AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಟೀಮ್ ಇಂಡಿಯಾದಿಂದ ರಿಷಭ್ ಪಂತ್​ರನ್ನು ಕೈ ಬಿಡಲು ಇದುವೇ ಕಾರಣ..!

Rishabh Pant: ಪಂತ್ ಸ್ಥಾನದಲ್ಲಿ ಟೀಮ್ ಇಂಡಿಯಾ ವೇಗಿ ಅವೇಶ್ ಖಾನ್​ರನ್ನು ಆಯ್ಕೆ ಮಾಡಿದೆ. ಈ ಮೂಲಕ 7 ಬ್ಯಾಟ್ಸ್​ಮನ್ ಹಾಗೂ 4 ಪರಿಪೂರ್ಣ ಬೌಲರ್​ಗಳನ್ನು ಕಣಕ್ಕಿಳಿಸಿದೆ.

Rishabh Pant: ಟೀಮ್ ಇಂಡಿಯಾದಿಂದ ರಿಷಭ್ ಪಂತ್​ರನ್ನು ಕೈ ಬಿಡಲು ಇದುವೇ ಕಾರಣ..!
Rishabh Pant
TV9 Web
| Edited By: |

Updated on: Aug 28, 2022 | 7:24 PM

Share

India vs Pakistan: ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಬಳಿಕ ಮಾತನಾಡಿದ ರೋಹಿತ್ ಶರ್ಮಾ ಪ್ಲೇಯಿಂಗ್ ಇಲೆವೆನ್​ನಲ್ಲಿ ರಿಷಭ್ ಪಂತ್ ಅವರಿಗೆ ಸ್ಥಾನ ನೀಡಲಾಗಿಲ್ಲ ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಪಂತ್ ಆಡುವ ಬಳಗದಿಂದ ಹೊರಬೀಳಲು ಕಾರಣವೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಸಿಗುತ್ತಿರುವ ಉತ್ತರ ತಂಡದಲ್ಲಿನ ಸಮತೋಲನ. ಇಬ್ಬರು ವಿಕೆಟ್ ಕೀಪರ್​ಗಳನ್ನು ಪ್ಲೇಯಿಂಗ್ ಇಲೆವೆನ್​ಗೆ ಆಯ್ಕೆ ಮಾಡಿದರೆ ಓರ್ವ ಬೌಲರ್ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ರಿಷಭ್ ಪಂತ್ ಅವರನ್ನು ಕೈ ಬಿಟ್ಟು ದಿನೇಶ್ ಕಾರ್ತಿಕ್​​ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.

ಇನ್ನು ಪಂತ್ ಸ್ಥಾನದಲ್ಲಿ ಟೀಮ್ ಇಂಡಿಯಾ ವೇಗಿ ಅವೇಶ್ ಖಾನ್​ರಿಗೆ ಸ್ಥಾನ ನೀಡಲಾಗಿದೆ. ಈ ಮೂಲಕ 7 ಬ್ಯಾಟ್ಸ್​ಮನ್ ಹಾಗೂ 4 ಪರಿಪೂರ್ಣ ಬೌಲರ್​ಗಳನ್ನು ಕಣಕ್ಕಿಳಿಸಿದೆ. ಇದರಿಂದ ಟೀಮ್ ಇಂಡಿಯಾ 6 ಬೌಲರ್​ಗಳನ್ನು ಬಳಸಿಕೊಳ್ಳಬಹುದು. ಅಂದರೆ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್ ವೇಗಿಗಳಾಗಿ ತಂಡದಲ್ಲಿದ್ದರೆ, ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಾಲ್ ಸ್ಥಾನ ಪಡೆದಿದ್ದಾರೆ. ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಅವಕಾಶ ಪಡೆದಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಪಡೆ ಹೆಚ್ಚುವರಿ ಓರ್ವ ಬೌಲರ್​ನ ಆಯ್ಕೆಯೊಂದಿಗೆ ಕಣಕ್ಕಿಳಿದಿದೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್,ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಾಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್

ಪಾಕಿಸ್ತಾನ್ ಪ್ಲೇಯಿಂಗ್ ಇಲೆವೆನ್: ಬಾಬರ್ ಆಜಮ್, ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾನವಾಜ್ ದಹಾನಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್