VIDEO: ಅಖಂಡ ಭಾರತ: ಪಾಕ್ ಅಭಿಮಾನಿಗಳಿಂದ ಭಾರತಕ್ಕೆ ಜೈಕಾರ

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಭಾರತ ಮತ್ತು ಯುಎಸ್​ಎ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ ನಡೆಯಲಿರುವ ಈ ಪಂದ್ಯದಲ್ಲಿ ಜಯಿಸಿದರೆ, ಟೀಮ್ ಇಂಡಿಯಾ ಮುಂದಿನ ಹಂತಕ್ಕೇರಲಿದೆ. ಅತ್ತ 2 ಗೆಲುವು ದಾಖಲಿಸಿರುವ ಯುಎಸ್​ಎ ತಂಡ ಕೂಡ ಗೆಲುವಿನ ವಿಶ್ವಾಸದಲ್ಲಿದ್ದು, ಈ ಮೂಲಕ ಸೂಪರ್-8 ಹಂತಕ್ಕೇರುವ ನಂಬಿಕೆಯಲ್ಲಿದೆ.

VIDEO: ಅಖಂಡ ಭಾರತ: ಪಾಕ್ ಅಭಿಮಾನಿಗಳಿಂದ ಭಾರತಕ್ಕೆ ಜೈಕಾರ
IND vs PAK
Follow us
|

Updated on: Jun 11, 2024 | 7:38 PM

T20 World Cup 2024: ಭಾರತ-ಪಾಕಿಸ್ತಾನ್ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಜಯಭೇರಿ ಬಾರಿಸಿದೆ. ಭಾನುವಾರ ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಜಯಿಸಿದ ಪಾಕ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 19 ಓವರ್​ಗಳಲ್ಲಿ 119 ರನ್​ಗಳಿಸಿ ಆಲೌಟ್ ಆಗಿತ್ತು.

120 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು ಭಾರತೀಯ ಬೌಲರ್​ಗಳ ಮಿಂಚಿನ ದಾಳಿಗೆ ದಂಗಾಗಿ ನಿಂತರು. ಪರಿಣಾಮ 20 ಓವರ್​ಗಳ ಮುಕ್ತಾಯದ ವೇಳೆಗೆ 7 ವಿಕೆಟ್ ಕಳೆದುಕೊಂಡು 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತ್ತು.

ಈ ಗೆಲುವಿನ ಬಳಿಕ ಪಾಕಿಸ್ತಾನ್ ತಂಡದ ಅಭಿಮಾನಿಗಳು ಭಾರತದ ಪರ ಘೋಷಣೆ ಕೂಗಿದ್ದು ವಿಶೇಷ. ಪಂದ್ಯದ ಮುಗಿದ ಬಳಿಕ ನ್ಯೂಯಾರ್ಕ್​ನ ಸ್ಟೇಡಿಯಂನ ಹೊರಗೆ ಭಾರತೀಯ ಅಭಿಮಾನಿಗಳೊಂದಿಗೆ ಪಾಕಿಸ್ತಾನಿಯೊಬ್ಬರು ಕುಣಿಯುತ್ತಿದ್ದರು.

ಇದೇ ವೇಳೆ ನೀವು ಡ್ಯಾನ್ಸ್ ಮಾಡಲು ಕಾರಣವೇನು ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಪಾಕಿಸ್ತಾನ್ ತಂಡದ ಅಭಿಮಾನಿ, ಡ್ಯಾನ್ಸ್ ಮಾಡಲು ಒಂದು ಕಾರಣ ಬೇಕಷ್ಟೇ. ದಿನದ ಅಂತ್ಯದಲ್ಲಿ ನಾವೆಲ್ಲರೂ ಭಾರತೀಯರು… ಅಖಂಡ ಭಾರತ… ಜೈ ಹಿಂದ್ ಎಂದಿದ್ದಾರೆ.

ಪಾಕಿಸ್ತಾನ್ ತಂಡದ ಜೆರ್ಸಿಯಲ್ಲಿ ಕಾಣಿಸಿಕೊಂಡ ಮತ್ತೊಬ್ಬ ಅಭಿಮಾನಿ ಕೂಡ ಭಾರತಕ್ಕೆ ಜೈಕಾರ ಹಾಕುತ್ತಾ ಸಾಗುತ್ತಿರುವುದು ಕಂಡು ಬಂದಿದೆ. ಈ ವಿಡಿಯೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

ಭಾರತದ ಪರ ಘೋಷಣೆ ಕೂಗಿದ ವೈರಲ್ ವಿಡಿಯೋ ಇಲ್ಲಿದೆ:

ಭಾರತ ತಂಡದ ಮುಂದಿನ ಪಂದ್ಯ ಯಾವಾಗ?

ಟೀಮ್ ಇಂಡಿಯಾ ಬುಧವಾರ (ಜೂ.12) ತನ್ನ ಮೂರನೇ ಪಂದ್ಯವಾಡಲಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡ ಯುಎಸ್​ಎ ಅನ್ನು ಎದುರಿಸಲಿದೆ.

ಇದನ್ನೂ ಓದಿ: India vs Pakistan: ಟೀಮ್ ಇಂಡಿಯಾ ಗೆಲುವಿಗೆ ಸಿರಾಜ್ ಕಾರಣ… ಹೇಗೆ ಗೊತ್ತಾ?

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಇದಾದ ಬಳಿಕ ಜೂನ್ 15 ರಂದು ಟೀಮ್ ಇಂಡಿಯಾ ಕೆನಡಾ ತಂಡದ ವಿರುದ್ಧ ಸೆಣಸಲಿದೆ. ಈ ಪಂದ್ಯದೊಂದಿಗೆ ಭಾರತ ತಂಡದ ಲೀಗ್ ಹಂತದ ಪಂದ್ಯಗಳು ಮುಗಿಯಲಿದೆ.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್