AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಮಳೆಯಿಂದಾಗಿ ಪಂದ್ಯದಲ್ಲಿ ಬದಲಾವಣೆ! ಧವನ್ ಪಡೆಯಲ್ಲಿ ಇಬ್ಬರು ಹೊಸಬರು; ಹೀಗಿವೆ ಉಭಯ ತಂಡಗಳು

IND vs SA: ಹಲವು ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಯುವ ಆಟಗಾರರಿಗೆ ಈ ಸರಣಿಯಲ್ಲಿ ಬಾಗಿಲು ತೆರೆದಿದ್ದು ಇಬ್ಬರಿಗೆ ಈ ಪಂದ್ಯದಲ್ಲಿ ಪದಾರ್ಪಣೆ ಮಾಡುವ ಅವಕಾಶ ಸಿಕ್ಕಿದೆ. ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ರುರತುರಾಜ್ ಗಾಯಕ್ವಾಡ್ ಮತ್ತು ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

IND vs SA: ಮಳೆಯಿಂದಾಗಿ ಪಂದ್ಯದಲ್ಲಿ ಬದಲಾವಣೆ! ಧವನ್ ಪಡೆಯಲ್ಲಿ ಇಬ್ಬರು ಹೊಸಬರು; ಹೀಗಿವೆ ಉಭಯ ತಂಡಗಳು
IND vs SA
TV9 Web
| Edited By: |

Updated on:Oct 06, 2022 | 4:07 PM

Share

ಟಿ20 ಸರಣಿ ಪೂರ್ಣಗೊಂಡ ನಂತರ, ಭಾರತ ಮತ್ತು ದಕ್ಷಿಣ ಆಫ್ರಿಕಾ (India and South Africa) ನಡುವಿನ ಪೈಪೋಟಿ ಇದೀಗ ಏಕದಿನ ಮಾದರಿಯಲ್ಲಿ ಪ್ರಾರಂಭವಾಗುತ್ತಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಲಕ್ನೋದಲ್ಲಿ ಆರಂಭವಾಗಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ಶಿಖರ್ ಧವನ್ (Shikhar Dhawan) ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಆದರೆ, ಮಳೆಯಿಂದಾಗಿ ಪಂದ್ಯ ಆರಂಭ 2 ಗಂಟೆಗೂ ಹೆಚ್ಚು ವಿಳಂಬವಾಗಿದ್ದು, ಇದೀಗ ಪಂದ್ಯವನ್ನು 50 ಓವರ್‌ಗಳ ಬದಲು ತಲಾ 40 ಓವರ್‌ಗಳಿಗೆ ಇಳಿಸಲಾಗಿದೆ.

ಟೀಮ್ ಇಂಡಿಯಾದಲ್ಲಿ ಇಬ್ಬರು ಪದಾರ್ಪಣೆ

ಟಿ20 ವಿಶ್ವಕಪ್‌ಗಾಗಿ ಅಕ್ಟೋಬರ್ 6 ರ ಗುರುವಾರ ಬೆಳಿಗ್ಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯಾಕ್ಕೆ ತೆರಳಿದೆ. ಹಾಗಾಗಿ ಹಲವು ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಯುವ ಆಟಗಾರರಿಗೆ ಟೀಂ ಇಂಡಿಯಾದ ಬಾಗಿಲು ತೆರೆದಿದ್ದು ಇಬ್ಬರಿಗೆ ಈ ಪಂದ್ಯದಲ್ಲಿ ಪದಾರ್ಪಣೆ ಮಾಡುವ ಅವಕಾಶ ಸಿಕ್ಕಿದೆ. ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಮತ್ತು ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಪಂದ್ಯದಲ್ಲಿ ಬದಲಾವಣೆ

ಇನ್ನು ಪಂದ್ಯದ ಬಗ್ಗೆ ಮಾತನಾಡುವುದಾದರೆ, ಮಳೆಯಿಂದಾಗಿ ಪಂದ್ಯ ಆರಂಭ ತಡವಾದ ಕಾರಣ ಎರಡೂ ಇನಿಂಗ್ಸ್‌ಗಳಿಂದ ತಲಾ 10 ಓವರ್‌ಗಳನ್ನು ಕಡಿತಗೊಳಿಸಲಾಗಿದೆ. ಹೀಗಾಗಿ ಪವರ್‌ಪ್ಲೇನಲ್ಲಿ ಬೌಲರ್​ಗಳ ಬಳಕೆಯಲ್ಲೂ ಬದಲಾವಣೆಗಳನ್ನು ಮಾಡಲಾಗಿದ್ದು, ಮೊದಲ ಪವರ್‌ಪ್ಲೇ ಆರಂಭಿಕ 8 ಓವರ್‌ ಮಾತ್ರ ಇರುತ್ತದೆ. ಅಲ್ಲದೆ 5 ಬೌಲರ್‌ಗಳ ಬದಲಿಗೆ 4 ಬೌಲರ್‌ಗಳಿಗೆ ಮಾತ್ರ ತಲಾ 10 ಓವರ್‌ಗಳನ್ನು ಬೌಲ್ ಮಾಡುವ ಅವಕಾಶ ಸಿಗುತ್ತದೆ. ಹಾಗೆಯೇ ಎರಡನೇ ಪವರ್‌ಪ್ಲೇ 30 ಓವರ್ ಬದಲಿಗೆ 24 ಓವರ್‌ಗಳಾಗಿರುತ್ತದೆ ಮತ್ತು ಕೊನೆಯ ಪವರ್‌ಪ್ಲೇ 10 ಓವರ್ ಬದಲಿಗೆ 8 ಓವರ್‌ಗಳಾಗಿರುತ್ತದೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ಭಾರತ ತಂಡ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್

ದಕ್ಷಿಣ ಆಫ್ರಿಕಾ ತಂಡ: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಯನಮನ್ ಮಲನ್, ಏಡನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪೆರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ ಮತ್ತು ತಬ್ರೇಜ್ ಶಮ್ಸಿ

Published On - 4:02 pm, Thu, 6 October 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?