Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: 30 ರನ್, 42 ಎಸೆತಗಳಲ್ಲಿ 6 ವಿಕೆಟ್ ಪತನ! ಇಸ್ಪೀಟೆಲೆಗಳಂತೆ ಚದುರಿದ ಭಾರತದ ಬ್ಯಾಟಿಂಗ್

IND vs SA: ಸೆಂಚುರಿಯನ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಭಾರತ ಕ್ರಿಕೆಟ್ ತಂಡ ಉತ್ತಮ ಆರಂಭದ ಹೊರತಾಗಿಯೂ 327 ರನ್‌ಗಳಿಗೆ ಕುಸಿಯಿತು. ಮೂರನೇ ದಿನದಾಟದ ಮೊದಲ ಗಂಟೆಯಲ್ಲಿ 42 ಎಸೆತಗಳಲ್ಲಿ ಆರು ವಿಕೆಟ್ ಕಳೆದುಕೊಂಡಿತು.

IND vs SA: 30 ರನ್, 42 ಎಸೆತಗಳಲ್ಲಿ 6 ವಿಕೆಟ್ ಪತನ! ಇಸ್ಪೀಟೆಲೆಗಳಂತೆ ಚದುರಿದ ಭಾರತದ ಬ್ಯಾಟಿಂಗ್
ಆಫ್ರಿಕಾ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on: Dec 28, 2021 | 3:09 PM

ಸೆಂಚುರಿಯನ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಭಾರತ ಕ್ರಿಕೆಟ್ ತಂಡ ಉತ್ತಮ ಆರಂಭದ ಹೊರತಾಗಿಯೂ 327 ರನ್‌ಗಳಿಗೆ ಕುಸಿಯಿತು. ಮೂರನೇ ದಿನದಾಟದ ಮೊದಲ ಗಂಟೆಯಲ್ಲಿ 42 ಎಸೆತಗಳಲ್ಲಿ ಆರು ವಿಕೆಟ್ ಕಳೆದುಕೊಂಡಿತು. ಮೂರನೇ ದಿನ ಬೆಳಗ್ಗೆ ಭಾರತ 55 ರನ್‌ಗಳಾಗುವಷ್ಟರಲ್ಲಿ ಕೊನೆಯ ಏಳು ವಿಕೆಟ್‌ಗಳನ್ನು ಕಳೆದುಕೊಂಡಿತು. ಟೀಂ ಇಂಡಿಯಾ ಮೂರು ವಿಕೆಟ್‌ಗೆ 272 ರನ್‌ಗಳೊಂದಿಗೆ ಮೂರನೇ ದಿನದ ಆಟವನ್ನು ಪ್ರಾರಂಭಿಸಿತು. ಆದರೆ ಅವರ ಮಧ್ಯಮ ಕ್ರಮಾಂಕವು ಲುಂಗಿ ಎನ್‌ಗಿಡಿ ಮತ್ತು ಕಗಿಸೊ ರಬಾಡ ಅವರ ಮುಂದೆ ಮಂಡಿಯೂರಿತು. ಇದಕ್ಕೂ ಮುನ್ನ ದೊಡ್ಡ ಮೊತ್ತದ ನಿರೀಕ್ಷೆ ಹುಸಿಯಾಯಿತು. ಈ ಟೆಸ್ಟ್ ಪಂದ್ಯದ ಎರಡನೇ ದಿನ ಮಳೆಯಿಂದಾಗಿ ವಾಶ್ ಔಟ್ ಆಗಿದ್ದು, ಒಂದೇ ಒಂದು ಎಸೆತವನ್ನು ಎಸೆಯಲಾಗಲಿಲ್ಲ.

ಶತಕವೀರ ಕೆಎಲ್ ರಾಹುಲ್ ರೂಪದಲ್ಲಿ ಭಾರತ ಮೂರನೇ ದಿನ ಮೊದಲ ವಿಕೆಟ್ ಕಳೆದುಕೊಂಡಿತು. 123 ರನ್ ಗಳಿಸಿ ನಾಲ್ಕನೇ ವಿಕೆಟ್‌ಗೆ ರಬಾಡಗೆ ಬಲಿಯಾದರು. ಅವರು ತಮ್ಮ ಮೊದಲ ದಿನದ ಸ್ಕೋರ್‌ಗೆ ಒಂದೇ ಒಂದು ರನ್ ಸೇರಿಸಲು ಸಾಧ್ಯವಾಗಲಿಲ್ಲ. ಅವರ ನಿರ್ಗಮನದ ನಂತರ, ವಿಕೆಟ್‌ಗಳ ಸಾಲು ಕಂಡುಬಂದಿತು. ನಂತರ ಅಜಿಂಕ್ಯ ರಹಾನೆ ಕೂಡ ಮರಳಿದರು. 48 ರನ್ ಗಳಿಸಿದ್ದಾಗ ರಹಾನೆ ಲುಂಗಿ ಎನ್‌ಗಿಡಿ ಎಸೆತಕ್ಕೆ ಕ್ಯಾಚ್ ನೀಡಿದರು. ರಿಷಬ್ ಪಂತ್ (8), ರವಿಚಂದ್ರನ್ ಅಶ್ವಿನ್ (4), ಶಾರ್ದೂಲ್ ಠಾಕೂರ್ (4), ಮೊಹಮ್ಮದ್ ಶಮಿ (8) ರನ್ ಗಳಿಸಿದ ನಂತರ ಅಗ್ಗವಾಗಿ ಮರಳಿದರು. ಇದರಿಂದಾಗಿ ಸ್ಕೋರ್ 9 ವಿಕೆಟ್​ಗೆ 308 ರನ್ ಆಯಿತು.

ಎನ್‌ಗಿಡಿ ಮಾರಕ ಲುಂಗಿ ಎನ್‌ಗಿಡಿ ರಹಾನೆ, ಪಂತ್ ಮತ್ತು ಶಮಿಯನ್ನು ಔಟ್​ ಮಾಡಿದರು. ರಾಹುಲ್, ಅಶ್ವಿನ್ ಮತ್ತು ಠಾಕೂರ್ ಅವರ ವಿಕೆಟ್‌ಗಳನ್ನು ರಬಾಡ ಪಡೆದರು. ಮೂರನೇ ದಿನ ಬಿದ್ದ ಆರು ವಿಕೆಟ್‌ಗಳಲ್ಲಿ ನಾಲ್ಕು ಸ್ಟಂಪ್‌ಗಳ ಹಿಂದೆ ಕ್ಯಾಚ್‌ಗಳ ಮೂಲಕ ಬಿದ್ದವು. ಈ ಎಲ್ಲಾ ಕ್ಯಾಚ್‌ಗಳನ್ನು ವಿಕೆಟ್‌ಕೀಪರ್ ಕ್ವಿಂಟನ್ ಡಿ ಕಾಕ್ ಹಿಡಿದಿದ್ದರು. ಲುಂಗಿ ಎನ್‌ಗಿಡಿ ತನ್ನ ಟೆಸ್ಟ್ ವೃತ್ತಿಜೀವನದಲ್ಲಿ ಮೂರನೇ ಬಾರಿಗೆ ಇನ್ನಿಂಗ್ಸ್‌ನಲ್ಲಿ ಐದು ಮತ್ತು ಅದಕ್ಕಿಂತ ಹೆಚ್ಚಿನ ವಿಕೆಟ್‌ಗಳನ್ನು ಪಡೆದರು. ಅವರು ಎರಡನೇ ಬಾರಿಗೆ ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್ ಪಡೆದರು. ಈ ಹಿಂದೆ 2018ರಲ್ಲಿ ಭಾರತದ ವಿರುದ್ಧವೇ ಈ ಸಾಧನೆ ಮಾಡಿದ್ದರು.

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ