AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ; ಸುಲಭ ಕ್ಯಾಚ್ ಕೈಚೆಲ್ಲಿದ ಪೂಜಾರ! ಸೋಲಿನತ್ತ ಭಾರತ

IND vs SA: ಚೆಂಡು ನೇರವಾಗಿ ಮೊದಲ ಸ್ಲಿಪ್‌ನಲ್ಲಿ ಪೋಸ್ಟ್ ಮಾಡಿದ ಚೇತೇಶ್ವರ ಪೂಜಾರ ಕಡೆ ಹೋಯಿತು. ಭಾರತ ತಂಡ ಹಾಗೂ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಯಿತು.ಆದರೆ ಮರು ಸೆಕೆಂಡ್‌ನಲ್ಲಿ ಚೆಂಡು ನೇರವಾಗಿ ಪೂಜಾರ ಕೈಗೆ ಹೋಗಿ ಕೆಳಗೆ ಬಿದ್ದಿತು.

IND vs SA: ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ; ಸುಲಭ ಕ್ಯಾಚ್ ಕೈಚೆಲ್ಲಿದ ಪೂಜಾರ! ಸೋಲಿನತ್ತ ಭಾರತ
ಸುಲಭ ಕ್ಯಾಚ್ ಕೈಚೆಲ್ಲಿದ ಪೂಜಾರ
TV9 Web
| Edited By: |

Updated on: Jan 14, 2022 | 5:10 PM

Share

ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಟೀಂ ಇಂಡಿಯಾದ ಕನಸು ಹಾಗೂ ಭರವಸೆ ಮತ್ತೊಮ್ಮೆ ಭಗ್ನಗೊಳ್ಳುವ ಲಕ್ಷಣ ಕಾಣುತ್ತಿದೆ. ಕೇಪ್ ಟೌನ್ ಟೆಸ್ಟ್‌ನಲ್ಲಿ ನಡೆದ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನದಿಂದಾಗಿ, ಟೀಮ್ ಇಂಡಿಯಾ ಸರಣಿ ಗೆಲ್ಲುವ ದೊಡ್ಡ ಅವಕಾಶವನ್ನು ಕಳೆದುಕೊಂಡಿದೆ. ದಕ್ಷಿಣ ಆಫ್ರಿಕಾ ಎದುರು ಭಾರತ ಕೇವಲ 212 ರನ್​ಗಳ ಗೆಲುವಿನ ಗುರಿ ನೀಡಿತ್ತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ಮೂರನೇ ದಿನವೇ 2 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿತು. ನಾಲ್ಕನೇ ದಿನ ಭಾರತಕ್ಕೆ 8 ವಿಕೆಟ್‌ಗಳ ಅಗತ್ಯವಿದ್ದು, ಇದಕ್ಕಾಗಿ ಆರಂಭದಿಂದಲೇ ವಿಕೆಟ್‌ಗಳನ್ನು ಕಬಳಿಸುವುದು ಅನಿವಾರ್ಯವಾಗಿತ್ತು. ಆದರೆ ತಂಡದ ಬ್ಯಾಟಿಂಗ್‌ನಂತೆ ಫೀಲ್ಡಿಂಗ್ ಕೂಡ ಈ ಬಾರಿ ಬೌಲರ್‌ಗಳ ಶ್ರಮವನ್ನು ಕೆಡಿಸಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಭಾರತದ ಅನುಭವಿ ಆಟಗಾರ ಚೇತೇಶ್ವರ ಪೂಜಾರ ಸರಳ ಕ್ಯಾಚ್ ಕೈಬಿಡುವ ಮೂಲಕ ಭಾರತದ ಭರವಸೆಗೆ ದೊಡ್ಡ ಪೆಟ್ಟು ನೀಡಿದರು.

ದಕ್ಷಿಣ ಆಫ್ರಿಕಾದ ಮೊದಲ ಇನ್ನಿಂಗ್ಸ್‌ನಂತೆ, ಕೀಗನ್ ಪೀಟರ್ಸನ್ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಮುನ್ನಡೆ ಸಾಧಿಸಿದರು. ಮೂರನೇ ದಿನದ ಅಂತ್ಯದಲ್ಲಿ ನಾಯಕ ಡೀನ್ ಎಲ್ಗರ್ ಅವರೊಂದಿಗೆ ಉತ್ತಮ ಜೊತೆಯಾಟದೊಂದಿಗೆ ಪೀಟರ್ಸನ್ ಮೊದಲು ಪಂದ್ಯದ ಮೇಲಿನ ಹಿಡಿತವನ್ನು ಬಲಪಡಿಸಿದರು ಮತ್ತು ನಂತರ ನಾಲ್ಕನೇ ದಿನದ ಆರಂಭದಲ್ಲಿ ಪಂದ್ಯದಲ್ಲಿ ತಮ್ಮ ಎರಡನೇ ಅರ್ಧಶತಕವನ್ನು ಪೂರ್ಣಗೊಳಿಸಿದರು. ಇಂತಹ ಪರಿಸ್ಥಿತಿಯಲ್ಲಿ ಭಾರತಕ್ಕೆ ಪೀಟರ್ಸನ್ ವಿಕೆಟ್ ಅತ್ಯಗತ್ಯವಾಗಿತ್ತು. ಹಲವು ಕ್ಲೋಸ್ ಪ್ರಕರಣಗಳ ನಂತರ, ಇನಿಂಗ್ಸ್‌ನ 40 ನೇ ಓವರ್‌ನಲ್ಲಿ ಅಂತಹ ಒಂದು ಅವಕಾಶ ಬಂದಿತು.

ಸುಲಭ ಅವಕಾಶವನ್ನು ಪೂಜಾರ ಕೈಚೆಲ್ಲಿದರು ಪೀಟರ್ಸನ್​ಗೆ ನಿರಂತರವಾಗಿ ಕಾಟ ಕೊಡುತ್ತಿದ್ದ ಬುಮ್ರಾ, ಅಂತಿಮವಾಗಿ ಈ ಓವರ್‌ನ ನಾಲ್ಕನೇ ಎಸೆತದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್‌ನಿಂದ ಕ್ಯಾಚಿಂಗ್ ಅವಕಾಶ ಸೃಷ್ಟಿಸಿದರು. ಚೆಂಡು ನೇರವಾಗಿ ಮೊದಲ ಸ್ಲಿಪ್‌ನಲ್ಲಿ ಪೋಸ್ಟ್ ಮಾಡಿದ ಚೇತೇಶ್ವರ ಪೂಜಾರ ಕಡೆ ಹೋಯಿತು. ಭಾರತ ತಂಡ ಹಾಗೂ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಯಿತು.ಆದರೆ ಮರು ಸೆಕೆಂಡ್‌ನಲ್ಲಿ ಚೆಂಡು ನೇರವಾಗಿ ಪೂಜಾರ ಕೈಗೆ ಹೋಗಿ ಕೆಳಗೆ ಬಿದ್ದಿತು. ಪೂಜಾರ ಮಾಡಿದ ಈ ದೊಡ್ಡ ತಪ್ಪು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಬುಮ್ರಾ ಸೇರಿದಂತೆ ಟೀಂ ಇಂಡಿಯಾದ ಯಾವುದೇ ಆಟಗಾರರು ಒಂದು ಕ್ಷಣ ದಿಗ್ಭ್ರಮೆಗೊಂಡರು ಮತ್ತು ಎಲ್ಲರ ಮುಖದಲ್ಲಿ ಹತಾಶೆ ಎದ್ದು ಕಾಣುತ್ತಿತ್ತು.

ಪೀಟರ್ಸನ್-ಡಸ್ಸೆನ್ ಅರ್ಧಶತಕದ ಜೊತೆಯಾಟ ಪೀಟರ್ಸನ್ ಈ ಕ್ಯಾಚ್ ನೀಡಿದಾಗ, ಅವರು 59 ರನ್‌ಗಳಲ್ಲಿ ಆಡುತ್ತಿದ್ದರು ಮತ್ತು ದಕ್ಷಿಣ ಆಫ್ರಿಕಾದ ಸ್ಕೋರ್ 126 ರನ್ ಆಗಿತ್ತು. ಆಗ ದಕ್ಷಿಣ ಆಫ್ರಿಕಾಕ್ಕೆ 86 ರನ್‌ಗಳ ಅಗತ್ಯವಿದ್ದು, ಭಾರತಕ್ಕೆ ಮೂರನೇ ವಿಕೆಟ್ ಸಿಗುತ್ತಿತ್ತು. ಆದರೆ ಪೂಜಾರ ದೊಡ್ಡ ತಪ್ಪು ಮಾಡಿದರು ಮತ್ತು ಪೀಟರ್ಸನ್ ಅದರ ಲಾಭವನ್ನು ಪಡೆದರು ಮತ್ತು ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅವರೊಂದಿಗೆ ಮೂರನೇ ವಿಕೆಟ್ಗೆ ಅರ್ಧಶತಕದ ಜೊತೆಯಾಟವನ್ನು ಮಾಡಿದರು.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​