AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಭಾರತ vs ಪಾಕ್ ಪಂದ್ಯಕ್ಕೂ ಮುನ್ನ ಯುಟ್ಯೂಬರ್ ಹತ್ಯೆ

India vs Pakistan: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯಕ್ಕೂ ಮುನ್ನ ಪಾಕಿಸ್ತಾನದ ಯುಟ್ಯೂಬರ್ ಒಬ್ಬರನ್ನು ಅಲ್ಲಿನ ಭದ್ರತಾ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.

IND vs PAK: ಭಾರತ vs ಪಾಕ್ ಪಂದ್ಯಕ್ಕೂ ಮುನ್ನ ಯುಟ್ಯೂಬರ್ ಹತ್ಯೆ
IND vs PAK
ಝಾಹಿರ್ ಯೂಸುಫ್
|

Updated on:Jun 11, 2024 | 5:05 PM

Share

ಅಮೆರಿಕದಲ್ಲಿ ಕ್ರಿಕೆಟ್ ಜನಪ್ರಿಯತೆ ಹೆಚ್ಚಿಸಲು ಐಸಿಸಿ ಈ ಬಾರಿಯ ಟಿ20 ವಿಶ್ವಕಪ್ (T20 World Cup 2024)​ ಅನ್ನು ಯುಎಸ್​ಎ-ವೆಸ್ಟ್ ಇಂಡೀಸ್​ನಲ್ಲಿ ಆಯೋಜಿಸುತ್ತಿದೆ. ಅದರಲ್ಲೂ ವಿಶ್ವದ ಹೈವೋಲ್ಟೇಜ್ ಮುಖಾಮುಖಿ ಎನಿಸಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ್ ನಡುವಣ ಕದನವನ್ನು ಈ ಬಾರಿ ನ್ಯೂಯಾರ್ಕ್​ನಲ್ಲಿ ಆಯೋಜಿಸಲಾಗಿತ್ತು. ಈ ಮಹತ್ವದ ಪಂದ್ಯಕ್ಕೂ ಮುನ್ನ ಜನರ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದ ಯುಟ್ಯೂಬರ್​ನನ್ನು ಕರಾಚಿ ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ್ದಾನೆ.

ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೂ ಮುನ್ನ ಜನರ ಅಭಿಪ್ರಾಯದ ವ್ಲಾಗ್​ ಚಿತ್ರೀಕರಿಸಲು ಸಾದ್ ಅಹ್ಮದ್ ಕರಾಚಿ ನಗರದ ಪ್ರಮುಖ ಮೊಬೈಲ್ ಮಾರುಕಟ್ಟೆಗೆ ಹೋಗಿದ್ದಾರೆ. ಹೀಗೆ ಎಲ್ಲರೊಂದಿಗೆ ಮಾತನಾಡುತ್ತಾ, ಕ್ರಿಕೆಟ್​ ವಿಡಿಯೋ ಮಾಡುತ್ತಿದ್ದ ಸಾದ್​ಗೆ ಅಲ್ಲಿನ ಭದ್ರತಾ ಸಿಬ್ಬಂದಿ ಎದುರಾಗಿದ್ದಾರೆ.

ಇದೇ ವೇಳೆ ಭದ್ರತಾ ಸಿಬ್ಬಂದಿ ಜೊತೆ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ಬಗ್ಗೆ ಪ್ರಶ್ನಿಸಿದ್ದಾರೆ. ಆದರೆ ಈ ವೇಳೆ ವ್ಲಾಗ್​ನಲ್ಲಿ ಕಾಣಿಸಿಕೊಳ್ಳಲು ಅವರು ನಿರಾಕರಿಸಿದ್ದಾರೆ. ಇದಾಗ್ಯೂ ಪದೇ ಪದೇ ಪ್ರಶ್ನಿಸಿದಾಗ ಕೋಪಗೊಂಡ ಭದ್ರತಾ ಸಿಬ್ಬಂದಿ  ಸಾದ್ ಅಹ್ಮದ್ ಜೊತೆ ವಾಗ್ವಾದಕ್ಕಿಳಿದಿದ್ದರು.

ಈ ವಾಗ್ವಾದ ತಾರಕ್ಕೇರುತ್ತಿದ್ದಂತೆ ಭದ್ರತಾ ಸಿಬ್ಬಂದಿ ತನ್ನ ಗನ್​ನಿಂದ ಸಾದ್ ಅಹ್ಮದ್ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಶೂಟ್ ಮಾಡಿದ  ತಕ್ಷಣವೇ ಪಾಕ್ ಯುಟ್ಯೂಬರ್​ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆತನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು  ವೈದ್ಯರು ತಿಳಿಸಿದ್ದಾರೆ.

ಇನ್ನು ಯುಟ್ಯೂಬರ್​ನನ್ನು ಹತ್ಯೆ ಮಾಡಿದ ಭದ್ರತಾ ಸಿಬ್ಬಂದಿಯನ್ನು ಈಗಾಗಲೇ ಕರಾಚಿ ಪೊಲೀಸರು ಬಂಧಿಸಿದ್ದಾರೆ. ಈ ಬಂಧನದ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದ್ದು, ಇದೀಗ ಸಾದ್ ಅಹ್ಮದ್ ಹತ್ಯೆಯು ಪಾಕಿಸ್ತಾನದಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ. ಅಲ್ಲದೆ ಭದ್ರತಾ ಸಿಬ್ಬಂದಿಯ ನಡೆಯ ಬಗ್ಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಭಾರತ vs ಪಾಕಿಸ್ತಾನ್ ಪಂದ್ಯ:

ನ್ಯೂಯಾರ್ಕ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಧಿಸುವಂತೆ ದಾಳಿ ಸಂಘಟಿಸಿದ ಪಾಕ್ ಬೌಲರ್​ಗಳು ಟೀಮ್ ಇಂಡಿಯಾವನ್ನು 119 ರನ್​ಗಳಿಗೆ ಆಲೌಟ್ ಮಾಡಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 7 ವಿಕೆಟ್ ಕಳೆದುಕೊಂಡು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 113 ರನ್​ಗಳು ಮಾತ್ರ. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

ಇದನ್ನೂ ಓದಿ: India vs Pakistan: ಟೀಮ್ ಇಂಡಿಯಾ ಗೆಲುವಿಗೆ ಸಿರಾಜ್ ಕಾರಣ… ಹೇಗೆ ಗೊತ್ತಾ?

ಈ ಗೆಲುವಿನೊಂದಿಗೆ 4 ಅಂಕಗಳನ್ನು ಪಡೆದಿರುವ ಭಾರತ ತಂಡವು ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇನ್ನು ಯುಎಸ್​ಎ ತಂಡ ದ್ವಿತೀಯ ಸ್ಥಾನದಲ್ಲಿದ್ದು, ಪಾಕಿಸ್ತಾನ್ ತಂಡ 4ನೇ ಸ್ಥಾನಕ್ಕೆ ಕುಸಿದಿದೆ.

Published On - 5:04 pm, Tue, 11 June 24

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು