AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing XI vs SouthAfrica: ಇಬ್ಬರು ಆಲ್​ರೌಂಡರ್​ಗಳು ಅಲಭ್ಯ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

Probable India Playing XI vs SouthAfrica: ಟಿ20 ವಿಶ್ವಕಪ್ ತಂಡದಲ್ಲಿ ಈ ಇಬ್ಬರು ಆಟಗಾರರು ಸ್ಥಾನ ಪಡೆದಿಲ್ಲ. ಹೀಗಾಗಿ ಚುಟುಕು ವಿಶ್ವಕಪ್​ನಲ್ಲಿ ಅವಕಾಶ ಪಡೆದಿರುವ ಆಟಗಾರರೇ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

India Playing XI vs SouthAfrica: ಇಬ್ಬರು ಆಲ್​ರೌಂಡರ್​ಗಳು ಅಲಭ್ಯ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
TV9 Web
| Edited By: |

Updated on: Sep 27, 2022 | 8:32 PM

Share

India vs South Africa 1st T20: ಭಾರತ – ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ಬುಧವಾರದಿಂದ (ಸೆ.28) ಶುರುವಾಗಲಿದೆ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾದಲ್ಲಿದ್ದ ಇಬ್ಬರು ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಹಾರ್ದಿಕ್ ಪಾಂಡ್ಯ ವಿಶ್ರಾಂತಿಯ ಕಾರಣ ತಂಡದಿಂದ ಹೊರಗುಳಿದರೆ, ದೀಪಕ್ ಹೂಡಾ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ ಆಲ್​ರೌಂಡರ್​ಗಳಾದ ಪಾಂಡ್ಯ ಹಾಗೂ ಹೂಡಾ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇವರ ಬದಲಿ ಆಟಗಾರರಾಗಿ ತಂಡಕ್ಕೆ ಶ್ರೇಯಸ್ ಅಯ್ಯರ್ ಹಾಗೂ ಶಹಬಾಜ್ ಅಹ್ಮದ್ ಆಯ್ಕೆಯಾಗಿದ್ದಾರೆ. ಆದರೆ ಈ ಇಬ್ಬರಿಗೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗುವುದು ಅನುಮಾನ.

ಏಕೆಂದರೆ ಟಿ20 ವಿಶ್ವಕಪ್ ತಂಡದಲ್ಲಿ ಈ ಇಬ್ಬರು ಆಟಗಾರರು ಸ್ಥಾನ ಪಡೆದಿಲ್ಲ. ಹೀಗಾಗಿ ಚುಟುಕು ವಿಶ್ವಕಪ್​ನಲ್ಲಿ ಅವಕಾಶ ಪಡೆದಿರುವ ಆಟಗಾರರೇ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ವೇಳೆ ಬೆಂಚ್ ಕಾದಿದ್ದ ರಿಷಭ್ ಪಂತ್​ಗೆ ಈ ಬಾರಿ ಅವಕಾಶ ಸಿಗಲಿದೆ. ಹಾಗೆಯೇ ಆಸೀಸ್ ವಿರುದ್ಧ ದುಬಾರಿಯಾಗಿದ್ದ ಭುವನೇಶ್ವರ್​ ಕುಮಾರ್​ಗೆ ಈ ಸಲ ಚಾನ್ಸ್​ ಸಿಗುವುದು ಅನುಮಾನ. ಏಕೆಂದರೆ ತಂಡಕ್ಕೆ ಎಡಗೈ ವೇಗಿ ಅರ್ಷದೀಪ್ ಸಿಂಗ್ ಆಗಮನವಾಗಿದೆ. ಹೀಗಾಗಿ ಇಬ್ಬರು ಬಲಗೈ ವೇಗಿಗಳು ಹಾಗೂ ಓರ್ವ ಎಡಗೈ ವೇಗಿಯೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯಬಹುದು.

ಅದರಂತೆ ಟೀಮ್ ಇಂಡಿಯಾದ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕ ಸೂರ್ಯಕುಮಾರ್ ಯಾದವ್​ಗೆ ಫಿಕ್ಸ್​. ಇನ್ನು ಐದನೇ ಕ್ರಮಾಂಕದಲ್ಲಿ ಎಡಗೈ ದಾಂಡಿಗನಾಗಿ ರಿಷಭ್ ಪಂತ್ ಅವರನ್ನು ಕಣಕ್ಕಿಳಿಸಬಹುದು. 6ನೇ ಕ್ರಮಾಂಕದಲ್ಲಿ ಫಿನಿಶರ್ ಪಾತ್ರದಲ್ಲಿ ದಿನೇಶ್ ಕಾರ್ತಿಕ್ ಆಡಬಹುದು. ಇನ್ನು 7ನೇ ಕ್ರಮಾಂಕದಲ್ಲಿ ಆಲ್​ರೌಂಡರ್ ಅಕ್ಷರ್ ಪಟೇಲ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಹಾಗೆಯೇ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಹರ್ಷಲ್ ಪಟೇಲ್ ಹಾಗೂ ಅರ್ಷದೀಪ್ ಸಿಂಗ್ ಕಾಣಿಸಿಕೊಳ್ಳಬಹುದು. ಇನ್ನು ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಾಲ್ ಇರಲಿದ್ದಾರೆ. ಅಂದರೆ ಈ ಬಾರಿ ಟೀಮ್ ಇಂಡಿಯಾ ಮೂವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್​ಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್​ ಹೀಗಿರಲಿದೆ.

  1. ರೋಹಿತ್ ಶರ್ಮಾ
  2. ಕೆಎಲ್ ರಾಹುಲ್
  3. ವಿರಾಟ್ ಕೊಹ್ಲಿ
  4. ಸೂರ್ಯಕುಮಾರ್ ಯಾದವ್
  5. ರಿಷಭ್ ಪಂತ್
  6. ದಿನೇಶ್ ಕಾರ್ತಿಕ್
  7. ಅಕ್ಷರ್ ಪಟೇಲ್
  8. ಜಸ್​ಪ್ರೀತ್ ಬುಮ್ರಾ
  9. ಹರ್ಷಲ್ ಪಟೇಲ್
  10. ಅರ್ಷದೀಪ್ ಸಿಂಗ್
  11. ಯುಜ್ವೇಂದ್ರ ಚಹಾಲ್

ಭಾರತ-ಸೌತ್ ಆಫ್ರಿಕಾ ಟಿ20 ಸರಣಿಯ ವೇಳಾಪಟ್ಟಿ ಹೀಗಿದೆ:

  1. ಸೆಪ್ಟೆಂಬರ್ 28- ಮೊದಲ ಟಿ20 ಪಂದ್ಯ (ತಿರುವನಂತಪುರ)
  2. ಅಕ್ಟೋಬರ್ 2- 2ನೇ ಟಿ20 ಪಂದ್ಯ (ಗೌಹಾಟಿ)
  3. ಅಕ್ಟೋಬರ್ 4- 3ನೇ ಟಿ20 ಪಂದ್ಯ (ಇಂದೋರ್)

ಭಾರತ ಟಿ20 ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಶಹಬಾಜ್ ಅಹ್ಮದ್, ಜಸ್​​ಪ್ರೀತ್ ಬುಮ್ರಾ.

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್