AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಓಪನರ್ ಯಾರು?; ಪಾಕ್ ಪತ್ರಕರ್ತನ ಪ್ರಶ್ನೆಗೆ ರೋಹಿತ್ ನೀಡಿದ ಉತ್ತರವೇನು ಗೊತ್ತಾ?

Asia Cup 2022: ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ವಿಶ್ರಾಂತಿಯಲ್ಲಿದ್ದು, ಜಿಂಬಾಬ್ವೆ ಪ್ರವಾಸದಿಂದ ತಂಡಕ್ಕೆ ಮರಳಿದ್ದಾರೆ. ಮೂಲತಃ ರಾಹುಲ್ ಓಪನರ್ ಆಗಿದ್ದು, ಅವರು ಇಲ್ಲದಿದ್ದಾಗ ರೋಹಿತ್ ಬೇರೆ ಬೇರೆ ಆಟಗಾರರೊಂದಿಗೆ ಓಪನಿಂಗ್ ಮಾಡುತ್ತಿದ್ದರು.

IND vs PAK: ಓಪನರ್ ಯಾರು?; ಪಾಕ್ ಪತ್ರಕರ್ತನ ಪ್ರಶ್ನೆಗೆ ರೋಹಿತ್ ನೀಡಿದ ಉತ್ತರವೇನು ಗೊತ್ತಾ?
TV9 Web
| Edited By: |

Updated on:Aug 27, 2022 | 8:19 PM

Share

ಭಾನುವಾರ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ (India and Pakistan) ತಂಡಗಳ ನಡುವೆ ಏಷ್ಯಾಕಪ್-2022 (Asia Cup-2022) ಪಂದ್ಯ ನಡೆಯಲಿದೆ. ಇಡೀ ವಿಶ್ವದ ಕಣ್ಣು ಈ ಪಂದ್ಯದ ಮೇಲೆ ನೆಟ್ಟಿದೆ. ಈ ಪಂದ್ಯದಿಂದಲೇ ಉಭಯ ತಂಡಗಳು ತಮ್ಮ ಅಭಿಯಾನ ಆರಂಭಿಸಲಿವೆ. ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಟೀಮ್ ಮ್ಯಾನೇಜ್​ಮೆಂಟ್ ಯಾವ 11 ಆಟಗಾರರಿಗೆ ಅವಕಾಶ ನೀಡಲಿದೆ ಎಂಬುದು ಭಾರತೀಯ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಈ ಬಗ್ಗೆ ಪರಿಸ್ಥಿತಿ ತಿಳಿಗೊಳಿಸಿ ಆಡುವ-11ರ ಬಗ್ಗೆ ಕೆಲವು ಸೂಚನೆಗಳನ್ನು ನೀಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು, ಆದರೆ ಅದು ಆಗಲಿಲ್ಲ.

ರೋಹಿತ್ ಪತ್ರಿಕಾಗೋಷ್ಠಿ ನಡೆಸಿದರು ಆದರೆ ಆಡುವ -11 ಬಗ್ಗೆ ಏನನ್ನೂ ಹೇಳಲಿಲ್ಲ. ಜೊತೆಗೆ ಇಲ್ಲಿಯವರೆಗೆ ತಂಡದ ಆಡಳಿತ ಮಂಡಳಿ ಇದರ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ಏಷ್ಯಾಕಪ್ ಆಗಸ್ಟ್ 27 ರಿಂದ ಆರಂಭವಾಗಿದ್ದು, ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಶ್ರೀಲಂಕಾವನ್ನು ಎದುರಿಸಿದೆ. ಮರುದಿನ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಪ್ಲೇಯಿಂಗ್-11 ಬಗ್ಗೆ ರೋಹಿತ್ ಏನು ಹೇಳುತ್ತಾರೆಂದು ಪಾಕಿಸ್ತಾನವೂ ಕಾದು ಕುಳಿತಿತ್ತು, ಆದರೆ ಅವರಿಗೂ ನಿರಾಸೆಯಾಯಿತು. ಅಲ್ಲದೆ ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದಾರೆ.

ಟಾಸ್ ಮುಖ್ಯವಲ್ಲ

ರೋಹಿತ್‌ಗೆ ಆಡುವ ಹನ್ನೊಂದರ ಬಳಗದ ಬಗ್ಗೆ ಕೇಳಿದಾಗ, ನಾವು ಇನ್ನೂ ಆಡುವ ಹನ್ನೊಂದರ ಬಳಗದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಇಂದಿನ ಪಂದ್ಯ (ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ) ನಡೆಯಲಿರುವ ಪಿಚ್‌ನಲ್ಲಿಯೇ ನಾಳೆಯ ಪಂದ್ಯವೂ ನಡೆಯಲಿದೆ. ಪಂದ್ಯ ಯಾವ ರೀತಿ ಆಗುತ್ತದೆ ಎಂಬುದನ್ನು ಕಾದು ನೋಡಬೇಕು. ಇದರ ಆಧಾರದ ಮೇಲೆ, ನಾವು ನಮ್ಮ ತಂಡದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಪಿಚ್ ಕ್ಯುರೇಟರ್ ಜೊತೆ ಮಾತನಾಡಿದ್ದೇನೆ. ಟಾಸ್ ಹೆಚ್ಚು ಮುಖ್ಯವಲ್ಲ, ಇಲ್ಲಿ ಇಬ್ಬನಿ ಇರುವುದಿಲ್ಲ. ಆದರೆ ಇಂದು ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯ ಹೇಗೆ ನಡೆಯಲಿದೆ ಎಂದು ನೋಡೋಣ. ಅದರ ನಂತರ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಓಪನರ್ ಯಾರು?

ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ವಿಶ್ರಾಂತಿಯಲ್ಲಿದ್ದು, ಜಿಂಬಾಬ್ವೆ ಪ್ರವಾಸದಿಂದ ತಂಡಕ್ಕೆ ಮರಳಿದ್ದಾರೆ. ಮೂಲತಃ ರಾಹುಲ್ ಓಪನರ್ ಆಗಿದ್ದು, ಅವರು ಇಲ್ಲದಿದ್ದಾಗ ರೋಹಿತ್ ಬೇರೆ ಬೇರೆ ಆಟಗಾರರೊಂದಿಗೆ ಓಪನಿಂಗ್ ಮಾಡುತ್ತಿದ್ದರು. ದೀಪಕ್ ಹೂಡಾ ಕೂಡ ಓಪನಿಂಗ್ ಮಾಡಿದ್ದು, ಸೂರ್ಯಕುಮಾರ್ ಯಾದವ್ ಕೂಡ ಓಪನ್ ಮಾಡಿದರು. ಹೀಗಾಗಿ ಈ ಪಂದ್ಯಾವಳಿಯಲ್ಲಿ ಕೆಎಲ್ ರಾಹುಲ್ ಬಂದ ನಂತರ ಅವರು ಓಪನಿಂಗ್ ಮಾಡುತ್ತಾರೆಯೇ ಅಥವಾ ನಾಯಕನ ಜೊತೆ ಬೇರೆಯವರನ್ನು ನೋಡಬಹುದೇ ಎಂದು ರೋಹಿತ್ ಅವರನ್ನು ಪಾಕ್ ಪತ್ರಕರ್ತರು ಕೇಳಿದರು. ಈ ಬಗ್ಗೆ ಉತ್ತರಿಸಿದ ಹಿಟ್​ಮ್ಯಾನ್, ನಾಳೆ ಟಾಸ್ ನಂತರ ಯಾರು ಬರುತ್ತಾರೆ ಎಂದು ನೋಡೋಣ. ನಾವೂ ಕೂಡ ಸ್ವಲ್ಪ ರಹಸ್ಯವನ್ನು ಇಟ್ಟುಕೊಳ್ಳೋಣ ಎಂದಿದ್ದಾರೆ.

Published On - 8:19 pm, Sat, 27 August 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ