VIDEO: ಅಖಂಡ ಭಾರತ: ಪಾಕ್ ಅಭಿಮಾನಿಗಳಿಂದ ಭಾರತಕ್ಕೆ ಜೈಕಾರ

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಭಾರತ ಮತ್ತು ಯುಎಸ್​ಎ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ ನಡೆಯಲಿರುವ ಈ ಪಂದ್ಯದಲ್ಲಿ ಜಯಿಸಿದರೆ, ಟೀಮ್ ಇಂಡಿಯಾ ಮುಂದಿನ ಹಂತಕ್ಕೇರಲಿದೆ. ಅತ್ತ 2 ಗೆಲುವು ದಾಖಲಿಸಿರುವ ಯುಎಸ್​ಎ ತಂಡ ಕೂಡ ಗೆಲುವಿನ ವಿಶ್ವಾಸದಲ್ಲಿದ್ದು, ಈ ಮೂಲಕ ಸೂಪರ್-8 ಹಂತಕ್ಕೇರುವ ನಂಬಿಕೆಯಲ್ಲಿದೆ.

VIDEO: ಅಖಂಡ ಭಾರತ: ಪಾಕ್ ಅಭಿಮಾನಿಗಳಿಂದ ಭಾರತಕ್ಕೆ ಜೈಕಾರ
IND vs PAK
Follow us
|

Updated on: Jun 11, 2024 | 7:38 PM

T20 World Cup 2024: ಭಾರತ-ಪಾಕಿಸ್ತಾನ್ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಜಯಭೇರಿ ಬಾರಿಸಿದೆ. ಭಾನುವಾರ ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಜಯಿಸಿದ ಪಾಕ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 19 ಓವರ್​ಗಳಲ್ಲಿ 119 ರನ್​ಗಳಿಸಿ ಆಲೌಟ್ ಆಗಿತ್ತು.

120 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು ಭಾರತೀಯ ಬೌಲರ್​ಗಳ ಮಿಂಚಿನ ದಾಳಿಗೆ ದಂಗಾಗಿ ನಿಂತರು. ಪರಿಣಾಮ 20 ಓವರ್​ಗಳ ಮುಕ್ತಾಯದ ವೇಳೆಗೆ 7 ವಿಕೆಟ್ ಕಳೆದುಕೊಂಡು 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತ್ತು.

ಈ ಗೆಲುವಿನ ಬಳಿಕ ಪಾಕಿಸ್ತಾನ್ ತಂಡದ ಅಭಿಮಾನಿಗಳು ಭಾರತದ ಪರ ಘೋಷಣೆ ಕೂಗಿದ್ದು ವಿಶೇಷ. ಪಂದ್ಯದ ಮುಗಿದ ಬಳಿಕ ನ್ಯೂಯಾರ್ಕ್​ನ ಸ್ಟೇಡಿಯಂನ ಹೊರಗೆ ಭಾರತೀಯ ಅಭಿಮಾನಿಗಳೊಂದಿಗೆ ಪಾಕಿಸ್ತಾನಿಯೊಬ್ಬರು ಕುಣಿಯುತ್ತಿದ್ದರು.

ಇದೇ ವೇಳೆ ನೀವು ಡ್ಯಾನ್ಸ್ ಮಾಡಲು ಕಾರಣವೇನು ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಪಾಕಿಸ್ತಾನ್ ತಂಡದ ಅಭಿಮಾನಿ, ಡ್ಯಾನ್ಸ್ ಮಾಡಲು ಒಂದು ಕಾರಣ ಬೇಕಷ್ಟೇ. ದಿನದ ಅಂತ್ಯದಲ್ಲಿ ನಾವೆಲ್ಲರೂ ಭಾರತೀಯರು… ಅಖಂಡ ಭಾರತ… ಜೈ ಹಿಂದ್ ಎಂದಿದ್ದಾರೆ.

ಪಾಕಿಸ್ತಾನ್ ತಂಡದ ಜೆರ್ಸಿಯಲ್ಲಿ ಕಾಣಿಸಿಕೊಂಡ ಮತ್ತೊಬ್ಬ ಅಭಿಮಾನಿ ಕೂಡ ಭಾರತಕ್ಕೆ ಜೈಕಾರ ಹಾಕುತ್ತಾ ಸಾಗುತ್ತಿರುವುದು ಕಂಡು ಬಂದಿದೆ. ಈ ವಿಡಿಯೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

ಭಾರತದ ಪರ ಘೋಷಣೆ ಕೂಗಿದ ವೈರಲ್ ವಿಡಿಯೋ ಇಲ್ಲಿದೆ:

ಭಾರತ ತಂಡದ ಮುಂದಿನ ಪಂದ್ಯ ಯಾವಾಗ?

ಟೀಮ್ ಇಂಡಿಯಾ ಬುಧವಾರ (ಜೂ.12) ತನ್ನ ಮೂರನೇ ಪಂದ್ಯವಾಡಲಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡ ಯುಎಸ್​ಎ ಅನ್ನು ಎದುರಿಸಲಿದೆ.

ಇದನ್ನೂ ಓದಿ: India vs Pakistan: ಟೀಮ್ ಇಂಡಿಯಾ ಗೆಲುವಿಗೆ ಸಿರಾಜ್ ಕಾರಣ… ಹೇಗೆ ಗೊತ್ತಾ?

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಇದಾದ ಬಳಿಕ ಜೂನ್ 15 ರಂದು ಟೀಮ್ ಇಂಡಿಯಾ ಕೆನಡಾ ತಂಡದ ವಿರುದ್ಧ ಸೆಣಸಲಿದೆ. ಈ ಪಂದ್ಯದೊಂದಿಗೆ ಭಾರತ ತಂಡದ ಲೀಗ್ ಹಂತದ ಪಂದ್ಯಗಳು ಮುಗಿಯಲಿದೆ.

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ