AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ವಿರುದ್ಧ ಸ್ಪೋಟಕ ಸೆಂಚುರಿ ಸಿಡಿಸಿದ 19ರ ಹರೆಯದ ಬ್ಯಾಟರ್

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್​ನ ಓವಲ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಪಿಂಕ್ ಬಾಲ್ ಟೆಸ್ಟ್ ಎಂಬುದು ವಿಶೇಷ. ಅಂದರೆ ಹೊನಲು ಬೆಳಕಿನಲ್ಲಿ ಆಡಲಾಗುವ ಈ ಪಂದ್ಯದಲ್ಲಿ ಪಿಂಕ್ ಬಾಲ್ ಅನ್ನು ಬಳಸಲಾಗುತ್ತದೆ.

ಟೀಮ್ ಇಂಡಿಯಾ ವಿರುದ್ಧ ಸ್ಪೋಟಕ ಸೆಂಚುರಿ ಸಿಡಿಸಿದ 19ರ ಹರೆಯದ ಬ್ಯಾಟರ್
Sam Konstas
ಝಾಹಿರ್ ಯೂಸುಫ್
|

Updated on: Dec 01, 2024 | 2:06 PM

Share

ಕ್ಯಾನ್​​ಬೆರಾದಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ 19ರ ಹರೆಯದ ಯುವ ಬ್ಯಾಟರ್ ಸ್ಯಾಮ್ ಕೊನ್ಸ್​​ಟಾಸ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಮನುಕಾ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪ್ರೈಮ್ ಮಿನಿಸ್ಟರ್ಸ್​ ಇಲೆವೆನ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಪ್ರೈ ಇನಿಂಗ್ಸ್ ಆರಂಭಿಸಿದ ಸ್ಯಾಮ್ ಕೊನ್ಸ್​​ಟಾಸ್ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್​​ಗೆ ಸ್ಪೋಟಕ ಆರಂಭ ಒದಗಿಸಿದ್ದರು. ಟೀಮ್ ಇಂಡಿಯಾ ಬೌಲರ್​​ಗಳನ್ನು ನಿರಾಯಾಸವಾಗಿ ಎದುರಿಸಿದ ಸ್ಯಾಮ್ ಮೈದಾನದ ಮೂಲೆ ಮೂಲೆಗೆ ಫೋರ್​​ಗಳನ್ನು ಬಾರಿಸುವ ಮೂಲಕ ಗಮನ ಸೆಳೆದರು. ಅಲ್ಲದೆ ಕೇವಲ 90 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಮಿಂಚಿದರು.

ಅಂತಿಮವಾಗಿ 97 ಎಸೆತಗಳನ್ನು ಎದುರಿಸಿದ ಸ್ಯಾಮ್ ಕೊನ್ಸ್​​ಟಾಸ್ 14 ಫೋರ್ ಹಾಗೂ 1 ಸಿಕ್ಸ್​​ನೊಂದಿಗೆ 107 ರನ್ ಬಾರಿಸಿ ಆಕಾದ್ ದೀಪ್​​ಗೆ ವಿಕೆಟ್ ಒಪ್ಪಿಸಿದರು. ಸ್ಯಾಮ್ ಸಿಡಿಸಿದ ಈ ಸ್ಪೋಟಕ ಸೆಂಚುರಿ ನೆರವಿನಿಂದ ಪ್ರೈಮ್ ಮಿನಿಸ್ಟರ್ಸ್​ ಇಲೆವೆನ್ ತಂಡವು ಮೊದಲ ಇನಿಂಗ್ಸ್​​ನಲ್ಲಿ 240 ರನ್​​ಗಳಿಸಿ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ 6 ಓವರ್​​ಗಳಲ್ಲಿ 44 ರನ್ ನೀಡಿ ಹರ್ಷಿತ್ ರಾಣಾ 4 ವಿಕೆಟ್ ಪಡೆದರೆ, ಆಕಾಶ್ ದೀಪ್ 1 ವಿಕೆಟ್ ಪಡೆದರು.

ಪ್ರೈಮ್ ಮಿನಿಸ್ಟರ್ಸ್ ಇಲೆವೆನ್: ಜ್ಯಾಕ್ ಎಡ್ವರ್ಡ್ಸ್ (ನಾಯಕ) , ಮ್ಯಾಟ್ ರೆನ್‌ಶಾ , ಜ್ಯಾಕ್ ಕ್ಲೇಟನ್ , ಆಲಿವರ್ ಡೇವಿಸ್ , ಜೇಡನ್ ಗುಡ್‌ವಿನ್ , ಸ್ಯಾಮ್ ಹಾರ್ಪರ್ (ವಿಕೆಟ್ ಕೀಪರ್) , ಚಾರ್ಲಿ ಅ್ಯಂಡರ್ಸನ್ , ಸ್ಯಾಮ್ ಕೊನ್‌ಸ್ಟಾಸ್ , ಸ್ಕಾಟ್ ಬೋಲ್ಯಾಂಡ್ , ಲಾಯ್ಡ್ ಪೋಪ್ , ಹ್ಯಾನೋ ಜೇಕಬ್ಸ್ , ಮಹ್ಲಿ ಬಿಯರ್ಡ್‌ಮನ್ , ಏಡನ್ ಓನ್ ಕಾನರ್ , ಜೆಮ್ ರಯಾನ್, ಜಾಕ್ ನಿಸ್ಬೆಟ್.

ಇದನ್ನೂ ಓದಿ: IPL 2025: RCB ತಂಡಕ್ಕೆ 4 ತವರು ಮೈದಾನ..!

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.

ಭಾರತ vs ಆಸ್ಟ್ರೇಲಿಯಾ ದ್ವಿತೀಯ ಟೆಸ್ಟ್ ಯಾವಾಗ?

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್​ನ ಓವಲ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಪಿಂಕ್ ಬಾಲ್ ಟೆಸ್ಟ್ ಎಂಬುದು ವಿಶೇಷ. ಅಂದರೆ ಹೊನಲು ಬೆಳಕಿನಲ್ಲಿ ಆಡಲಾಗುವ ಈ ಪಂದ್ಯದಲ್ಲಿ ಪಿಂಕ್ ಬಾಲ್ ಅನ್ನು ಬಳಸಲಾಗುತ್ತದೆ. ಇದಕ್ಕಾಗಿಯೇ ಇದೀಗ ಭಾರತ ತಂಡವು ಪ್ರೈಮ್ ಮಿನಿಸ್ಟರ್ ಇಲೆವೆನ್ ವಿರುದ್ಧ ಪಿಂಕ್ ಬಾಲ್​​ನಲ್ಲಿ ಅಭ್ಯಾಸ ಪಂದ್ಯವನ್ನಾಡುತ್ತಿದೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!