AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕೊಹ್ಲಿ ಔಟ್, ಕನ್ನಡಿಗ ರಾಹುಲ್​ಗೆ ನಾಯಕತ್ವ! ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ

IND vs SA: ಎರಡನೇ ಟೆಸ್ಟ್ ಪಂದ್ಯದಿಂದ ತಂಡದ ನಾಯಕ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಅವರ ಬದಲಿಗೆ ಕೆಎಲ್ ರಾಹುಲ್ ಅವರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಬೆನ್ನುಮೂಳೆಯ ಸೆಳೆತದಿಂದ ವಿರಾಟ್ ಕೊಹ್ಲಿ ಈ ಟೆಸ್ಟ್‌ನಲ್ಲಿ ಆಡುತ್ತಿಲ್ಲ ಎಂದು ಕೆಎಲ್ ರಾಹುಲ್ ಹೇಳಿದ್ದಾರೆ.

IND vs SA: ಕೊಹ್ಲಿ ಔಟ್, ಕನ್ನಡಿಗ ರಾಹುಲ್​ಗೆ ನಾಯಕತ್ವ! ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ
ಭಾರತ ತಂಡ
TV9 Web
| Updated By: ಪೃಥ್ವಿಶಂಕರ|

Updated on: Jan 03, 2022 | 1:25 PM

Share

ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗುತ್ತಿವೆ. ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಭಾರತ ತಂಡದಲ್ಲಿ ದೊಡ್ಡ ಬದಲಾವಣೆಯಾಗಿದೆ. ಇಂಜುರಿ ಸಮಸ್ಯೆಯಿಂದಾಗಿ ನಿಯಮಿತ ನಾಯಕ ವಿರಾಟ್ ಕೊಹ್ಲಿ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಕೆಎಲ್ ರಾಹುಲ್ ನಾಯಕರಾಗಿದ್ದಾರೆ. ಭಾರತದ ಪ್ಲೇಯಿಂಗ್ XI ನಲ್ಲಿ ಕೊಹ್ಲಿ ಬದಲಿಗೆ ಹನುಮ ವಿಹಾರಿ ಬಂದಿದ್ದಾರೆ. ಭಾರತ ಎರಡನೇ ಟೆಸ್ಟ್‌ಗೆ ಒಂದೇ ಒಂದು ಬದಲಾವಣೆ ಮಾಡಿದೆ. ಭಾರತ ಸತತ ಎರಡನೇ ಟೆಸ್ಟ್‌ನಲ್ಲಿ ಟಾಸ್ ಗೆದ್ದಿದೆ. ಸೆಂಚುರಿಯನ್​ನಲ್ಲೂ ಭಾರತ ತಂಡದ ನಾಯಕನ ಪರವಾಗಿ ನಾಣ್ಯ ಬಿದ್ದಿತ್ತು.

ಆತಿಥೇಯ ದಕ್ಷಿಣ ಆಫ್ರಿಕಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಕ್ವಿಂಟನ್ ಡಿ ಕಾಕ್ ಬದಲಿಗೆ ಕಾರ್ಲ್ ವ್ರೆನ್ ಮತ್ತು ವೈನ್ ಮುಲ್ಡರ್ ಬದಲಿಗೆ ಡುವಾನ್ ಆಲಿವರ್ ಬಂದಿದ್ದಾರೆ. ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ ನಂತರ ಡಿ ಕಾಕ್ ನಿವೃತ್ತರಾದರು. ಇದರಿಂದಾಗಿ ಆತಿಥೇಯ ತಂಡ ಬದಲಾವಣೆ ಮಾಡಬೇಕಾಯಿತು. ವಾರೆನ್ ಇದುವರೆಗೆ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅದೇ ಸಮಯದಲ್ಲಿ, ಬೌಲಿಂಗ್ ಅನ್ನು ಬಲಪಡಿಸಲು ಡುವಾನ್ ಒಲಿವರ್ ಅನ್ನು ತೆಗೆದುಕೊಳ್ಳಲಾಗಿದೆ. ಆಲಿವರ್ ಈ ಟೆಸ್ಟ್ ಮೂಲಕ ಸುಮಾರು ಎರಡು ವರ್ಷಗಳ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುತ್ತಿದ್ದಾರೆ. ಅವರು 2019 ರಲ್ಲಿ ಕೊನೆಯ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡಿದ್ದರು.

ಜೋಹಾನ್ಸ್‌ಬರ್ಗ್‌ನಲ್ಲಿ ಭಾರತ ಎಂದಿಗೂ ಸೋತಿಲ್ಲ ಜೋಹಾನ್ಸ್‌ಬರ್ಗ್ ಮೈದಾನದಲ್ಲಿ ಭಾರತ ಇದುವರೆಗೆ ಯಾವುದೇ ಟೆಸ್ಟ್ ಪಂದ್ಯವನ್ನು ಸೋತಿಲ್ಲ. ಇಲ್ಲಿ ಐದು ಟೆಸ್ಟ್‌ಗಳನ್ನು ಆಡಿರುವ ಭಾರತ ಎರಡರಲ್ಲಿ ಗೆದ್ದು ಮೂರರಲ್ಲಿ ಡ್ರಾ ಮಾಡಿಕೊಂಡಿದ್ದಾರೆ. ಸೆಂಚೂರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ ಏಕಪಕ್ಷೀಯವಾಗಿ ಗೆದ್ದಿತ್ತು. ಪಂದ್ಯವನ್ನು 113 ರನ್‌ಗಳಿಂದ ಗೆದ್ದು ಮೂರು ಟೆಸ್ಟ್‌ಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸೆಂಚುರಿಯನ್‌ನಲ್ಲಿ ದಕ್ಷಿಣ ಆಫ್ರಿಕಾದ ಸತತ ಗೆಲುವಿನ ಓಟಕ್ಕೆ ಭಾರತ ಮೊದಲ ಟೆಸ್ಟ್‌ನಲ್ಲಿ ಗೆಲುವಿನೊಂದಿಗೆ ಅಂತ್ಯಗೊಳಿಸಿದೆ.

ಭಾರತದ ಆಡುವ XI ಇಂತಿದೆ ಕೆಎಲ್ ರಾಹುಲ್ (ನಾಯಕ), ಹನುಮ ವಿಹಾರಿ, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಆರ್ ಅಶ್ವಿನ್.

ದಕ್ಷಿಣ ಆಫ್ರಿಕಾದ ಆಡುವ XI ಇಂತಿದೆ ಡೀನ್ ಎಲ್ಗರ್ (ನಾಯಕ), ಏಡನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ಟೆಂಬಾ ಬವುಮಾ, ರೆಸಿ ವ್ಯಾನ್ ಡೆರ್ ಡ್ಯುಸೆನ್, ಕಾರ್ಲ್ ರೆನ್, ಕಗಿಸೊ ರಬಾಡ, ಮಾರ್ಕೊ ಯಾನ್ಸನ್, ಲುಂಗಿ ಎನ್‌ಗಿಡಿ, ಡುವಾನ್ ಒಲಿವರ್, ಕೇಶವ್ ಮಹಾರಾಜ್.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?