AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಅರ್ಷದೀಪ್​ಗೆ 5, ಆವೇಶ್​ಗೆ 4 ವಿಕೆಟ್; ಭಾರತಕ್ಕೆ 117 ರನ್​ ಟಾರ್ಗೆಟ್

IND vs SA: ಭಾರತ ತಂಡ ಮೊದಲು ಬೌಲಿಂಗ್ ಮಾಡಿ ಆತಿಥೇಯ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿ ಕೇವಲ 116 ರನ್‌ಗಳಿಗೆ ಆಲೌಟ್ ಮಾಡಿದೆ. ಆಫ್ರಿಕಾ ಪರ ಆಲ್​​ರೌಂಡರ್ ಆಂಡಿಲೆ ಫೆಹ್ಲುಕ್ವಾಯೊ ಗರಿಷ್ಠ 33 ರನ್ ಸಿಡಿಸಿದರೆ, ಭಾರತದ ಪರ ಮಿಂಚಿದ ವೇಗಿ ಅರ್ಷದೀಪ್ ಸಿಂಗ್ ವಿಕೆಟ್ ಪಡೆದರು.

IND vs SA: ಅರ್ಷದೀಪ್​ಗೆ 5, ಆವೇಶ್​ಗೆ 4 ವಿಕೆಟ್; ಭಾರತಕ್ಕೆ 117 ರನ್​ ಟಾರ್ಗೆಟ್
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Dec 17, 2023 | 4:19 PM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಟಿ20 ಸರಣಿ ಡ್ರಾ ಆದ ಬಳಿಕ ಇದೀಗ ಏಕದಿನ ಸರಣಿ ಆರಂಭವಾಗಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಜೋಹಾನ್ಸ್‌ಬರ್ಗ್‌ನಲ್ಲಿ (Johannesburg) ನಡೆಯುತ್ತಿದೆ. ದಕ್ಷಿಣ ಆಫ್ರಿಕಾದ ನಾಯಕ ಏಡೆನ್ ಮಾರ್ಕ್ರಾಮ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಭಾರತ ತಂಡ ಮೊದಲು ಬೌಲಿಂಗ್ ಮಾಡಿ ಆತಿಥೇಯ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿ ಕೇವಲ 116 ರನ್‌ಗಳಿಗೆ ಆಲೌಟ್ ಮಾಡಿದೆ. ಆಫ್ರಿಕಾ ಪರ ಆಲ್​​ರೌಂಡರ್ ಆಂಡಿಲೆ ಫೆಹ್ಲುಕ್ವಾಯೊ ಗರಿಷ್ಠ 33 ರನ್ ಸಿಡಿಸಿದರೆ, ಭಾರತದ ಪರ ಮಿಂಚಿದ ವೇಗಿ ಅರ್ಷದೀಪ್ ಸಿಂಗ್ (Arshdeep Singh) ವಿಕೆಟ್ ಪಡೆದರು. ಹಾಗೆಯೇ ಇವರಿಗೆ ಸಾಥ್ ನೀಡಿದ ಮತ್ತೊಬ್ಬ ವೇಗಿ ಆವೇಶ್ ಖಾನ್ (Avesh Khan) 4 ವಿಕೆಟ್​ ಪಡೆದು ಮಿಂಚಿದರು.

ಆಫ್ರಿಕಾ ತಂಡದ ಕಳಪೆ ಆರಂಭ

ಭಾರತದ ಬೌಲರ್‌ಗಳು ಆರಂಭದಿಂದಲೂ ಅದ್ಭುತ ಪ್ರದರ್ಶನ ನೀಡಿದರು. ಅರ್ಷದೀಪ್ ಸಿಂಗ್ ಮತ್ತು ಆವೇಶ್ ಖಾನ್ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ಆರಂಭಿಸಿದರು. ಹೀಗಾಗಿ ಆತಿಥೇಯ ತಂಡ 58 ರನ್ ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ತಮ್ಮ ಮೊದಲ ಓವರ್‌ಗಳಲ್ಲಿ 2 ಪ್ರಮುಖ ವಿಕೆಟ್‌ಗಳನ್ನು ಪಡೆದರು.

ಆರಂಭಿಕ ಆಟಗಾರ ರಿಜಾ ಹೆಂಡ್ರಿಕ್ಸ್ ಅವರನ್ನು ಅರ್ಷದೀಪ್ ಬೇಟೆಯಾಡುವ ಮೂಲಕ ತಂಡಕ್ಕೆ ಮೊದಲ ಯಶಸ್ಸನು ತಂದುಕೊಟ್ಟರು. ಹೆಡ್ರಿಕ್ಸ್ ಶೂನ್ಯ ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಮುಂದಿನ ಎಸೆತದಲ್ಲಿ ಡುಸೆನ್ ಗೋಲ್ಡನ್ ಡಕ್‌ ಆಗಿ ಪೆವಿಲಿಯನ್​ಗೆ ಮರಳಿದರು. ಹೀಗೆ ಅರ್ಷದೀಪ್ ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಪಡೆದರು. ಹೀಗಾಗಿ 3 ರನ್ ಗಳಿಸುವಷ್ಟರಲ್ಲಿ ಆತಿಥೇಯ ತಂಡ ಪಂದ್ಯದ ಎರಡನೇ ಓವರ್​ನಲ್ಲಿ 2 ವಿಕೆಟ್ ಕಳೆದುಕೊಂಡಿತು.

IND vs SA 1st ODI Live Score: ಭಾರತಕ್ಕೆ 117 ರನ್ ಟಾರ್ಗೆಟ್

ಆಫ್ರಿಕಾ ತಂಡದ ಪೆವಿಲಿಯನ್‌ ಪರೇಡ್

ದಕ್ಷಿಣ ಆಫ್ರಿಕಾ 42 ರನ್‌ಗಳಿದ್ದಾಗ ಮೂರನೇ ವಿಕೆಟ್‌ ರೂಪದಲ್ಲಿ ಟೋನಿ ಅವರನ್ನು ಕಳೆದುಕೊಂಡಿತು. ಇವರನ್ನು ಸಹ ಅರ್ಷದೀಪ್ ಔಟ್ ಮಾಡಿದರು. ತಂಡದ ಪರ ಆರಂಭಿಕ ಹೋರಾಟ ನೀಡಿದ ಟೋನಿ 22 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 2 ಬೌಂಡರಿಗಳ ನೆರವಿನಿಂದ 28 ರನ್ ಗಳಿಸಿದರು. ಟೋನಿ ಬಳಿಕ ಆಫ್ರಿಕಾ ತಂಡದ ಪೆವಿಲಿಯನ್‌ ಪರೇಡ್ ಆರಂಭವಾಯಿತು. ಹೆನ್ರಿಕ್ ಕ್ಲಾಸೆನ್ 6 ರನ್​ಗಳಿಗೆ ನಾಲ್ಕನೇ ವಿಕೆಟ್ ಆಗಿ ವಿಕೆಟ್ ಒಪ್ಪಿಸಿದರೆ, ನಾಯಕ ಏಡನ್ ಮಾರ್ಕ್ರಾಮ್ 12 ರನ್​ಗಳಿಗೆ ಸುಸ್ತಾದರು. ವಿಯಾನ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. 7ನೇ ವಿಕೆಟ್ ಆಗಿ ಡೇವಿಡ್ ಮಿಲ್ಲರ್ ಕೇವಲ 2 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಕೇಶವ್ ಮಹಾರಾಜ್ 8ನೇ ವಿಕೆಟ್ ಆಗಿ ಆವೇಶ್​ ಖಾನ್​ಗೆ ಬಲಿಯಾದರು.

ಅರ್ಷದೀಪ್- ಆವೇಶ್ ಶೈನ್

ಈ ಪಂದ್ಯದಲ್ಲಿ ಅರ್ಷದೀಪ್ ಆರಂಭದಲ್ಲಿ ಒಂದರ ಹಿಂದೆ ಒಂದರಂತೆ 4 ವಿಕೆಟ್ ಕಬಳಿಸಿದರು. ಹೀಗಾಗಿ ಅಗ್ರ ಕ್ರಮಾಂಕವನ್ನು ಹೊರ ಹಾಕುವ ಮೂಲಕ ಭಾರತ ತಂಡದ ಕೆಲಸವನ್ನು ಸುಲಭಗೊಳಿಸಿದರು. ಬಳಿಕ ಆವೇಶ್ ಖಾನ್ ಬೆನ್ನೆಲುಬಾಗಿ ಬೌಲಿಂಗ್ ಮಾಡಿ 4 ವಿಕೆಟ್ ಪಡೆದರು. ಅಂದಹಾಗೆ, ಇಬ್ಬರು ಬೌಲರ್‌ಗಳು ಮಾತ್ರ ದಕ್ಷಿಣ ಆಫ್ರಿಕಾದ ಎಲ್ಲಾ ಬ್ಯಾಟರ್​ಗಳನ್ನು ಪೆವಿಲಿಯನ್​ನಲ್ಲಿ ಕೂರುವಂತೆ ಮಾಡಿದರು. ಕೊನೆಯಲ್ಲಿ ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Sun, 17 December 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ