್ ಕಾರಣ… ಹೇಗೆ ಗೊತ್ತಾ?

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಇದಾದ ಬಳಿಕ ಜೂನ್ 15 ರಂದು ಟೀಮ್ ಇಂಡಿಯಾ ಕೆನಡಾ ತಂಡದ ವಿರುದ್ಧ ಸೆಣಸಲಿದೆ. ಈ ಪಂದ್ಯದೊಂದಿಗೆ ಭಾರತ ತಂಡದ ಲೀಗ್ ಹಂತದ ಪಂದ್ಯಗಳು ಮುಗಿಯಲಿದೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್