AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಹೀಗಾದರೆ ಭಾರತ- ಪಾಕ್ ನಡುವೆ ಟಿ20 ವಿಶ್ವಕಪ್​ನಲ್ಲಿ ಮತ್ತೊಂದು ಪಂದ್ಯ

India Pakistan T20 World Cup 2026: ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳು ಅಭಿಮಾನಿಗಳಿಗೆ ಹಬ್ಬ. ಈಗಾಗಲೇ ಉಭಯ ತಂಡಗಳು ಒಮ್ಮೆ ಮುಖಾಮುಖಿಯಾಗಿವೆ. ಸೂಪರ್-8 ಹಂತದಲ್ಲಿ ಭೇಟಿಯಾಗದಿದ್ದರೂ, ಸೆಮಿಫೈನಲ್ ಅಥವಾ ಫೈನಲ್‌ನಲ್ಲಿ ಎರಡನೇ ಬಾರಿ ಮುಖಾಮುಖಿಯಾಗುವ ಸಾಧ್ಯತೆಗಳಿವೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಮಿಫೈನಲ್‌ಗೆ ತಲುಪಿದಾಗ ಅಥವಾ ಫೈನಲ್‌ಗೆ ಅರ್ಹತೆ ಪಡೆದಾಗ ಮತ್ತೊಂದು ರೋಚಕ ಪಂದ್ಯ ನಿರೀಕ್ಷಿಸಬಹುದು.

IND vs PAK: ಹೀಗಾದರೆ ಭಾರತ- ಪಾಕ್ ನಡುವೆ ಟಿ20 ವಿಶ್ವಕಪ್​ನಲ್ಲಿ ಮತ್ತೊಂದು ಪಂದ್ಯ
Ind Vs Pak
ಪೃಥ್ವಿಶಂಕರ
|

Updated on: Feb 16, 2026 | 5:28 PM

Share

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಕ್ರಿಕೆಟ್ ಪಂದ್ಯವೆಂದರೆ ಅಭಿಮಾನಿಗಳಿಗೆ ಅದೊಂದು ಹಬ್ಬವೇ ಸರಿ. ಆದಾಗ್ಯೂ ಈ ತಂಡಗಳು ಐಸಿಸಿ ಹಾಗೂ ಎಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುವುದರಿಂದ ವರ್ಷಕ್ಕೆ ಮೂರು ಅಥವಾ ನಾಲ್ಕು ಪಂದ್ಯಗಳು ನಡೆದರೆ ಹೆಚ್ಚು. ಹೀಗಿರುವಾಗ ಒಂದೇ ಈವೆಂಟ್​ನಲ್ಲಿ ಉಭಯ ತಂಡಗಳು ಎರಡು ಬಾರಿ ಮುಖಾಮುಖಿಯಾಗುವುದು ಅಭಿಮಾನಿಗಳ ಪಾಲಿಗೆ ಅದು ಅದೃಷ್ಟವೇ ಸರಿ. ಇದೀಗ ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲೂ (T20 World Cup) ಭಾರತ ಹಾಗೂ ಪಾಕಿಸ್ತಾನ ತಂಡಗಳು ಎರಡು ಬಾರಿ ಮುಖಾಮುಖಿಯಾಗುವ ಸಾಧ್ಯತೆಗಳಿವೆ. ಈಗಾಗಲೇ ಎರಡು ತಂಡಗಳು ಒಮ್ಮೆ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಭಾರತ ತಂಡ ಏಕಪಕ್ಷೀಯ ಗೆಲುವು ದಾಖಲಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಎರಡು ತಂಡಗಳು ಸೆಮಿಫೈನಲ್ ಅಥವಾ ಫೈನಲ್​ನಲ್ಲಿ ಮತ್ತೊಂದು ಪಂದ್ಯವನ್ನಾಡಲಿವೆ.

ಸೂಪರ್-8 ಸುತ್ತು ಹೇಗಿರಲಿದೆ?

ಗುಂಪು ಹಂತದಲ್ಲಿ ಪಾಕಿಸ್ತಾನ ತನ್ನ ಕೊನೆಯ ಪಂದ್ಯವನ್ನು ನಮೀಬಿಯಾ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಪಾಕ್ ಗೆದ್ದರೆ, 2026 ರ ಟಿ20 ವಿಶ್ವಕಪ್‌ನ ಗ್ರೂಪ್ ಎ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಸೂಪರ್ 8 ಸುತ್ತಿನಲ್ಲಿ ಸ್ಥಾನ ಪಡೆಯುತ್ತದೆ. ಅದೇ ರೀತಿ, ಉಳಿದ ಮೂರು ಗುಂಪುಗಳ ಅಗ್ರ ಎರಡು ತಂಡಗಳು ಸೂಪರ್ 8 ಸುತ್ತಿಗೆ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಳ್ಳುತ್ತವೆ. ಯಾವುದೇ ಪ್ರಮುಖ ಬದಲಾವಣೆಗಳಿಲ್ಲದಿದ್ದರೆ, ಗ್ರೂಪ್ ಎ ಯಿಂದ ಭಾರತ ಮತ್ತು ಪಾಕಿಸ್ತಾನ, ಗ್ರೂಪ್ ಬಿ ಯಿಂದ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ, ಗ್ರೂಪ್ ಸಿ ಯಿಂದ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ಮತ್ತು ಗ್ರೂಪ್ ಡಿ ಯಿಂದ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೂಪರ್ 8 ಸುತ್ತಿಗೆ ಪ್ರವೇಶಿಸಬಹುದು. ಸೂಪರ್ 8 ಸುತ್ತಿನಲ್ಲಿ ಎರಡು ಗುಂಪುಗಳು ಈ ಕೆಳಗಿನಂತಿರಬಹುದು.

ಗುಂಪು 1 ರಲ್ಲಿ ಭಾರತ, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ

ಗುಂಪು 2 ರಲ್ಲಿ ಇಂಗ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಶ್ರೀಲಂಕಾ

ಸೂಪರ್ 8 ಸುತ್ತಿನಲ್ಲಿ ಮುಖಾಮುಖಿ ಇಲ್ಲ

ಸೂಪರ್ 8 ಹಂತದಲ್ಲಿ, ಪ್ರತಿ ತಂಡವು ತನ್ನ ಗುಂಪಿನಲ್ಲಿರುವ ಪ್ರತಿಯೊಂದು ತಂಡದ ವಿರುದ್ಧ ಒಂದು ಪಂದ್ಯವನ್ನು ಆಡಲಿದೆ. ಸೂಪರ್ 8 ಗುಂಪು ಬದಲಾಗದೆ ಉಳಿದರೆ, ಭಾರತ ಫೆಬ್ರವರಿ 22 ರಂದು ದಕ್ಷಿಣ ಆಫ್ರಿಕಾ ವಿರುದ್ಧ, ಫೆಬ್ರವರಿ 26 ರಂದು ಆಸ್ಟ್ರೇಲಿಯಾ ವಿರುದ್ಧ ಮತ್ತು ಕೊನೆಯ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಹೀಗಾಗಿ ಸೂಪರ್ 8 ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆಯುವುದಿಲ್ಲ

ಸೆಮಿಫೈನಲ್‌ನಲ್ಲಿ ಪಂದ್ಯ ನಡೆಯುವ ಸಾಧ್ಯತೆ

ಆದರೆ ಭಾರತ ಮತ್ತು ಪಾಕಿಸ್ತಾನ ತಮ್ಮ ತಮ್ಮ ಗುಂಪುಗಳಿಂದ ಸೆಮಿಫೈನಲ್ ತಲುಪುವಲ್ಲಿ ಯಶಸ್ವಿಯಾದರೆ, ಇಲ್ಲಿ ಮುಖಾಮುಖಿಯಾಗಬಹುದು. ಗುಂಪು 1 ರಿಂದ ಟೀಂ ಇಂಡಿಯಾ ಅಗ್ರಸ್ಥಾನ ಪಡೆದು ಸೆಮಿಫೈನಲ್‌ಗೆ ಮುನ್ನಡೆದರೆ, ಇತ್ತು ಗುಂಪು 2 ರಿಂದ ಪಾಕಿಸ್ತಾನ ತಂಡ ಎರಡನೇ ತಂಡವಾಗಿ ಸೆಮಿಫೈನಲ್ ತಲುಪಿದರೆ ಎರಡೂ ತಂಡಗಳು ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗಬಹುದು.

T20 World Cup: 43 ವರ್ಷಗಳಲ್ಲಿ 3ನೇ ಬಾರಿಗೆ; ಭಾರತವೇ ಚಾಂಪಿಯನ್ ಎನ್ನುತ್ತಿದೆ ಇತಿಹಾಸ

ಆದಾಗ್ಯೂ, ಭಾರತ ಮತ್ತು ಪಾಕಿಸ್ತಾನ ಎರಡೂ ಸೂಪರ್-8 ಸುತ್ತಿನಲ್ಲಿ ತಮ್ಮ ತಮ್ಮ ಗುಂಪುಗಳಲ್ಲಿ ಅಗ್ರಸ್ಥಾನ ಪಡೆದರೆ ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗುವುದಿಲ್ಲ. ಆದರೆ ಎರಡೂ ತಂಡಗಳು ಸೆಮಿಫೈನಲ್​ನಲ್ಲಿ ಗೆದ್ದರೆ, ಫೈನಲ್​ನಲ್ಲಿ ಮುಖಾಮುಖಿಯಾಗಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ