AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಭಾರತ vs ಪಾಕ್ ಪಂದ್ಯಕ್ಕೂ ಮುನ್ನ ಯುಟ್ಯೂಬರ್ ಹತ್ಯೆ

India vs Pakistan: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯಕ್ಕೂ ಮುನ್ನ ಪಾಕಿಸ್ತಾನದ ಯುಟ್ಯೂಬರ್ ಒಬ್ಬರನ್ನು ಅಲ್ಲಿನ ಭದ್ರತಾ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.

IND vs PAK: ಭಾರತ vs ಪಾಕ್ ಪಂದ್ಯಕ್ಕೂ ಮುನ್ನ ಯುಟ್ಯೂಬರ್ ಹತ್ಯೆ
IND vs PAK
ಝಾಹಿರ್ ಯೂಸುಫ್
|

Updated on:Jun 11, 2024 | 5:05 PM

Share

ಅಮೆರಿಕದಲ್ಲಿ ಕ್ರಿಕೆಟ್ ಜನಪ್ರಿಯತೆ ಹೆಚ್ಚಿಸಲು ಐಸಿಸಿ ಈ ಬಾರಿಯ ಟಿ20 ವಿಶ್ವಕಪ್ (T20 World Cup 2024)​ ಅನ್ನು ಯುಎಸ್​ಎ-ವೆಸ್ಟ್ ಇಂಡೀಸ್​ನಲ್ಲಿ ಆಯೋಜಿಸುತ್ತಿದೆ. ಅದರಲ್ಲೂ ವಿಶ್ವದ ಹೈವೋಲ್ಟೇಜ್ ಮುಖಾಮುಖಿ ಎನಿಸಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ್ ನಡುವಣ ಕದನವನ್ನು ಈ ಬಾರಿ ನ್ಯೂಯಾರ್ಕ್​ನಲ್ಲಿ ಆಯೋಜಿಸಲಾಗಿತ್ತು. ಈ ಮಹತ್ವದ ಪಂದ್ಯಕ್ಕೂ ಮುನ್ನ ಜನರ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದ ಯುಟ್ಯೂಬರ್​ನನ್ನು ಕರಾಚಿ ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ್ದಾನೆ.

ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೂ ಮುನ್ನ ಜನರ ಅಭಿಪ್ರಾಯದ ವ್ಲಾಗ್​ ಚಿತ್ರೀಕರಿಸಲು ಸಾದ್ ಅಹ್ಮದ್ ಕರಾಚಿ ನಗರದ ಪ್ರಮುಖ ಮೊಬೈಲ್ ಮಾರುಕಟ್ಟೆಗೆ ಹೋಗಿದ್ದಾರೆ. ಹೀಗೆ ಎಲ್ಲರೊಂದಿಗೆ ಮಾತನಾಡುತ್ತಾ, ಕ್ರಿಕೆಟ್​ ವಿಡಿಯೋ ಮಾಡುತ್ತಿದ್ದ ಸಾದ್​ಗೆ ಅಲ್ಲಿನ ಭದ್ರತಾ ಸಿಬ್ಬಂದಿ ಎದುರಾಗಿದ್ದಾರೆ.

ಇದೇ ವೇಳೆ ಭದ್ರತಾ ಸಿಬ್ಬಂದಿ ಜೊತೆ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ಬಗ್ಗೆ ಪ್ರಶ್ನಿಸಿದ್ದಾರೆ. ಆದರೆ ಈ ವೇಳೆ ವ್ಲಾಗ್​ನಲ್ಲಿ ಕಾಣಿಸಿಕೊಳ್ಳಲು ಅವರು ನಿರಾಕರಿಸಿದ್ದಾರೆ. ಇದಾಗ್ಯೂ ಪದೇ ಪದೇ ಪ್ರಶ್ನಿಸಿದಾಗ ಕೋಪಗೊಂಡ ಭದ್ರತಾ ಸಿಬ್ಬಂದಿ  ಸಾದ್ ಅಹ್ಮದ್ ಜೊತೆ ವಾಗ್ವಾದಕ್ಕಿಳಿದಿದ್ದರು.

ಈ ವಾಗ್ವಾದ ತಾರಕ್ಕೇರುತ್ತಿದ್ದಂತೆ ಭದ್ರತಾ ಸಿಬ್ಬಂದಿ ತನ್ನ ಗನ್​ನಿಂದ ಸಾದ್ ಅಹ್ಮದ್ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಶೂಟ್ ಮಾಡಿದ  ತಕ್ಷಣವೇ ಪಾಕ್ ಯುಟ್ಯೂಬರ್​ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆತನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು  ವೈದ್ಯರು ತಿಳಿಸಿದ್ದಾರೆ.

ಇನ್ನು ಯುಟ್ಯೂಬರ್​ನನ್ನು ಹತ್ಯೆ ಮಾಡಿದ ಭದ್ರತಾ ಸಿಬ್ಬಂದಿಯನ್ನು ಈಗಾಗಲೇ ಕರಾಚಿ ಪೊಲೀಸರು ಬಂಧಿಸಿದ್ದಾರೆ. ಈ ಬಂಧನದ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದ್ದು, ಇದೀಗ ಸಾದ್ ಅಹ್ಮದ್ ಹತ್ಯೆಯು ಪಾಕಿಸ್ತಾನದಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ. ಅಲ್ಲದೆ ಭದ್ರತಾ ಸಿಬ್ಬಂದಿಯ ನಡೆಯ ಬಗ್ಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಭಾರತ vs ಪಾಕಿಸ್ತಾನ್ ಪಂದ್ಯ:

ನ್ಯೂಯಾರ್ಕ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಧಿಸುವಂತೆ ದಾಳಿ ಸಂಘಟಿಸಿದ ಪಾಕ್ ಬೌಲರ್​ಗಳು ಟೀಮ್ ಇಂಡಿಯಾವನ್ನು 119 ರನ್​ಗಳಿಗೆ ಆಲೌಟ್ ಮಾಡಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 7 ವಿಕೆಟ್ ಕಳೆದುಕೊಂಡು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 113 ರನ್​ಗಳು ಮಾತ್ರ. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

ಇದನ್ನೂ ಓದಿ: India vs Pakistan: ಟೀಮ್ ಇಂಡಿಯಾ ಗೆಲುವಿಗೆ ಸಿರಾಜ್ ಕಾರಣ… ಹೇಗೆ ಗೊತ್ತಾ?

ಈ ಗೆಲುವಿನೊಂದಿಗೆ 4 ಅಂಕಗಳನ್ನು ಪಡೆದಿರುವ ಭಾರತ ತಂಡವು ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇನ್ನು ಯುಎಸ್​ಎ ತಂಡ ದ್ವಿತೀಯ ಸ್ಥಾನದಲ್ಲಿದ್ದು, ಪಾಕಿಸ್ತಾನ್ ತಂಡ 4ನೇ ಸ್ಥಾನಕ್ಕೆ ಕುಸಿದಿದೆ.

Published On - 5:04 pm, Tue, 11 June 24

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ